AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಏಷ್ಯಾಕಪ್ ಸೋಲಿನ ಬಗ್ಗೆ ತಲೆನೇ ಕೆಡಿಸಿಕೊಳ್ಳಲ್ಲ..!

India vs Sri Lanka: ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ 72 ರನ್​ ಬಾರಿಸಿದರು.

Rohit Sharma: ಏಷ್ಯಾಕಪ್ ಸೋಲಿನ ಬಗ್ಗೆ ತಲೆನೇ ಕೆಡಿಸಿಕೊಳ್ಳಲ್ಲ..!
Rohit sharma
TV9 Web
| Edited By: |

Updated on: Sep 07, 2022 | 10:59 AM

Share

Asia Cup 2022: ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ನಡೆದ ಏಷ್ಯಾಕಪ್​ನ ಸೂಪರ್-4 ಹಂತದ ನಾಲ್ಕನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ (India vs Sri Lanka) ತಂಡವು ಪರಾಜಯಗೊಂಡಿದೆ. ಈ ಸೋಲಿನೊಂದಿಗೆ ಟೀಮ್ ಇಂಡಿಯಾದ ಏಷ್ಯಾಕಪ್ ಫೈನಲ್​ಗೇರುವ ಕನಸು ಬಹುತೇಕ ಕಮರಿದೆ. ಈ  ಪಂದ್ಯದ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit sharma) ಸೋಲಿನ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಏಕೆಂದರೆ ನಾವು ಕೇವಲ ಎರಡು ಪಂದ್ಯಗಳನ್ನು ಮಾತ್ರ ಕಳೆದುಕೊಂಡಿದ್ದೇವೆ. ಕಳೆದ ವಿಶ್ವಕಪ್‌ನಿಂದ ನಾವು ಹೆಚ್ಚು ಪಂದ್ಯಗಳನ್ನು ಸೋತಿಲ್ಲ. ಇದಾಗ್ಯೂ ಏಷ್ಯಾಕಪ್​ನಲ್ಲಿನ ಸೋಲುಗಳ ಬಗ್ಗೆ ಪರಾಮರ್ಶೆ ಮಾಡಲಾಗುವುದು ಎಂದು ಟೀಮ್ ಇಂಡಿಯಾ ನಾಯಕ ತಿಳಿಸಿದರು.

ಇನ್ನು ಲಂಕಾ ವಿರುದ್ಧ ನಾವು ಉತ್ತಮ ಪ್ರದರ್ಶನವನ್ನೇ ನೀಡಿದ್ದೇವೆ ಎಂದಿರುವ ರೋಹಿತ್ ಶರ್ಮಾ, ಕೊನೆಯ ಹಂತದಲ್ಲಿ ನಮ್ಮ ಬ್ಯಾಟ್ಸ್​ಮನ್​​ಗಳು ಎಡವಿದ್ದರು. ಹೀಗಾಗಿ 10-15 ರನ್‌ಗಳ ಕಡಿಮೆಯಾಯಿತು. ಇದಾಗ್ಯೂ ಉತ್ತಮ ಆರಂಭ ಪಡೆದ ಶ್ರೀಲಂಕಾ ವಿರುದ್ದ ನಮ್ಮ ಸ್ಪಿನ್ನರ್​ಗಳು ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸುವ ಮೂಲಕ ಗೆಲುವಿನ ಆಸೆ ಮೂಡಿಸಿದ್ದರು. ಆದರೆ ಅಂತಿಮವಾಗಿ ಉತ್ತಮವಾಗಿ ಆಡಿದ ಶ್ರೀಲಂಕಾ ಗೆಲುವು ದಾಖಲಿಸಿದೆ ಎಂದರು.

ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ 72 ರನ್​ ಬಾರಿಸಿದರು. ಈ ಭರ್ಜರಿ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 173 ರನ್​ ಕಲೆಹಾಕಿತು.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

174 ರನ್​ಗಳ ಟಾರ್ಗೆಟ್ ಪಡೆದ ಶ್ರೀಲಂಕಾ ಪರ ಪಾತುಂ ನಿಸ್ಸಂಕಾ ಹಾಗೂ ಕುಸಾಲ್ ಮೆಂಡಿಸ್ ಭರ್ಜರಿ ಆರಂಭ ಒದಗಿಸಿದ್ದರು. ಇಬ್ಬರು ಆರಂಭಿಕರು ಮೊದಲ ವಿಕೆಟ್​ಗೆ 97 ರನ್​ಗಳ ಜೊತೆಯಾಟವಾಡಿದರು. ಇದಾಗ್ಯೂ ಅಂತಿಮ ಹಂತದಲ್ಲಿ ಕಂಬ್ಯಾಕ್ ಮಾಡಿದ ಟೀಮ್ ಇಂಡಿಯಾ ಬೌಲರ್​ಗಳು ಉತ್ತಮ ಪ್ರದರ್ಶನ ನೀಡಿದರು. ಅದರಂತೆ ಅಂತಿಮ ಓವರ್​ನಲ್ಲಿ ಶ್ರೀಲಂಕಾಗೆ ಗೆಲ್ಲಲು 7 ರನ್​ಗಳ ಅವಶ್ಯಕತೆಯಿತ್ತು.

ಕೊನೆಯ ಓವರ್​ನಲ್ಲಿ ಅತ್ಯುತ್ತಮವಾಗಿ ಬೌಲ್ ಮಾಡಿದ ಅರ್ಷದೀಪ್ ಸಿಂಗ್ ಶ್ರೀಲಂಕಾ ಬ್ಯಾಟ್ಸ್​ಮನ್​ಗಳಾದ ಭಾನುಕಾ ರಾಜಪಕ್ಸೆ ಹಾಗೂ ದುಸನ್ ಶಾನಕರನ್ನು ಇಕ್ಕಟಿಗೆ ಸಿಲುಕಿಸಿದರು. ಆದರೆ 5ನೇ ಎಸೆತದಲ್ಲಿ ರನೌಟ್ ಮಾಡುವ ಅವಕಾಶವನ್ನು ರಿಷಭ್ ಪಂತ್ ಹಾಗೂ ಅರ್ಷದೀಪ್ ಸಿಂಗ್ ತಪ್ಪಿಸಿಕೊಂಡರು. ಅತ್ತ ಓವರ್ ಥ್ರೋನಲ್ಲಿ ಒಂದು ರನ್ ಓಡುವ ಮೂಲಕ ಶ್ರೀಲಂಕಾ ತಂಡವು 19.5 ಓವರ್​ನಲ್ಲಿ 174 ರನ್​ ಗಳಿಸಿ 6 ವಿಕೆಟ್​ಗಳ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಶ್ರೀಲಂಕಾ ತಂಡವು ಏಷ್ಯಾಕಪ್​ ಫೈನಲ್​ ಆಡುವುದನ್ನು ಖಚಿತಪಡಿಸಿಕೊಂಡಿದೆ.