AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virender Sehwag: ಇಶಾನ್ ಕಿಶನ್ ಬೇಡ, ದಿನೇಶ್ ಕಾರ್ತಿಕ್ ಸಹ ಬೇಡ, ಈತನಿಗೆ ಚಾನ್ಸ್ ನೀಡಿ ಎಂದ ಸೆಹ್ವಾಗ್..!

IPL 2022: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಪಂದ್ಯದಲ್ಲಿ ಜಿತೇಶ್ ಶರ್ಮಾ 18 ಎಸೆತಗಳಲ್ಲಿ 38 ರನ್ ಗಳಿಸಿದ್ದರು.

Virender Sehwag: ಇಶಾನ್ ಕಿಶನ್ ಬೇಡ, ದಿನೇಶ್ ಕಾರ್ತಿಕ್ ಸಹ ಬೇಡ, ಈತನಿಗೆ ಚಾನ್ಸ್ ನೀಡಿ ಎಂದ ಸೆಹ್ವಾಗ್..!
Virender Sehwag
TV9 Web
| Edited By: |

Updated on: May 09, 2022 | 10:07 PM

Share

ಐಪಿಎಲ್ 2022 ರಲ್ಲಿ ಅನೇಕ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಮುಂಬರುವ ಟಿ20 ವಿಶ್ವಕಪ್​ ಹಿನ್ನೆಲೆಯಲ್ಲಿ ಇದೀಗ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಈ ಪಟ್ಟಿಯಲ್ಲಿ ವಿಕೆಟ್ ಕೀಪರ್ ಆಗಿ ರಿಷಬ್ ಪಂತ್ ಟೀಮ್ ಇಂಡಿಯಾದ ಮೊದಲ ಆಯ್ಕೆಯಾಗಲಿದ್ದಾರೆ. ಇವರಲ್ಲದೆ, ದಿನೇಶ್ ಕಾರ್ತಿಕ್, ವೃದ್ಧಿಮಾನ್ ಸಹಾ, ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಕೂಡ ತಮ್ಮ ಬ್ಯಾಟಿಂಗ್‌ನಿಂದ ಆಯ್ಕೆಗಾರರ ಗಮನ ಸೆಳೆದಿದ್ದಾರೆ. ಆದರೆ ಇವರಲ್ಲಿ ಯಾರನ್ನು ಬ್ಯಾಕ್ ಅಪ್ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ. ಇದರ ನಡುವೆ ಟೀಮ್ ಇಂಡಿಯಾದ ಮಾಜಿ ಸ್ಪೋಟಕ ಆರಂಭಿಕ ಆಟಗಾರ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ವಿಕೆಟ್ ಕೀಪರ್​ರೊಬ್ಬರ ಹೆಸರನ್ನು ಮುಂದಿಟ್ಟಿದ್ದಾರೆ. ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡುತ್ತಿರುವ ಜಿತೇಶ್ ಶರ್ಮಾ ಅವರನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡುವಂತೆ ಸೆಹ್ವಾಗ್ ಸೂಚಿಸಿದ್ದಾರೆ.

“ನಿಸ್ಸಂದೇಹವಾಗಿ ಜಿತೇಶ್ ಶರ್ಮಾ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಇಶಾನ್ ಕಿಶನ್, ರಿಷಬ್ ಪಂತ್ ಮತ್ತು ವೃದ್ಧಿಮಾನ್ ಸಾಹಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳು. ಆದರೆ ಜಿತೇಶ್ ನನ್ನನ್ನು ತುಂಬಾ ಪ್ರಭಾವಿತಗೊಳಿಸಿದರು. ನಿರ್ಭೀತಿಯಿಂದ ಬ್ಯಾಟಿಂಗ್ ಮಾಡುವುದು ಅವರ ಶೈಲಿ. ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಜಿತೇಶ್ ಶರ್ಮಾ ಅವರನ್ನು ಬ್ಯಾಕ್-ಅಪ್ ವಿಕೆಟ್‌ಕೀಪರ್ ಆಗಿ ಆಯ್ಕೆ ಮಾಡಿಕೊಳ್ಳಬೇಕು” ಎಂದು ಸೆಹ್ವಾಗ್ ಹೇಳಿದ್ದಾರೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಪಂದ್ಯದಲ್ಲಿ ಜಿತೇಶ್ ಶರ್ಮಾ 18 ಎಸೆತಗಳಲ್ಲಿ 38 ರನ್ ಗಳಿಸಿದ್ದರು. ಈ ಸಮಯದಲ್ಲಿ, ಅವರು ತಮ್ಮ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಬಾರಿಸಿದ್ದರು. ಜಿತೇಶ್ ಶರ್ಮಾರ ಅಬ್ಬರ ನೋಡಿ ಸೆಹ್ವಾಗ್ ಮಂತ್ರಮುಗ್ಧರಾಗಿದ್ದಾರೆ. ಈ ಬಗ್ಗೆ ಮಾತನಾಡಿದ ವೀರು, “ಜಿತೇಶ್ ಅವರ ಒಂದು ಸ್ಟ್ರೋಕ್ ನನಗೆ ವಿವಿಎಸ್ ಲಕ್ಷ್ಮಣ್ ಅವರ ಹೊಡೆತವನ್ನು ನೆನಪಿಸಿತು. ಶೇನ್ ವಾರ್ನ್ ವಿರುದ್ಧ ಲಕ್ಷ್ಮಣ್ ಇಂತಹ ಹೊಡೆತವನ್ನು ಆಡುತ್ತಿದ್ದರು. ಅಲ್ಲದೆ ಆತನಲ್ಲಿರುವ ಆಕ್ರಮಣ ಬ್ಯಾಟಿಂಗ್ ಶೈಲಿಯು ಉತ್ತಮವಾಗಿದೆ. ಹೀಗಾಗಿ ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾ ಬ್ಯಾಕ್ ಅಪ್ ವಿಕೆಟ್​ ಕೀಪರ್ ಆಗಿ ಜಿತೇಶ್ ಶರ್ಮಾರನ್ನು ಆಯ್ಕೆ ಮಾಡಬೇಕೆಂದು ವೀರೇಂದ್ರ ಸೆಹ್ವಾಗ್ ತಿಳಿಸಿದ್ದಾರೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್