AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ ಬೇಡ, ಟಿ20 ವಿಶ್ವಕಪ್​ಗೆ ಇವರಿಬ್ಬರು ಆರಂಭಿಕರಾಗಲಿ ಎಂದ ಮಾಜಿ ಕ್ರಿಕೆಟಿಗ

Team India: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ.

ರೋಹಿತ್ ಶರ್ಮಾ ಬೇಡ, ಟಿ20 ವಿಶ್ವಕಪ್​ಗೆ ಇವರಿಬ್ಬರು ಆರಂಭಿಕರಾಗಲಿ ಎಂದ ಮಾಜಿ ಕ್ರಿಕೆಟಿಗ
Team India
TV9 Web
| Edited By: |

Updated on: Sep 17, 2022 | 12:25 PM

Share

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ (Team India) ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದೇ ದೊಡ್ಡ ಪ್ರಶ್ನೆ. ಏಕೆಂದರೆ ತಂಡದಲ್ಲಿ ಅತ್ಯುತ್ತಮ ಆಟಗಾರರ ದಂಡೇ ಇದೆ. ಹೀಗಾಗಿ ಯಾರನ್ನು ಕೈ ಬಿಟ್ಟು ಯಾರನ್ನು ಆಯ್ಕೆ ಮಾಡುವುದು ಎಂಬ ಸವಾಲು ಟೀಮ್ ಇಂಡಿಯಾ ಕೋಚ್ ಹಾಗೂ ನಾಯಕನ ಮುಂದಿದೆ. ಇದರ ನಡುವೆ ಟೀಮ್ ಇಂಡಿಯಾ ಮಾಜಿ ಆಟಗಾರ ವಾಸಿಂ ಜಾಫರ್ ಹೆಸರಿಸಿರುವ ಟೀಮ್ ಇಂಡಿಯಾ ಟಾಪ್ 5 ಆಟಗಾರರ ಪಟ್ಟಿ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಪ್ಲೇಯಿಂಗ್ ಇಲೆವೆನ್​ನ ಅಗ್ರ ಐದು ಆಟಗಾರರು ಎಲ್ಲರ ಗಮನ ಸೆಳೆಯಲು ಮುಖ್ಯ ಕಾರಣ ತಂಡದ ಆರಂಭಿಕರ ಬದಲಾವಣೆ.

ಅಂದರೆ ವಾಸಿಂ ಜಾಫರ್ ಹೆಸರಿಸಿರುವ ಟೀಮ್ ಇಂಡಿಯಾ ಆರಂಭಿಕರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಹೆಸರಿಲ್ಲ. ಬದಲಾಗಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಅವರಿದ್ದಾರೆ. ಅಂದರೆ ಟಿ20 ವಿಶ್ವಕಪ್​ನಲ್ಲಿ ಪಂತ್ ಹಾಗೂ ಕೆಎಲ್ ರಾಹುಲ್ ಆರಂಭಿಕರಾಗಿ ಆಡುವುದು ಸೂಕ್ತ ಎಂದಿದ್ದಾರೆ ವಾಸಿಂ ಜಾಫರ್.

ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿಯನ್ನು ಆಯ್ಕೆ ಮಾಡಿದ್ದಾರೆ. ಆದರೆ ನಾಲ್ಕನೇ ಕ್ರಮಾಂಕದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡುವುದು ಉತ್ತಮ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಜಾಫರ್. ಏಕೆಂದರೆ 2013 ರ ಚಾಂಪಿಯನ್ ಟ್ರೋಫಿಗಿಂತ ಮುಂಚಿತವಾಗಿ ಮಹೇಂದ್ರ ಸಿಂಗ್ ಧೋನಿ ರೋಹಿತ್ ಶರ್ಮಾ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರು. ಆ ಬಳಿಕ ನಡೆದಿದ್ದೆಲ್ಲವೂ ಇತಿಹಾಸ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಇದೀಗ ನಾಯಕನಾಗಿ ರೋಹಿತ್ ಶರ್ಮಾ ರಿಷಭ್ ಪಂತ್ ವಿಷಯದಲ್ಲಿ ಅಂತಹದೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ. ಈ ಮೂಲಕ ಹೊಸ ಆರಂಭಿಕರನ್ನು ಸಿದ್ಧಗೊಳಿಸಬೇಕೆಂದು ವಾಸಿಂ ಜಾಫರ್ ಅಭಿಪ್ರಾಯಪಟ್ಟಿದ್ದಾರೆ. ಇನ್ನು ಟಿ20 ವಿಶ್ವಕಪ್​ಗಾಗಿ ಟಾಪ್-5 ಕ್ರಮಾಂಕಗಳ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಅವರನ್ನು ಆರಂಭಿಕರಾಗಿ ಆಯ್ಕೆ ಮಾಡಿರುವ ಜಾಫರ್, 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿಯನ್ನೇ ಇರಿಸಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ರೋಹಿತ್ ಶರ್ಮಾ ಆಡುವುದು ಸೂಕ್ತ ಎಂದಿದ್ದಾರೆ. ಅದೇ ರೀತಿ ಸೂರ್ಯಕುಮಾರ್ 5ನೇ ಕ್ರಮಾಂಕದಲ್ಲಿ ಬ್ಯಾಟ್ಸ್​ ಬೀಸಿದರೆ ಉತ್ತಮ ಎಂಬ ಅಭಿಪ್ರಾಯ ಮುಂದಿಟ್ಟಿದ್ದಾರೆ.

ಒಟ್ಟಿನಲ್ಲಿ ವಾಸಿಂ ಜಾಫರ್ ಅವರ ಸಲಹೆಯೊಂದಿಗೆ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ ಆರಂಭಿಕರು ಯಾರಾಗುತ್ತಾರೆ ಎಂಬ ಚರ್ಚೆಗಳು ಶುರುವಾಗಿದೆ. ಕೆಲವರು ವಾಸಿಂ ಜಾಫರ್ ಅತ್ಯುತ್ತಮ ಸಲಹೆ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಎಡಗೈ-ಬಲಗೈ ಬ್ಯಾಟ್ಸ್​ಮನ್​ಗಳು ಆರಂಭಿಕರಾಗಿ ಕಣಕ್ಕಿಳಿದರೆ ಹೆಚ್ಚು ಯಶಸ್ಸು ಸಾಧಿಸುತ್ತಾರೆ. ಇದಕ್ಕೆ ಸಾಕ್ಷಿಯಾಗಿ ಸಚಿನ್ ತೆಂಡೂಲ್ಕರ್-ಸೌರವ್ ಗಂಗೂಲಿ, ಸೆಹ್ವಾಗ್-ಗಂಭೀರ್, ರೋಹಿತ್ ಶರ್ಮಾ-ಶಿಖರ್ ಧವನ್ ಅವರ ಅಂಕಿ ಅಂಶಗಳು ಕಣ್ಮುಂದೆ ಇದೆ.

ಹೀಗಾಗಿ ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಆರಂಭಿಕರಾಗಿ ಉತ್ತಮ ಆಯ್ಕೆ ಎಂದು ಕೆಲವರು ಜಾಫರ್ ಅಭಿಪ್ರಾಯವನ್ನು ಬೆಂಬಲಿಸಿದ್ದಾರೆ. ಇನ್ನು ಕೆಲವರು ಟಿ20 ವಿಶ್ವಕಪ್​ಗೂ ಮುನ್ನ ನಡೆಯಲಿರುವ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗಳಲ್ಲಿ ಇಂತಹದೊಂದು ಪ್ರಯೋಗ ನಡೆಸುವುದು ಸೂಕ್ತ ಎಂದಿದ್ದಾರೆ.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಶ್ರೇಯಸ್ ಅಯ್ಯರ್, ದೀಪಕ್ ಚಹರ್

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​