AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾಗೆ ಯಾರ ಅವಶ್ಯಕತೆಯಿದೆ ಎಂದು ತಿಳಿಸಿದ ಇರ್ಫಾನ್ ಪಠಾಣ್

Team India: ಆಯ್ಕೆ ಸಮಿತಿಯ ಮುಂದೆ ಅನೇಕ ಆಯ್ಕೆಗಳಿರಬಹುದು. ಆದರೆ ಅವರಿಗೆ ಅನುಭವದ ಕೊರತೆಯಿದೆ. ದೊಡ್ಡ ಟೂರ್ನಿಗಳಲ್ಲಿ ಅನುಭವಕ್ಕೆ ಮಣೆಹಾಕಬೇಕು.

Team India: ಟೀಮ್ ಇಂಡಿಯಾಗೆ ಯಾರ ಅವಶ್ಯಕತೆಯಿದೆ ಎಂದು ತಿಳಿಸಿದ ಇರ್ಫಾನ್ ಪಠಾಣ್
Irfan Pathan
TV9 Web
| Edited By: |

Updated on: Sep 08, 2022 | 1:55 PM

Share

ನೀರಸ ಪ್ರದರ್ಶನದೊಂದಿಗೆ ಈ ಬಾರಿಯ ಏಷ್ಯಾಕಪ್ ಗೆಲ್ಲುವ ಟೀಮ್ ಇಂಡಿಯಾದ ಕನಸು ಕಮರಿದೆ. ಇಂತಹದೊಂದು ಹೀನಾಯ ಪ್ರದರ್ಶನಕ್ಕೆ ಟೀಮ್ ಇಂಡಿಯಾದ ಆಯ್ಕೆಯೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಅಂದರೆ ಕಳಪೆ ಟೀಮ್ ಅನ್ನು ಆಯ್ಕೆ ಮಾಡಿದ್ದರಿಂದ ಸಮತೋಲನದಿಂದ ಕೂಡಿದ ಪ್ಲೇಯಿಂಗ್ ಇಲೆವೆನ್​ ರೂಪಿಸಲು ಸಾಧ್ಯವಾಗಿಲ್ಲ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಮತ್ತೊಂದೆಡೆ ಟೀಮ್ ಇಂಡಿಯಾದ ಈ ನಿರಾಶದಾಯಕ ಪ್ರದರ್ಶನಕ್ಕೆ ಮುಖ್ಯ ಕಾರಣ ವೇಗದ ಬೌಲರ್​ಗಳ ಕೊರತೆ ಎಂಬ ಅಭಿಪ್ರಾಯವನ್ನು ಭಾರತ ತಂಡದ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್ ಮುಂದಿಟ್ಟಿದ್ದಾರೆ.

ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಮೂವರು ವೇಗದ ಬೌಲರ್‌ಗಳೊಂದಿಗೆ ಕಣಕ್ಕಿಳಿದಿದತ್ತು. ಆದರೆ ಸೂಪರ್-4 ಹಂತದಲ್ಲಿ ರೋಹಿತ್ ಶರ್ಮಾ ಇಬ್ಬರು ಸ್ಪೆಷಲಿಸ್ಟ್ ಬೌಲರ್‌ಗಳು ಮತ್ತು ಆಲ್‌ರೌಂಡರ್‌ಗೆ ಆದ್ಯತೆ ನೀಡಿದ್ದರು. ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ಮತ್ತು ಅರ್ಷದೀಪ್ ಸಿಂಗ್ ಸೂಪರ್-4 ಹಂತದಲ್ಲಿ ಪರಿಣಾಮಕಾರಿಯಾಗಿರಲಿಲ್ಲ. ಉತ್ತಮವಾಗಿ ಬೌಲಿಂಗ್ ಮಾಡಿದ್ದರೂ ಹೆಚ್ಚಿನ ರನ್​ ಬಿಟ್ಟುಕೊಟ್ಟಿದ್ದರು. ಅದರಲ್ಲೂ ಸೂಪರ್​-4 ಹಂತದ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾದ ಬೌಲರ್‌ಗಳು ಪವರ್‌ಪ್ಲೇಯ ಮೊದಲ ಆರು ಓವರ್‌ಗಳಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು.

ಇದನ್ನೇ ಪ್ರಸ್ತಾಪಿಸಿರುವ ಇರ್ಫಾನ್ ಪಠಾಣ್, ಟೀಮ್ ಇಂಡಿಯಾದಲ್ಲಿ ಉತ್ತಮ ಗುಣಮಟ್ಟದ ವೇಗದ ಬೌಲರ್​ಗಳ ಕೊರತೆಯಿದೆ. ನನ್ನ ಪ್ರಕಾರ ತಂಡದಲ್ಲಿ ಮೊಹಮ್ಮದ್ ಶಮಿಗೆ ಸ್ಥಾನ ನೀಡಬೇಕಿತ್ತು. ಏಕೆಂದರೆ ಶಮಿ ಹೊಸ ಚೆಂಡಿನಲ್ಲಿ ವಿಕೆಟ್ ಕಬಳಿಸುವುದರಲ್ಲಿ ನಿಪುಣರು. ಅವರನ್ನು ಆಯ್ಕೆ ಮಾಡದೇ ಟೀಮ್ ಇಂಡಿಯಾ ತಪ್ಪು ಮಾಡಿತು ಎಂದು ಪಠಾಣ್ ತಿಳಿಸಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಟೀಮ್ ಇಂಡಿಯಾ 6ನೇ ಬೌಲರ್​ನ್ನೇ ಆಯ್ಕೆ ಮಾಡಿರಲಿಲ್ಲ. ಐವರು ಬೌಲರ್‌ಗಳಿಂದ ನಿರೀಕ್ಷಿತ ಫಲಿತಾಂಶ ಸಿಗಲಿಲ್ಲ. ಇದೀಗ ಶಮಿಯನ್ನು ವಿಶ್ವಕಪ್ ತಂಡಕ್ಕೆ ಸೇರಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ನೀವು ಹೊಸ ಚೆಂಡನಲ್ಲಿ ಬೌಲ್ ಮಾಡುವ ವೇಗಿಯನ್ನು ಹುಡುಕುತ್ತಿದ್ದ, ಮೊಹಮ್ಮದ್ ಶಮಿಗಿಂತ ಉತ್ತಮ ಆಯ್ಕೆ ಇನ್ನೊಂದಿಲ್ಲ ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

ಆಯ್ಕೆ ಸಮಿತಿಯ ಮುಂದೆ ಅನೇಕ ಆಯ್ಕೆಗಳಿರಬಹುದು. ಆದರೆ ಅವರಿಗೆ ಅನುಭವದ ಕೊರತೆಯಿದೆ. ದೊಡ್ಡ ಟೂರ್ನಿಗಳಲ್ಲಿ ಅನುಭವಕ್ಕೆ ಮಣೆಹಾಕಬೇಕು. ಅನುಭವ ಮತ್ತು ಫಾರ್ಮ್‌ನಲ್ಲಿರುವ ಮೊಹಮ್ಮದ್ ಶಮಿ ಟಿ20 ವಿಶ್ವಕಪ್​ಗೆ ನನ್ನ ಪ್ರಕಾರ ಉತ್ತಮ ಆಯ್ಕೆ ಎಂದು ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟಿದ್ದಾರೆ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?