AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NZ vs SL: ಬೆಂಗಳೂರಿನಲ್ಲಿ ನ್ಯೂಜಿಲೆಂಡ್​ಗೆ ಮಹತ್ವದ ಪಂದ್ಯ; ಮಳೆಯಿಂದ ಪಂದ್ಯ ರದ್ದಾಗುವ ಸಾಧ್ಯತೆ..!

M Chinnaswamy Stadium Weather Forecast: ಈ ಉಭಯ ತಂಡಗಳ ಹೈವೋಲ್ಟೇಜ್ ಕದನ ಇಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಕೆಲವು ದಿನಗಳಿಂದ ನಗರದಲ್ಲಿ ಮಳೆ ಸುರಿಯುತ್ತಿರುವುದರಿಂದ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಆತಂಕದಲ್ಲಿ ಕೇನ್ ಪಡೆ ಇದೆ.

NZ vs SL: ಬೆಂಗಳೂರಿನಲ್ಲಿ ನ್ಯೂಜಿಲೆಂಡ್​ಗೆ ಮಹತ್ವದ ಪಂದ್ಯ; ಮಳೆಯಿಂದ ಪಂದ್ಯ ರದ್ದಾಗುವ ಸಾಧ್ಯತೆ..!
ಬೆಂಗಳೂರು ಹವಾಮಾನ ವರದಿ
ಪೃಥ್ವಿಶಂಕರ
|

Updated on: Nov 09, 2023 | 7:18 AM

Share

ಏಕದಿನ ವಿಶ್ವಕಪ್ 2023 ರ (ICC World Cup 2023) 41 ನೇ ಪಂದ್ಯವು ನ್ಯೂಜಿಲೆಂಡ್ ಮತ್ತು ಶ್ರೀಲಂಕಾ (New Zealand vs Sri Lanka) ನಡುವೆ ನಡೆಯಲಿದೆ. ಏಕದಿನ ವಿಶ್ವಕಪ್ ಸೆಮಿಫೈನಲ್‌ಗೆ ಈಗಾಗಲೇ 3 ತಂಡಗಳು ಪ್ರವೇಶ ಪಡೆದಿವೆ. ಇದರಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಸೇರಿವೆ. ಈಗ ಉಳಿದಿರುವ ಒಂದು ಸ್ಥಾನಕ್ಕೆ 3 ತಂಡಗಳು ಪೈಪೋಟಿ ನಡೆಸಲಿವೆ. ಈ 3 ತಂಡಗಳ ಪೈಕಿ ಅಫ್ಘಾನಿಸ್ತಾನ, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ಸೇರಿವೆ. ಹಾಗಾಗಿ ಸೆಮಿಫೈನಲ್​ಗೆ ಟಿಕೆಟ್ ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ನ್ಯೂಜಿಲೆಂಡ್‌ಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಮತ್ತೊಂದೆಡೆ ಈಗಾಗಲೇ ವಿಶ್ವಕಪ್​ನಿಂದ ಹೊರಬಿದ್ದಿರುವ ಶ್ರೀಲಂಕಾಗೆ ಇದು ಕೇವಲ ಔಪಚಾರಿಕ ಪಂದ್ಯವಾಗಿದೆ. ಆದರೆ ಸತತ ಸೋಲುಗಳಿಂದ ಕಂಗೆಟ್ಟಿದ್ದರೂ ಶ್ರೀಲಂಕಾ ತಂಡವನ್ನು ನ್ಯೂಜಿಲೆಂಡ್ ಎಂದಿಗೂ ಕಡಿಮೆ ಅಂದಾಜು ಮಾಡುವಂತಿಲ್ಲ. ಹೀಗಾಗಿ ಸೆಮಿಸ್​ಗೇರಬೇಕೆಂದರೆ, ಕಿವೀಸ್ ಪಡೆ ಈ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕಾಗಿದೆ. ಈ ಉಭಯ ತಂಡಗಳ ಹೈವೋಲ್ಟೇಜ್ ಕದನ ಇಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಕೆಲವು ದಿನಗಳಿಂದ ನಗರದಲ್ಲಿ ಮಳೆ ಸುರಿಯುತ್ತಿರುವುದರಿಂದ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಆತಂಕದಲ್ಲಿ ಕೇನ್ ಪಡೆ ಇದೆ.

ಬೆಂಗಳೂರಿನ ಹವಾಮಾನ ವರದಿ

ಗುರುವಾರ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಶೇ.80ರಷ್ಟಿದೆ ಎಂದು ಹವಾಮಾನ ವರದಿಯಲ್ಲಿ ತಿಳಿಸಲಾಗಿದೆ. ಬೆಳಗ್ಗೆ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಪಂದ್ಯ ಆರಂಭವಾಗುವ ವೇಳೆಗೆ ಅಂದರೆ ಮಧ್ಯಾಹ್ನ 2 ಗಂಟೆಯ ನಂತರ ಮಳೆಯ ಸಾಧ್ಯತೆ ಶೇ.50ಕ್ಕೆ ಇಳಿಕೆಯಾಗಲಿದೆ. ಮಳೆಯಿಂದಾಗಿ ಟಾಸ್‌ ವಿಳಂಬವಾಗುವ ಸಾಧ್ಯತೆ ಇದೆ. ಇದಾದ ಬಳಿಕ ಸಂಜೆಯೂ ಮಳೆಯಾಗುವ ಸಾಧ್ಯತೆ ಇದ್ದು, ಪಂದ್ಯದುದ್ದಕ್ಕೂ ಮಳೆ ಸುರಿಯಲ್ಲಿದೆ ಎಂದು ವರದಿಯಾಗಿದೆ.

ಮಳೆ ಬಂದರೆ ನ್ಯೂಜಿಲೆಂಡ್​ಗೆ ನಷ್ಟ

ಒಂದು ವೇಳೆ ಮಳೆ ಬಂದು ಪಂದ್ಯ ನಿಂತರೆ ನ್ಯೂಜಿಲೆಂಡ್‌ಗೆ ಸೆಮಿಸ್ ಲೆಕ್ಕಾಚಾರದಲ್ಲಿ ಭಾರಿ ಹಿನ್ನಡೆಯುಂಟಾಗಲಿದೆ. ಶ್ರೀಲಂಕಾ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಆದರೆ ನ್ಯೂಜಿಲೆಂಡ್ ಈ ಪಂದ್ಯವನ್ನು ಆಡಲು ಸಾಧ್ಯವಾಗದಿದ್ದರೆ, ಅದು ಸೆಮಿಫೈನಲ್ ತಲುಪಲು ಇತರ ತಂಡಗಳ ಫಲಿತಾಂಶದ ಮೇಲೆ ಅವಲಂಬಿತವಾಗಬೇಕಾಗುತ್ತದೆ. ಈ ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ 1 ಅಂಕ ನೀಡಲಾಗುವುದು. ಇಂತಹ ಪರಿಸ್ಥಿತಿಯಲ್ಲಿ ನ್ಯೂಜಿಲೆಂಡ್ ಕೇವಲ 9 ಅಂಕಗಳನ್ನು ಗಳಿಸಲಿದೆ. ಇಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಂಡಗಳು ತಮ್ಮ ತಮ್ಮ ಮುಂದಿನ ಪಂದ್ಯಗಳನ್ನು ಗೆಲ್ಲುವ ಮೂಲಕ 10 ಅಂಕಗಳನ್ನು ತಲುಪುವ ಅವಕಾಶವನ್ನು ಹೊಂದಿರುತ್ತದೆ. ಎಲ್ಲಾ ತಂಡಗಳು ತಮ್ಮ ಪಂದ್ಯಗಳನ್ನು ಗೆದ್ದು ತಲಾ 10 ಅಂಕಗಳನ್ನು ಗಳಿಸಿದರೆ, ನೆಟ್ ರನ್ ರೇಟ್ ಆಧಾರದ ಮೇಲೆ ಯಾವ ತಂಡವು ಭಾರತದೊಂದಿಗೆ ಸೆಮಿಫೈನಲ್ ಆಡಲಿದೆ ಎಂಬುದನ್ನು ನಿರ್ಧರಿಸಲಾಗುತ್ತದೆ.

ಚಿನ್ನಸ್ವಾಮಿ ಪಿಚ್ ವರದಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ವರ್ಗ ಎನಿಸಿಕೊಂಡಿದೆ. ಕಳೆದ ಪಂದ್ಯದಲ್ಲಿ ನ್ಯೂಜಿಲೆಂಡ್ 401 ರನ್ ಕಲೆ ಹಾಕಿದ ಹೊರತಾಗಿಯೂ ಈ ಪಂದ್ಯದಲ್ಲಿ ಸೋಲುಂಡಿತ್ತು. ಮಳೆ ಪೀಡಿತ ಈ ಪಂದ್ಯವನ್ನು ಪಾಕಿಸ್ತಾನ ತಂಡ ಡಕ್ವರ್ತ್​ ಲೂಯಿಸ್ ನಿಯಮದಡಿಯಲ್ಲಿ 21 ರನ್​ಗಳಿಂದ ಗೆದ್ದುಕೊಂಡಿತ್ತು. ಹೀಗಾಗಿ ಈ ಪಂದ್ಯದಲ್ಲೂ ರನ್ ಸುರಿಮಳೆಯಾಗಬಹುದೆಂದು ನಿರೀಕ್ಷಿಸಲಾಗಿದೆ. ಇನ್ನು ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ