AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಬಾಂಗ್ಲಾದೇಶಕ್ಕೆ ಸುಲಭ ಜಯ; ಮೊದಲ ಅಭ್ಯಾಸ ಪಂದ್ಯ ಸೋತ ಲಂಕಾ

ODI World Cup 2023: ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಇನ್ನು 48 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್​ಗಳಿಂದ ಸೋಲಿಸಿದೆ. ಆದ್ದರಿಂದ ಈ ಬಾರಿಯ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡವನ್ನು ಕಡಿಮೆ ಅಂದಾಜು ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಶಕೀಬ್ ಪಡೆ ಇತರೆ ತಂಡಗಳಿಗೆ ನೀಡಿದೆ.

ODI World Cup 2023: ಬಾಂಗ್ಲಾದೇಶಕ್ಕೆ ಸುಲಭ ಜಯ; ಮೊದಲ ಅಭ್ಯಾಸ ಪಂದ್ಯ ಸೋತ ಲಂಕಾ
ಬಾಂಗ್ಲಾದೇಶ ತಂಡ
ಪೃಥ್ವಿಶಂಕರ
|

Updated on:Sep 30, 2023 | 7:03 AM

Share

ಪ್ರಮುಖ ಟೂರ್ನಿಗಳಲ್ಲಿ ಬಾಂಗ್ಲಾದೇಶ ಹಲವು ಬಾರಿ ದಿಗ್ಗಜ ತಂಡಗಳ ಕನಸುಗಳನ್ನು ಭಗ್ನಗೊಳಿಸಿದೆ. ಪ್ರಶಸ್ತಿ ತಲುಪಲು ಸಾಧ್ಯವಾಗದಿದ್ದರೂ ಯಾವುದೇ ತಂಡವನ್ನು ಸೋಲಿಸುವ ಸಾಮರ್ಥ್ಯ ಬಾಂಗ್ಲಾದೇಶ ತಂಡಕ್ಕಿದೆ. ಕಳೆದ ಕೆಲವು ವರ್ಷಗಳಲ್ಲಿ ಬಾಂಗ್ಲಾದೇಶ ಕ್ರಿಕೆಟ್ ಹಲವು ಧನಾತ್ಮಕ ಬದಲಾವಣೆಗಳನ್ನು ಕಂಡಿದೆ. ಏಷ್ಯಾಕಪ್​ನಲ್ಲೂ (Asia Cup 2023) ಬಾಂಗ್ಲಾದೇಶ ಭಾರತವನ್ನು ಸೋಲಿಸಿದ್ದನ್ನು ಮರೆಯುವಂತಿಲ್ಲ. ಇದೀಗ ವಿಶ್ವಕಪ್ (ODI World Cup 2023) ಟೂರ್ನಿಗೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಮತ್ತೊಮ್ಮೆ ಇದೇ ರೀತಿಯ ಪ್ರದರ್ಶನ ನೀಡಿದೆ. ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು (Sri lanka vs Bangladesh) ಇನ್ನು 48 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್​ಗಳಿಂದ ಸೋಲಿಸಿದೆ. ಆದ್ದರಿಂದ ಈ ಬಾರಿಯ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡವನ್ನು ಕಡಿಮೆ ಅಂದಾಜು ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಶಕೀಬ್ ಪಡೆ ಇತರೆ ತಂಡಗಳಿಗೆ ನೀಡಿದೆ.

ಶತಕದ ಜೊತೆಯಾಟ

ಈ ಪಂದ್ಯದಲ್ಲಿ ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಪಾತುಮ್ ನಿಸ್ಸಾಂಕ ಹಾಗೂ ಕುಸಾಲ್ ಪೆರೇರಾ ಶತಕದ ಜೊತೆಯಾಟ ನೀಡಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಈ ವೇಳೆ ನಿಸ್ಸಾಂಕ 68 ರನ್​ಗಳ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದರೆ, ಪೆರೇರಾ 34 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

ODI World Cup 2023: ಬಾಂಗ್ಲಾದೇಶ ತಂಡಕ್ಕೆ ಬಿಗ್ ಶಾಕ್; ನಾಯಕನಿಗೆ ಇಂಜುರಿ..!

ಆದರೆ ತಂಡದ ಮಧ್ಯಮ ಕ್ರಮಾಂಕ ಮತ್ತೊಮ್ಮೆ ವಿಫಲವಾಯಿತು. ಇನ್ನು ಕೆಳಕ್ರಮಾಂಕದಲ್ಲಿ ಬಂದ ತಂಡದ ಆಲ್​ರೌಂಡರ್ ಧನಂಜಯ ಡಿ ಸಿಲ್ವಾ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು 200ರ ಗಡಿ ದಾಟಿಸಿದರು. ಅಂತಿಮವಾಗಿ ಲಂಕಾ ತಂಡ 50ನೇ ಓವರ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 263 ರನ್ ಕಲೆಹಾಕಿತು.

ಬಾಂಗ್ಲಾ ಆರಂಭಿಕರ ಅಬ್ಬರ

ಶ್ರೀಲಂಕಾ ನೀಡಿದ 263 ರನ್‌ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ ಪರ ತಂಜಿದ್ ಹಸನ್ ಮತ್ತು ಲಿಟ್ಟನ್ ದಾಸ್ ಮೈದಾನಕ್ಕಿಳಿದರು. ಈ ಜೋಡಿ ಶ್ರೀಲಂಕಾ ಬೌಲರ್‌ಗಳ ಬೆವರಿಳಿಸಿ, ಇವರಿಬ್ಬರು ಮೊದಲ ವಿಕೆಟ್‌ಗೆ 131 ರನ್‌ಗಳ ಜೊತೆಯಾಟ ನೀಡಿದರು. ಲಿಟ್ಟನ್ ದಾಸ್ 61 ರನ್ ಗಳಿಸಿ ಔಟಾದ ನಂತರ, ತಂಜಿದ್ ಮುನ್ನಡೆ ಕಾಯ್ದುಕೊಂಡರು. 88 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 84 ರನ್ ಸಿಡಿಸಿದರು. ಅವರಿಗೆ ಮೆಹದಿ ಹಸನ್ ಉತ್ತಮ ಬೆಂಬಲ ನೀಡಿದರು. ಆದರೆ ತೋಹಿದ್ ಹೃದಯ್ ವಿಶೇಷವಾದ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಮುಶ್ಫಿಕರ್ ರಹೀಮ್ ಮತ್ತು ಮೆಹದಿ ಹಸನ್ ಬಾಂಗ್ಲಾದೇಶಕ್ಕೆ ಜಯ ತಂದುಕೊಟ್ಟರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:54 am, Sat, 30 September 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ