AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ರ‍್ಯಾಂಕಿಂಗ್ ಪ್ರಕಟ: ಟಾಪ್-3 ನಲ್ಲಿ ಕಾಣಿಸಿಕೊಂಡ ಶುಭ್​ಮನ್ ಗಿಲ್

ODI Player Rankings: ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್​ ಬಳಿಕ ಏಷ್ಯನ್ ದೇಶಗಳ ಆಟಗಾರರ ಶ್ರೇಯಾಂಕದಲ್ಲಿ ಭಾರೀ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಮುಂಬರುವ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಆಟಗಾರ ಶುಭ್​ಮನ್ ಗಿಲ್ ಹಾಗೂ ಪಾಕ್ ಬ್ಯಾಟರ್ ಇಮಾಮ್ ಉಲ್ ಹಕ್ ಮಿಂಚಿದರೆ ಉತ್ತಮ ರೇಟಿಂಗ್​ನೊಂದಿಗೆ 2ನೇ ಮತ್ತು 3ನೇ ಸ್ಥಾನಕ್ಕೇರಬಹುದು.

ಏಕದಿನ ರ‍್ಯಾಂಕಿಂಗ್ ಪ್ರಕಟ: ಟಾಪ್-3 ನಲ್ಲಿ ಕಾಣಿಸಿಕೊಂಡ ಶುಭ್​ಮನ್ ಗಿಲ್
Shubman Gill-Babar Azam
TV9 Web
| Edited By: |

Updated on: Sep 06, 2023 | 6:17 PM

Share

ICC ODI Rankings: ಐಸಿಸಿ ಏಕದಿನ ಬ್ಯಾಟರ್​ಗಳ ಹೊಸ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ನೂತನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಅಗ್ರಸ್ಥಾನವನ್ನು ಅಲಂಕರಿಸಿದ್ದಾರೆ. ಏಷ್ಯಾಕಪ್​ನಲ್ಲಿ ನೇಪಾಳ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಬಾಬರ್ ಇದೀಗ ತಮ್ಮ ರೇಟಿಂಗ್ ಅನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ. ಇನ್ನು ಟೀಮ್ ಇಂಡಿಯಾದ ಯುವ ಬ್ಯಾಟರ್ ಶುಭ್​ಮನ್ ಗಿಲ್ ಈ ಬಾರಿ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ನೇಪಾಳ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದ್ದ ಶುಭ್​ಮನ್ ಗಿಲ್ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಒಂದು ಸ್ಥಾನ ಜಿಗಿತ ಕಂಡಿದ್ದಾರೆ. ಹಾಗೆಯೇ ಶುಭ್​ಮನ್​ ಗಿಲ್ ಅವರನ್ನು ಹೊರತುಪಡಿಸಿ ಭಾರತದ ಬೇರೆ ಯಾವುದೇ ಬ್ಯಾಟರ್ ಟಾಪ್​-5 ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಇದಾಗ್ಯೂ ಅಗ್ರ ಹತ್ತರಲ್ಲಿ ವಿರಾಟ್ ಕೊಹ್ಲಿ ಕೊನೆಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ಶ್ರೇಯಾಂಕ ಪಟ್ಟಿ:

  1. ಬಾಬರ್ ಆಝಂ (ಪಾಕಿಸ್ತಾನ್)- 882 ರೇಟಿಂಗ್
  2. ರಸ್ಸಿ ವಂಡೆರ್ ಡುಸ್ಸೆನ್ (ಸೌತ್ ಆಫ್ರಿಕಾ)- 777 ರೇಟಿಂಗ್
  3. ಶುಭ್​ಮನ್ ಗಿಲ್ (ಭಾರತ)- 750 ರೇಟಿಂಗ್
  4. ಇಮಾಮ್ ಉಲ್ ಹಕ್ (ಪಾಕಿಸ್ತಾನ್)- 732 ರೇಟಿಂಗ್
  5. ಹ್ಯಾರಿ ಟೆಕ್ಟರ್ (ಐರ್ಲೆಂಡ್)- 726 ರೇಟಿಂಗ್
  6. ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)- 726 ರೇಟಿಂಗ್
  7. ಫಖರ್ ಝಮಾನ್ (ಪಾಕಿಸ್ತಾನ್)- 721 ರೇಟಿಂಗ್
  8. ಕ್ವಿಂಟನ್ ಡಿಕಾಕ್ (ಸೌತ್ ಆಫ್ರಿಕಾ)- 718 ರೇಟಿಂಗ್
  9. ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 702 ರೇಟಿಂಗ್
  10. ವಿರಾಟ್ ಕೊಹ್ಲಿ (ಭಾರತ)- 695 ರೇಟಿಂಗ್

ಐಸಿಸಿ ಬೌಲರ್​ಗಳ ನೂತನ ಟಾಪ್-10 ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಏಕೈಕ ಬೌಲರ್ ಮಾತ್ರ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅಗ್ರಸ್ಥಾನದಲ್ಲಿದ್ದರೆ, ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 8ನೇ ಸ್ಥಾನ ಅಲಂಕರಿಸಿದ್ದಾರೆ.

ಐಸಿಸಿ ಏಕದಿನ ಬೌಲರ್​ಗಳ ನೂತನ ಶ್ರೇಯಾಂಕ ಪಟ್ಟಿ:

  1. ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 705 ರೇಟಿಂಗ್.
  2. ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ)- 686 ರೇಟಿಂಗ್
  3. ಮ್ಯಾಟ್ ಹೆನ್ರಿ (ನ್ಯೂಝಿಲೆಂಡ್)- 667 ರೇಟಿಂಗ್
  4. ಟ್ರೆಂಟ್ ಬೌಲ್ಟ್ (ನ್ಯೂಝಿಲೆಂಡ್)- 660 ರೇಟಿಂಗ್
  5. ಶಾಹೀನ್ ಅಫ್ರಿದಿ (ಪಾಕಿಸ್ತಾನ್)- 659 ರೇಟಿಂಗ್
  6. ಮುಜೀಬ್ ಉರ್ ರೆಹಮಾನ್ (ಅಫ್ಘಾನಿಸ್ತಾನ್)- 657 ರೇಟಿಂಗ್
  7. ರಶೀದ್ ಖಾನ್ (ಅಫ್ಘಾನಿಸ್ತಾನ್)- 655 ರೇಟಿಂಗ್
  8. ಮೊಹಮ್ಮದ್ ಸಿರಾಜ್ (ಭಾರತ)- 652 ರೇಟಿಂಗ್
  9. ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 652 ರೇಟಿಂಗ್
  10. ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)- 624 ರೇಟಿಂಗ್.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಏಷ್ಯಾಕಪ್​ ಬಳಿಕ ಶ್ರೇಯಾಂಕದಲ್ಲಿ ಬದಲಾವಣೆ:

ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್​ ಬಳಿಕ ಏಷ್ಯನ್ ದೇಶಗಳ ಆಟಗಾರರ ಶ್ರೇಯಾಂಕದಲ್ಲಿ ಭಾರೀ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಮುಂಬರುವ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಆಟಗಾರ ಶುಭ್​ಮನ್ ಗಿಲ್ ಹಾಗೂ ಪಾಕ್ ಬ್ಯಾಟರ್ ಇಮಾಮ್ ಉಲ್ ಹಕ್ ಮಿಂಚಿದರೆ ಉತ್ತಮ ರೇಟಿಂಗ್​ನೊಂದಿಗೆ 2ನೇ ಮತ್ತು 3ನೇ ಸ್ಥಾನಕ್ಕೇರಬಹುದು. ಹೀಗಾಗಿ ಏಷ್ಯಾಕಪ್ ಮುಕ್ತಾಯದ ಬೆನ್ನಲ್ಲೇ ಶ್ರೇಯಾಂಕ ಪಟ್ಟಿಯಲ್ಲೂ ಮಹತ್ವದ ಬದಲಾವಣೆ  ಕಂಡು ಬರುವ ಸಾಧ್ಯತೆಯಿದೆ.

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ