AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್​ಗೆ ಜಯ… ಭಾರತ vs ಪಾಕಿಸ್ತಾನ್ ‘ಸೆಮಿ’ ಮುಖಾಮಖಿ ಇಲ್ಲ!

T20 World Cup 2026: ಟಿ20 ವಿಶ್ವಕಪ್​ನ ಸೂಪರ-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ, ಇಂಗ್ಲೆಂಡ್, ಝಿಂಬಾಬ್ವೆ, ಪಾಕಿಸ್ತಾನ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ಇಂಗ್ಲೆಂಡ್ ಸೆಮಿಫೈನಲ್​ಗೆ ಪ್ರವೇಶಿಸಿದ್ದು, ಇನ್ನುಳಿದ 3 ಸ್ಥಾನಗಳಿಗಾಗಿ ಪೈಪೋಟಿ ಮುಂದುವರೆದಿದೆ.

ಇಂಗ್ಲೆಂಡ್​ಗೆ ಜಯ... ಭಾರತ vs ಪಾಕಿಸ್ತಾನ್ 'ಸೆಮಿ' ಮುಖಾಮಖಿ ಇಲ್ಲ!
Ind Vs Pak
ಝಾಹಿರ್ ಯೂಸುಫ್
|

Updated on: Feb 25, 2026 | 12:17 PM

Share

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ಗೇರುವ ನಾಲ್ಕು ತಂಡಗಳಾವುವು ಎಂಬ ಲೆಕ್ಕಾಚಾರ ಜೋರಾಗಿದೆ. ಈ ಲೆಕ್ಕಾಚಾರದ ಜೊತೆಗೆ ಇದೀಗ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲ್ಲ ಎಂಬುದು ಕೂಡ ಬಹುತೇಕ ಖಚಿತವಾಗಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೇರಿದೆ.

ಮೊದಲ ಪಂದ್ಯದಲ್ಲಿ ಶ್ರೀಲಂಕಾಗೆ ಸೋಲುಣಿಸಿದ್ದ ಇಂಗ್ಲೆಂಡ್, ಇದೀಗ ಪಾಕ್ ವಿರುದ್ಧ ಗೆದ್ದು ಒಟ್ಟು 4 ಅಂಕಗಳನ್ನು ಪಡೆದುಕೊಂಡಿದೆ. ಇನ್ನು ನ್ಯೂಝಿಲೆಂಡ್ ವಿರುದ್ಧ ಗೆದ್ದರೆ ಒಟ್ಟು 6 ಅಂಕಗಳನ್ನು ಪಡೆಯಲಿದೆ. ಅತ್ತ ಪಾಕಿಸ್ತಾನ್ ತಂಡ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಗೆದ್ದರೆ ಪಡೆಯುವುದು ಕೇವಲ 3 ಅಂಕಗಳು ಮಾತ್ರ.

ಏಕೆಂದರೆ ಪಾಕಿಸ್ತಾನ್-ನ್ಯೂಝಿಲೆಂಡ್ ನಡುವಣ ನಡುವಣ ಪಂದ್ಯವು ರದ್ದಾಗಿರುವ ಕಾರಣ 1 ಅಂಕಗಳನ್ನು ಹಂಚಿಕೊಳ್ಳಲಾಗಿದೆ. ಅದರಂತೆ ಇನ್ನುಳಿದಿರುವ ಮ್ಯಾಚ್​ನಲ್ಲಿ ಗೆದ್ದರೂ ಪಾಕಿಸ್ತಾನ್ ತಂಡಕ್ಕೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲು ಸಾಧ್ಯವಾಗುವುದಿಲ್ಲ.

ಇದರಿಂದ ಸೆಮಿಫೈನಲ್ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುವ ಸಾಧ್ಯತೆ ಕೂಡ ಸಂಪೂರ್ಣ ಕ್ಷೀಣಿಸಿದೆ. ಏಕೆಂದರೆ ಇತ್ತ ಗ್ರೂಪ್-1 ರಿಂದ ಸೆಮಿಫೈನಲ್​ಗೇರಲು ಟೀಮ್ ಇಂಡಿಯಾ ಮುಂದಿನ ಎರಡು ಮ್ಯಾಚ್​ಗಳಲ್ಲೂ ಜಯ ಸಾಧಿಸಬೇಕು. ಅತ್ತ ಸೌತ್ ಆಫ್ರಿಕಾ ಅಥವಾ ವೆಸ್ಟ್ ಇಂಡೀಸ್​ ತಂಡಗಳು ಮುಂದಿನ ಎರಡು ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೂ ಅತ್ಯುತ್ತಮ ನೆಟ್ ರನ್ ರೇಟ್ ಕಾರಣ ಅಗ್ರಸ್ಥಾನದಲ್ಲಿ ಕಾಣಿಸಿಕೊಳ್ಳಲಿದೆ.

ಟಿ20 ವಿಶ್ವಕಪ್​ ಟೂರ್ನಿಯ ‘ಸೂಪರ್ 8’ ಹಂತದ ನಿಯಮದಂತೆ, ಒಂದು ಗುಂಪಿನ ಅಗ್ರಸ್ಥಾನಿ ತಂಡವು ಮತ್ತೊಂದು ಗುಂಪಿನ ಎರಡನೇ ಸ್ಥಾನದ ತಂಡದೊಂದಿಗೆ ಸೆಮಿಫೈನಲ್‌ನಲ್ಲಿ ಆಡಬೇಕಾಗುತ್ತದೆ.

  • ಸೆಮಿಫೈನಲ್ 1: ಗ್ರೂಪ್ 1 ರ ವಿಜೇತ vs ಗ್ರೂಪ್ 2 ರ ರನ್ನರ್ ಅಪ್.
  • ಸೆಮಿಫೈನಲ್ 2: ಗ್ರೂಪ್ 2 ರ ವಿಜೇತ vs ಗ್ರೂಪ್ 1 ರ ರನ್ನರ್ ಅಪ್.

ಇಂಗ್ಲೆಂಡ್ ತಂಡವು ಗ್ರೂಪ್ 2 ರಲ್ಲಿ ಮೊದಲ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಇದರಿಂದಾಗಿ ಪಾಕಿಸ್ತಾನಕ್ಕೆ ಈಗ ಕೇವಲ ಎರಡನೇ ಸ್ಥಾನ ಪಡೆಯಲು ಮಾತ್ರ ಅವಕಾಶವಿದೆ. ಇತ್ತ ಗ್ರೂಪ್ 1 ರಲ್ಲಿ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ ಸೋತಿರುವುದರಿಂದ, ತನ್ನ ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಇಬ್ಬರೂ ತಮ್ಮ ಗುಂಪುಗಳಲ್ಲಿ ಎರಡನೇ ಸ್ಥಾನ ಪಡೆದರೆ, ಅವರು ಪರಸ್ಪರ ಎದುರಾಗಲು ಸಾಧ್ಯವಿಲ್ಲ.

ಇದಾಗ್ಯೂ ಮುಂದಿನ ಎರಡು ಮ್ಯಾಚ್​ಗಳಲ್ಲಿ ಭರ್ಜರಿ ಗೆಲುವು ದಾಖಲಿಸಿ ನೆಟ್ ರನ್ ರೇಟ್​ನಲ್ಲಿ ಉಳಿದ ತಂಡಗಳನ್ನು ಹಿಂದಿಕ್ಕಿದರೆ ಭಾರತ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಬಹುದು. ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ನಡುವಣ ಮುಖಾಮುಖಿ.

ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ನಡುವಣ ಪಂದ್ಯದಲ್ಲಿ ಒಂದು ಟೀಮ್ ಜಯಗಳಿಸುವುದು ಖಚಿತ. ಇದರಿಂದ ಎರಡು ಟೀಮ್​ಗಳಲ್ಲಿ ಒಂದು ತಂಡದ ನೆಟ್ ರನ್ ರೇಟ್ ಮತ್ತಷ್ಟು ಹೆಚ್ಚಾಗಲಿದೆ. ಹೀಗಾಗಿ ನೆಟ್ ರನ್ ರೇಟ್​ ಟಾರ್ಗೆಟ್ ಮಾಡಿ ಟೀಮ್ ಇಂಡಿಯಾ ಅಮೋಘ ಗೆಲುವಿನೊಂದಿಗೆ ಅಂಕ ಪಟ್ಟಿಯಲ್ಲಿ ಮೇಲೇರುವುದು ಅಂದುಕೊಂಡಷ್ಟು ಸುಲಭವಲ್ಲ.

ಹೀಗಾಗಿಯೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಇನ್ನು ಉಭಯ ತಂಡಗಳು ಸೆಮಿಫೈನಲ್​ಗೇರಿ ಆ ಪಂದ್ಯಗಳಲ್ಲಿ ಜಯ ಗಳಿಸಿದರೆ ಮಾತ್ರ ಫೈನಲ್​ನಲ್ಲಿ ಮುಖಾಮುಖಿಯಾಗಬಹುದು.

ಇನ್ನೂ ಓದಿ: ಪಾಕಿಸ್ತಾನದ ಲೆಕ್ಕಾಚಾರವನ್ನೇ ಬುಡಮೇಲು ಮಾಡಿದ ಬಾಬರ್ ಆಝಂ

ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಮತ್ತೊಂದು ಮುಖಾಮುಖಿ ಖಚಿತವಾಗಲು ಮಾರ್ಚ್ 1 ರವರೆಗೆ ಕಾಯಲೇಬೇಕು. ಏಕೆಂದರೆ ಭಾನುವಾರದೊಳಗೆ ಸೆಮಿಫೈನಲ್ ಆಡಲಿರುವ 4 ತಂಡಗಳಾವುವು ಎಂಬುದು ಕನ್ಫರ್ಮ್ ಆಗಲಿದೆ. ಈ ನಾಲ್ಕು ತಂಡಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡವಿದ್ದರೆ ಮಾತ್ರ ಉಭಯ ತಂಡಗಳ ಫೈನಲ್ ಮುಖಾಮುಖಿಯನ್ನು ನಿರೀಕ್ಷಿಸಬಹುದು.

Follow Us
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ
ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ