AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಕೊಹ್ಲಿ ಹೋರಾಟ ವ್ಯರ್ಥ; ಏಕದಿನ ಸರಣಿ ಸೋತ ಟೀಂ ಇಂಡಿಯಾ

New Zealand ODI series win India: ಇಂದೋರ್‌ನಲ್ಲಿ ನಡೆದ ಭಾರತ vs ನ್ಯೂಜಿಲೆಂಡ್ ಮೂರನೇ ಏಕದಿನ ಪಂದ್ಯದಲ್ಲಿ ಕಿವೀಸ್ 41 ರನ್​ಗಳಿಂದ ಗೆದ್ದು, 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿತು. ಇದು ಭಾರತದ ನೆಲದಲ್ಲಿ ನ್ಯೂಜಿಲೆಂಡ್ ತಂಡದ ಮೊದಲ ಏಕದಿನ ಸರಣಿ ಗೆಲುವು. ಡ್ಯಾರಿಲ್ ಮಿಚೆಲ್ ಮತ್ತು ಗ್ಲೆನ್ ಫಿಲಿಪ್ಸ್ ಶತಕಗಳ ನೆರವಿನಿಂದ 337 ರನ್ ಗಳಿಸಿತು. ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸಿದರೂ, ಭಾರತದ ಪ್ರಮುಖ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಸೋಲು ಎದುರಿಸಿತು.

IND vs NZ: ಕೊಹ್ಲಿ ಹೋರಾಟ ವ್ಯರ್ಥ; ಏಕದಿನ ಸರಣಿ ಸೋತ ಟೀಂ ಇಂಡಿಯಾ
Ind Vs Nz
ಪೃಥ್ವಿಶಂಕರ
|

Updated on:Jan 18, 2026 | 10:15 PM

Share

ಇಂದೋರ್‌ನ ಹೊಳ್ಕರ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತ ತಂಡವನ್ನು 41 ರನ್​ಗಳಿಂದ ಸೋಲಿಸಿದ ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಇದರೊಂದಿಗೆ ಭಾರತದ ನೆಲದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿರುವ ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಇದೀಗ ಮೊದಲ ಬಾರಿಗೆ ಭಾರತೀಯ ನೆಲದಲ್ಲಿ ಏಕದಿನ ಸರಣಿಯನ್ನು ಗೆದ್ದಿದೆ. ಡ್ಯಾರಿಲ್ ಮಿಚೆಲ್ ಅವರ ಸತತ ಎರಡನೇ ಶತಕ ಮತ್ತು ಗ್ಲೆನ್ ಫಿಲಿಪ್ಸ್ ಅವರ ಮೊದಲ ಶತಕದ ಸಹಾಯದಿಂದ ಮೊದಲು ಬ್ಯಾಟಿಂಗ್‌ ಮಾಡಿದ ಕಿವೀಸ್ 337 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪ್ರಮುಖ ಬ್ಯಾಟ್ಸ್‌ಮನ್​ಗಳ ವೈಫಲ್ಯದಿಂದಾಗಿ ಸೋಲಿಗೆ ಕೊರಳೊಡ್ಡಿತು. ತಂಡದ ಪರ ವಿರಾಟ್ ಕೊಹ್ಲಿ (Virat Kohli) ಏಕಾಂಗಿ ಹೋರಾಟ ನೀಡಿದರಾದರೂ, ಅವರಿಗೆ ಪ್ರಮುಖ ಬ್ಯಾಟ್ಸ್‌ಮನ್​ಗಳು ಸಾಥ್ ನೀಡಲಿಲ್ಲ. ಹೀಗಾಗಿ ತಂಡಕ್ಕೆ ಸರಣಿ ಸೋಲಿನ ಆಘಾತ ಎದುರಾಯಿತು.

ಮಿಚೆಲ್ ಮತ್ತು ಫಿಲಿಪ್ಸ್ ಶತಕ

ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಿತ್ತಾದರೂ ಉತ್ತಮ ಆರಂಭ ಸಿಗಲಿಲ್ಲ. ತಂಡವು ಕೇವಲ ಐದು ರನ್‌ಗಳಿಗೆ ಎರಡು ವಿಕೆಟ್‌ ಮತ್ತು 58 ರನ್‌ಗಳಿಗೆ ಮೂರನೇ ವಿಕೆಟ್ ಕಳೆದುಕೊಂಡಿತು. ಆ ಬಳಿಕ ಜೊತೆಯಾದ ಮಿಚೆಲ್ ಮತ್ತು ಫಿಲಿಪ್ಸ್ 219 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ಇದು ಟೀಂ ಇಂಡಿಯಾದ ಕಷ್ಟಗಳನ್ನು ಇನ್ನಷ್ಟು ಹೆಚ್ಚಿಸಿತು. ಮಿಚೆಲ್ ತಮ್ಮ ಸತತ ಎರಡನೇ ಪಂದ್ಯದಲ್ಲಿ ಶತಕ ಗಳಿಸಿದರೆ, ಫಿಲಿಪ್ಸ್ ತಮ್ಮ ಎರಡನೇ ಏಕದಿನ ಶತಕವನ್ನು ಪೂರೈಸಿದರು.

ಫಿಲಿಪ್ಸ್ ಮತ್ತು ಮಿಚೆಲ್ ಸತತ ಓವರ್‌ಗಳಲ್ಲಿ ಔಟಾದ ನಂತರ ಟೀಂ ಇಂಡಿಯಾ ಮತ್ತೆ ಆಟಕ್ಕೆ ಮರಳುವ ನಿರೀಕ್ಷೆಯಿತ್ತು. ಆದರೆ ಕಿವೀಸ್ ನಾಯಕ ಮೈಕೆಲ್ ಬ್ರೇಸ್‌ವೆಲ್ ತ್ವರಿತ ರನ್ ಗಳಿಸಿ ತಂಡವನ್ನು 337 ರನ್‌ಗಳ ಬಲವಾದ ಮೊತ್ತಕ್ಕೆ ಕೊಂಡೊಯ್ದರು. ಭಾರತದ ಪರ ಅರ್ಶ್ದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ತಲಾ ಮೂರು ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಹೊರತುಪಡಿಸಿ ಉಳಿದ ಎಲ್ಲಾ ಬೌಲರ್‌ಗಳು ದುಬಾರಿಯಾದರು.

ಅಗ್ರ ಕ್ರಮಾಂಕ ವಿಫಲ, ಕೊಹ್ಲಿ ಶತಕ ಸಾಕಾಗಲಿಲ್ಲ

ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿತು, ಆದರೆ ಒಮ್ಮೆ ವಿಕೆಟ್‌ಗಳು ಬೀಳಲು ಪ್ರಾರಂಭಿಸಿದ ನಂತರ, ಅಗ್ರ ಕ್ರಮಾಂಕವು ಬಹುಬೇಗನೇ ಪೆವಿಲಿಯನ್ ಸೇರಿಕೊಂಡಡಿತು. ಹೀಗಾಗಿ ಟೀಂ ಇಂಡಿಯಾ ಕೇವಲ 71 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಜ್ಯಾಕ್ ಫೋಕ್ಸ್, ಕ್ರಿಶ್ಚಿಯನ್ ಕ್ಲಾರ್ಕ್ ಮತ್ತು ಕೈಲ್ ಜೇಮಿಸನ್ ಅಗ್ರ ಕ್ರಮಾಂಕವನ್ನು ಕಾಡಿದರು. ಆ ಬಳಿಕ ಸ್ಪಿನ್ನರ್ ಜೇಡೆನ್ ಲೆನ್ನಾಕ್ಸ್ ಅವರು ಕೆಎಲ್ ರಾಹುಲ್ ಅವರನ್ನು ಸಮಯಕ್ಕೆ ಸರಿಯಾಗಿ ಬಲೆಗೆ ಬೀಳಿಸುವ ಮೂಲಕ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದರು. ಆದಾಗ್ಯೂ, ವಿರಾಟ್ ಕೊಹ್ಲಿ ಒಂದು ತುದಿಯಲ್ಲಿ ದೃಢವಾಗಿ ನಿಂತರು, ಅವರಿಗೆ ನಿತೀಶ್ ಕುಮಾರ್ ರೆಡ್ಡಿ ಬೆಂಬಲ ನೀಡಿದರು. ಇಬ್ಬರೂ 88 ರನ್‌ಗಳ ಉತ್ತಮ ಪಾಲುದಾರಿಕೆಯನ್ನು ಹಂಚಿಕೊಂಡರು, ಇಬ್ಬರೂ ತಮ್ಮ ಅರ್ಧಶತಕಗಳನ್ನು ಪೂರೈಸಿದರು. IND vs NZ: ವಾರಿಯರ್ ವಿರಾಟ್; ವಿಶ್ವ ದಾಖಲೆಯ ಶತಕ ಸಿಡಿಸಿದ ಕೊಹ್ಲಿ

ಆದರೆ ರೆಡ್ಡಿ ಔಟಾದ ನಂತರ, ರವೀಂದ್ರ ಜಡೇಜಾ ಬ್ಯಾಟಿಂಗ್‌ನಲ್ಲಿ ಉತ್ತಮ ಕೊಡುಗೆ ನೀಡಲು ವಿಫಲವಾದ ಕಾರಣ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತು. ಕೇವಲ 178 ರನ್‌ಗಳಿಗೆ ಆರು ವಿಕೆಟ್‌ಗಳು ಬಿದ್ದಾಗ, ಸೋಲು ಅನಿವಾರ್ಯವಾಯಿತು. ಆದರೆ ವಿರಾಟ್, ಹರ್ಷಿತ್ ರಾಣಾ ಅವರಿಂದ ಬೆಂಬಲವನ್ನು ಪಡೆದರು. ಇದೇ ವೇಳೆ ಕೊಹ್ಲಿ ತಮ್ಮ 54 ನೇ ಶತಕವನ್ನು ಪೂರ್ಣಗೊಳಿಸಿದರೆ, ಹರ್ಷಿತ್ ತಮ್ಮ ಮೊದಲ ಅರ್ಧಶತಕವನ್ನು ಬಾರಿಸಿದರು. ಆದಾಗ್ಯೂ, ಮೊದಲು ಹರ್ಷಿತ್ ಮತ್ತು ನಂತರ ಕೊಹ್ಲಿ ಔಟ್ ಆಗುವುದರೊಂದಿಗೆ, ಸೋಲು ಖಚಿತವಾಯಿತು. ಅಂತಿಮವಾಗಿ, ಭಾರತವು 46 ಓವರ್‌ಗಳಲ್ಲಿ 296 ರನ್‌ಗಳಿಗೆ ಆಲೌಟ್ ಆಯಿತು. ನ್ಯೂಜಿಲೆಂಡ್ ಪರ, ಕ್ರಿಶ್ಚಿಯನ್ ಕ್ಲಾರ್ಕ್ ಮತ್ತು ಜ್ಯಾಕ್ ಫೋಕ್ಸ್ ತಲಾ ಮೂರು ವಿಕೆಟ್‌ಗಳನ್ನು ಪಡೆದರೆ, ಲೆನಾಕ್ಸ್ ಕೂಡ ಎರಡು ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 pm, Sun, 18 January 26

ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ
ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ
ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ
ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ
ಬೋಡೋ ಸಾಂಸ್ಕೃತಿಕ ವೈಭವ ವೀಕ್ಷಿಸಿದ ಪ್ರಧಾನಿ ಮೋದಿ
ಬೋಡೋ ಸಾಂಸ್ಕೃತಿಕ ವೈಭವ ವೀಕ್ಷಿಸಿದ ಪ್ರಧಾನಿ ಮೋದಿ
‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್
‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು
ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ
ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ
ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ
ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ
‘37 ಕೋಟಿ ವೋಟ್ ಅವನಿಗೆ ಬಿದ್ದಿದೆ’; ಹನುಮಂತನ ಪ್ರಕಾರವೂ ಗಿಲ್ಲಿನೇ ವಿನ್ನರ್
‘37 ಕೋಟಿ ವೋಟ್ ಅವನಿಗೆ ಬಿದ್ದಿದೆ’; ಹನುಮಂತನ ಪ್ರಕಾರವೂ ಗಿಲ್ಲಿನೇ ವಿನ್ನರ್