AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾನ್ಯ ಬುದ್ಧಿ ಇಲ್ವಾ? ಪಂತ್ ವಿರುದ್ಧ ಮಾಜಿ ಕ್ರಿಕೆಟಿಗನ ಆಕ್ರೋಶ

Sri Lanka vs India, 1st Test: ಗಾಲೆಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಪರ ದೇವದತ್ ಪಡಿಕ್ಕಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಭಾರತ ತಂಡವು ಎರಡನೇ ದಿನದಾಟದ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 460 ರನ್ ಕಲೆಹಾಕಿದೆ.

ಸಾಮಾನ್ಯ ಬುದ್ಧಿ ಇಲ್ವಾ? ಪಂತ್ ವಿರುದ್ಧ ಮಾಜಿ ಕ್ರಿಕೆಟಿಗನ ಆಕ್ರೋಶ
Rishabh Pant Image Credit source: BCCI
ಝಾಹಿರ್ ಯೂಸುಫ್
|

Updated on: Aug 17, 2026 | 9:07 AM

Share

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಮೊತ್ತದತ್ತ ಹೆಜ್ಜೆ ಇಡುತ್ತಿದ್ದರೂ, ವಿಕೆಟ್‌ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರ ಬೇಜವಾಬ್ದಾರಿಯುತ ವಿಕೆಟ್ ಒಪ್ಪಿಸುವಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅತ್ಯುತ್ತಮವಾಗಿ ಆಡುತ್ತಿದ್ದ ಪಂತ್, 62 ಎಸೆತಗಳಲ್ಲಿ 39 ರನ್ ಗಳಿಸಿದ್ದಾಗ ಅನಗತ್ಯ ಹೊಡೆತಕ್ಕೆ ಕೈಹಾಕಿ ಔಟಾದರು. ಪಂತ್ ಅವರ ಈ ಬ್ಯಾಟಿಂಗ್ ಆಯ್ಕೆಯನ್ನು ಭಾರತ ತಂಡದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೈಫ್ ಪ್ರಕಾರ, ಪಂತ್ ಕ್ರಿಕೆಟ್ ಆಡುವಾಗ ಪರಿಸ್ಥಿತಿಗೆ ತಕ್ಕಂತೆ ‘ಸಾಮಾನ್ಯ ಬುದ್ದಿ’ ಬಳಸುತ್ತಿಲ್ಲ. ಕ್ರೀಸ್‌ನಲ್ಲಿ ಗಟ್ಟಿಯಾಗಿ ನೆಲೆಯೂರಿದ್ದ ಪಂತ್, ತಂಡಕ್ಕೆ ದೊಡ್ಡ ಮೊತ್ತ ತಂದುಕೊಡುವ ಜವಾಬ್ದಾರಿ ಹೊಂದಿದ್ದರು. ಆದರೆ ಶ್ರೀಲಂಕಾ ತಂಡ ಎರಡನೇ ಹೊಸ ಚೆಂಡನ್ನು ಪಡೆದ ಮೊದಲ ಓವರ್‌ನಲ್ಲೇ, ಆಫ್ ಸ್ಪಿನ್ನರ್ ಕೇಶರ ನುವಾಂತ ಅವರ ಬೌಲಿಂಗ್‌ನಲ್ಲಿ ಮುಂದೆ ಬಂದು ದೊಡ್ಡ ಹೊಡೆತಕ್ಕೆ ಕೈಹಾಕಿದರು. ಬ್ಯಾಟ್‌ನ ಕೆಳಭಾಗಕ್ಕೆ ತಗುಲಿದ ಚೆಂಡು ಮಿಡ್-ಆಫ್‌ನಲ್ಲಿದ್ದ ಫೀಲ್ಡರ್ ಕೈ ಸೇರಿತು.

‘ಕ್ರಿಕೆಟಿಂಗ್ ಲಾಜಿಕ್’ ಮರೆತ ಪಂತ್:

ಈ ಬಗ್ಗೆ ಸೋನಿ ಸ್ಪೋರ್ಟ್ಸ್ ವಾಹಿನಿಯಲ್ಲಿ ಮಾತನಾಡಿದ ಮೊಹಮ್ಮದ್ ಕೈಫ್, “ಒಬ್ಬ ಬ್ಯಾಟರ್ ಶತಕ ಅಥವಾ 150 ರನ್ ಗಳಿಸಿ ಕ್ರೀಸ್‌ನಲ್ಲಿದ್ದರೂ ಸಹ, ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಚೆಂಡು ಬಂದಾಗ ಕನಿಷ್ಠ 5 ರಿಂದ 6 ಓವರ್‌ಗಳ ಕಾಲ ಜಾಗರೂಕರಾಗಿ ಆಡುವುದು ಸಾಮಾನ್ಯ ನಿಯಮ. ಆದರೆ ಪಂತ್ ಹೊಸ ಚೆಂಡು ಬಂದ ಮೊದಲ ಓವರ್‌ನಲ್ಲೇ ಕ್ರೀಸ್ ಬಿಟ್ಟು ಮುನ್ನುಗ್ಗಿದರು. ಇದು ಯಾವುದೇ ಕ್ರಿಕೆಟಿಂಗ್ ಲಾಜಿಕ್ ಇಲ್ಲದ ನಡೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಶ್ವದ ಅತ್ಯುತ್ತಮ ಆಕ್ರಮಣಕಾರಿ ಬ್ಯಾಟರ್‌ಗಳು ಸಹ ತಮ್ಮ ಆಟದ ವೇಗ ಮತ್ತು ಪರಿಸ್ಥಿತಿಯ ಗಾಂಭೀರ್ಯತೆಯನ್ನು ಸಮತೋಲನಗೊಳಿಸುತ್ತಾರೆ, ಆದರೆ ಪಂತ್ ಇಲ್ಲಿ ವಿಫಲರಾದರು ಎಂದು ಕೈಫ್ ಬೊಟ್ಟು ಮಾಡಿದ್ದಾರೆ.

ಇದನ್ನೂ ಓದಿ: ಸಿಕ್ಸರ್ ಸಿರಾಜ್… ಬ್ಯಾಟಿಂಗ್​ನಲ್ಲೂ ಮಿಯಾ ಮ್ಯಾಜಿಕ್!

ದಿಢೀರ್ ಕುಸಿತ!

ರಿಷಭ್ ಪಂತ್ ಅವರ ಈ ಬೇಜವಾಬ್ದಾರಿಯುತ ವಿಕೆಟ್ ಪತನದ ಬೆನ್ನಲ್ಲೇ ಭಾರತದ ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಕುಸಿತ ಕಂಡುಬಂದಿತು. ಭಾರತ ತಂಡ ಕೇವಲ 70 ರನ್‌ಗಳ ಅಂತರದಲ್ಲಿ 4 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಆದಾಗ್ಯೂ, ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 460/9 ರನ್‌ಗಳ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದೆಯಾದರೂ, ಪಂತ್ ಅವರ ವಿಕೆಟ್ ಶ್ರೀಲಂಕಾ ತಂಡಕ್ಕೆ ಪಂದ್ಯದಲ್ಲಿ ಕಂಬ್ಯಾಕ್ ಮಾಡಲು ಅನಗತ್ಯವಾಗಿ ಅವಕಾಶ ಮಾಡಿಕೊಟ್ಟಿತು. ಪಂತ್ ತಮ್ಮ ಆಕ್ರಮಣಕಾರಿ ಆಟದ ಶೈಲಿಯನ್ನು ಉಳಿಸಿಕೊಂಡೇ, ಪರಿಸ್ಥಿತಿಗೆ ತಕ್ಕ ಜವಾಬ್ದಾರಿಯುತ ಆಟವನ್ನು ಕಲಿಯಬೇಕಿದೆ ಎಂದು ಕ್ರಿಕೆಟ್ ಪಂಡಿತರು ಅಭಿಪ್ರಾಯಪಡುತ್ತಿದ್ದಾರೆ.

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!