AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಕೊಹ್ಲಿ, ರೋಹಿತ್​ಗಿಲ್ಲ ಸ್ಥಾನ: ಇದು ಸಚಿನ್ ತೆಂಡೂಲ್ಕರ್ ಐಪಿಎಲ್ ಪ್ಲೇಯಿಂಗ್ 11

Sachin Tendulkar's IPL 2022 XI: ಮೂರನೇ ಕ್ರಮಾಂಕದ ಬ್ಯಾಟ್ಸ್​ಮನ್​ ಆಗಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಅವರನ್ನು ಸಚಿನ್ ಆಯ್ಕೆ ಮಾಡಿದ್ದಾರೆ. ಐಪಿಎಲ್ 15ನೇ ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರಾಹುಲ್ ಎರಡನೇ ಸ್ಥಾನದಲ್ಲಿದ್ದಾರೆ.

IPL 2022: ಕೊಹ್ಲಿ, ರೋಹಿತ್​ಗಿಲ್ಲ ಸ್ಥಾನ: ಇದು ಸಚಿನ್ ತೆಂಡೂಲ್ಕರ್ ಐಪಿಎಲ್ ಪ್ಲೇಯಿಂಗ್ 11
Sachin Tendulkar
TV9 Web
| Updated By: ಝಾಹಿರ್ ಯೂಸುಫ್|

Updated on: May 31, 2022 | 1:35 PM

Share

IPL 2022: ಐಪಿಎಲ್ ಸೀಸನ್​ 15 ಮುಕ್ತಾಯದ ಬೆನ್ನಲ್ಲೇ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar’s IPL 2022 XI) ಈ ಬಾರಿಯ ಐಪಿಎಲ್​ನ ಬೆಸ್ಟ್ ಪ್ಲೇಯಿಂಗ್ ಇಲೆವೆನ್​ ಅನ್ನು ಆಯ್ಕೆ ಮಾಡಿದ್ದಾರೆ. ವಿಶೇಷ ಎಂದರೆ ಈ ಪ್ಲೇಯಿಂಗ್ ಇಲೆವೆನ್​ನಲ್ಲಿ ಖ್ಯಾತ ಆಟಗಾರರು ಸ್ಥಾನ ಪಡೆದಿಲ್ಲ. ಅದರಲ್ಲೂ ಟೂರ್ನಿಯಲ್ಲಿ ನೀರಸ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ (Rohit Sharma) ಸೇರಿದಂತೆ ಪ್ರಮುಖ ಆಟಗಾರರನ್ನು ಸಚಿನ್ ತೆಂಡೂಲ್ಕರ್ ಕೈ ಬಿಟ್ಟಿದ್ದಾರೆ. ಇನ್ನು ಈ ತಂಡದ ನಾಯಕನಾಗಿ ಆಯ್ಕೆಯಾಗಿದ್ದು ಚಾಂಪಿಯನ್ ತಂಡ ಗುಜರಾತ್ ಟೈಟಾನ್ಸ್ ಟೀಮ್​ನ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಎಂಬುದು ವಿಶೇಷ.

ಹಾಗೆಯೇ ಸಚಿನ್ ತೆಂಡೂಲ್ಕರ್ ಅವರ ಬೆಸ್ಟ್ ಪ್ಲೇಯಿಂಗ್ ಇಲೆವೆನ್​ನ ಆರಂಭಿಕರಾಗಿ ರಾಜಸ್ಥಾನ್ ರಾಯಲ್ಸ್​ ತಂಡದ ಜೋಸ್ ಬಟ್ಲರ್ ಮತ್ತು ಪಂಜಾಬ್ ಕಿಂಗ್ಸ್ ತಂಡ ಶಿಖರ್ ಧವನ್ ಸ್ಥಾನ ಪಡೆದಿದ್ದಾರೆ. ಬಲ ಮತ್ತು ಎಡಗೈ ಬ್ಯಾಟ್ಸ್‌ಮನ್‌ಗಳ ಸಂಯೋಜನೆಯನ್ನು ಉಳಿಸಿಕೊಳ್ಳಲು ಸಚಿನ್ ಬಟ್ಲರ್ ಹಾಗೂ ಧವನ್​ ಅವರನ್ನು ಆರಿಸಿಕೊಂಡಿದ್ದಾರೆ. ಇನ್ನು ಜೋಸ್ ಬಟ್ಲರ್ ರಾಜಸ್ಥಾನ್ ರಾಯಲ್ಸ್ ಪರ ಈ ಬಾರಿ 863 ರನ್ ಗಳಿಸಿದ್ದರು. ಅಲ್ಲದೆ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದರು. ಹಾಗೆಯೇ ಪಂಜಾಬ್ ಕಿಂಗ್ಸ್ ಪರ ಆಡಿದ ಶಿಖರ್ ಧವನ್ 14 ಪಂದ್ಯಗಳಲ್ಲಿ 460 ರನ್ ಗಳಿಸಿದ್ದರು.

ಇನ್ನು ತಂಡದಲ್ಲಿ ಮೂರನೇ ಕ್ರಮಾಂಕದ ಬ್ಯಾಟ್ಸ್​ಮನ್​ ಆಗಿ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಅವರನ್ನು ಸಚಿನ್ ಆಯ್ಕೆ ಮಾಡಿದ್ದಾರೆ. ಐಪಿಎಲ್ 15ನೇ ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರಾಹುಲ್ ಎರಡನೇ ಸ್ಥಾನದಲ್ಲಿದ್ದಾರೆ. ಈ ಬಾರಿ ಕೆಎಲ್​ಆರ್​ 15 ಪಂದ್ಯಗಳಲ್ಲಿ 2 ಶತಕಗಳ ನೆರವಿನಿಂದ 616 ರನ್ ಗಳಿಸಿದ್ದರು.

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಈ ಸೀಸನ್​ನಲ್ಲಿ ಗುಜರಾತ್ ಪರ ನಾಲ್ಕನೇ ಕ್ರಮಾಂಕದಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ ಅವರನ್ನೇ ಸಚಿನ್ ನಾಲ್ಕನೇ ಕ್ರಮಾಂಕದಲ್ಲಿ ಆಯ್ಕೆ ಮಾಡಿದ್ದಾರೆ. ನಂತರದ ಸ್ಥಾನದಲ್ಲಿ ಸ್ಫೋಟಕ ಬ್ಯಾಟ್ಸ್​ಮನ್​ ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು ಫಿನಿಶರ್ ಆಗಿ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ಮಾಡಿದ್ದಾರೆ.

ಬೌಲರ್​ಗಳಾಗಿ ತಂಡದಲ್ಲಿ ರಶೀದ್ ಖಾನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಯುಜ್ವೇಂದ್ರ ಚಹಾಲ್ ಅವರಿಗೆ ಸ್ಥಾನ ನೀಡಲಾಗಿದೆ. ಇದಾಗ್ಯೂ 26 ವಿಕೆಟ್ ಪಡೆದ ಆರ್​ಸಿಬಿ ಆಟಗಾರ ವನಿಂದು ಹಸರಂಗ ಅವರನ್ನು ಸಚಿನ್ ತೆಂಡೂಲ್ಕರ್ ಕೈಬಿಟ್ಟಿದ್ದಾರೆ.

ಸಚಿನ್ ತೆಂಡೂಲ್ಕರ್ ಅವರ IPL 2022 ಪ್ಲೇಯಿಂಗ್ ಇಲೆವೆನ್: ಜೋಸ್ ಬಟ್ಲರ್, ಶಿಖರ್ ಧವನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ಲಿಯಾಮ್ ಲಿವಿಂಗ್​ಸ್ಟೋನ್, ದಿನೇಶ್ ಕಾರ್ತಿಕ್, ರಶೀದ್ ಖಾನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!