AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ರಿಷಭ್ ಪಂತ್ ಗಾಯದ ಬಗ್ಗೆ ಮಾಹಿತಿ ನೀಡಿದ ಬೌಲಿಂಗ್ ಕೋಚ್

Rishabh Pant injury update: ಕೊಲಂಬೊದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್‌ನಲ್ಲಿ ರಿಷಭ್ ಪಂತ್ ಭುಜದ ಗಾಯದಿಂದಾಗಿ ಮೂರನೇ ದಿನ ಆಡಲಿಲ್ಲ. ಅವರ ಬದಲಿಗೆ ಧ್ರುವ್ ಜುರೇಲ್ ವಿಕೆಟ್ ಕೀಪಿಂಗ್ ನಿರ್ವಹಿಸಿದರು. ನಾಲ್ಕನೇ ದಿನ ಪಂತ್ ಆಡುವ ಭರವಸೆ ಇದೆ. ವೈರಲ್ ಜ್ವರದಿಂದ ಕುಲ್ದೀಪ್ ಯಾದವ್ ಅಲಭ್ಯರಾಗಿದ್ದಾರೆ.

IND vs SL: ರಿಷಭ್ ಪಂತ್ ಗಾಯದ ಬಗ್ಗೆ ಮಾಹಿತಿ ನೀಡಿದ ಬೌಲಿಂಗ್ ಕೋಚ್
Rishabh Pant
ಪೃಥ್ವಿಶಂಕರ
|

Updated on: Aug 25, 2026 | 10:45 PM

Share

ಕೊಲಂಬೊದಲ್ಲಿ (Colombo Test) ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ (India vs Sri Lanka) ಮೇಲುಗೈ ಸಾಧಿಸಿದೆ. ಆದಾಗ್ಯೂ ತಂಡದ ಅನುಭವಿ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ಭುಜದ ಗಾಯದಿಂದಾಗಿ ಮೂರನೇ ದಿನದಂದು ತಂಡದೊಂದಿಗೆ ಮೈದಾನಕ್ಕೆ ಇಳಿಯಲಿಲ್ಲ. ಹೀಗಾಗಿ ಅವರ ಬದಲಿಗೆ ಧ್ರುವ್ ಜುರೇಲ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಿದರು. ಇದೀಗ ಮೂರನೇ ದಿನದಾಟ ಮುಗಿದ ಬಳಿಕ ರಿಷಭ್ ಪಂತ್ ಮೈದಾನಕ್ಕಿಳಿಯುವ ಬಗ್ಗೆ ಮಾಹಿತಿ ನೀಡಿದ ತಂಡದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್, ಪಂತ್ ಆಡುವ ಬಗ್ಗೆ ಭರವಸೆ ನೀಡಿದ್ದಾರೆ.

ಆಡುವ ಭರವಸೆ ಇದೆ

‘ರಿಷಭ್ ಭುಜದ ಗಾಯದಿಂದ ಬಳಲುತ್ತಿದ್ದಾರೆ. ಅವರಿಗೆ ತುಂಬಾ ನೋವಾಗಿದೆ. ಇಂದು ಬೆಳಿಗ್ಗೆ ಅವರು ಮುಕ್ತವಾಗಿ ಅಭ್ಯಾಸ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ನಾವು ಇಂದು ಅವರನ್ನು ಮೈದಾನಕ್ಕಿಳಿಸಲಿಲ್ಲ. ನಾವು ಅವರನ್ನು ರಾತ್ರಿಯಿಡೀ ಮೇಲ್ವಿಚಾರಣೆ ಮಾಡುತ್ತೇವೆ ಮತ್ತು ಬುಧವಾರ ಅವರು ಆಡುವ ಭರವಸೆ ಇದೆ. ರಿಷಭ್​ ಪಂತ್​ಗೆ ಆಟದ ಪರಿಸ್ಥಿತಿಯನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಅಸಾಧಾರಣವಾಗಿರುವುದರಿಂದ ಅವರನ್ನು ಮೈದಾನದಲ್ಲಿರುವಂತೆ ನೋಡಿಕೊಳ್ಳುವುದು ಮುಖ್ಯವಾಗಿದೆ” ಎಂದು ಮಾರ್ಕೆಲ್ ಹೇಳಿದರು.

ಕುಲ್ದೀಪ್​ಗೆ ವೈರಲ್ ಜ್ವರ

ಇನ್ನು ಕುಲ್ದೀಪ್​ರನ್ನು ಆಡಿಸದಿರುವ ಬಗ್ಗೆ ಮಾಹಿತಿ ನೀಡಿದ ಮಾರ್ಕೆಲ್, ‘ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಕುಲ್ದೀಪ್ ಯಾದವ್ ವೈರಲ್ ಜ್ವರದಿಂದ ಬಳಲದಿದ್ದರೆ, ಅವರು ಆಯ್ಕೆ ಪ್ರಕ್ರಿಯೆಯಲ್ಲಿ ಇರುತ್ತಿದ್ದರು. ಕುಲ್ದೀಪ್ ವೈರಲ್ ಜ್ವರದಿಂದ ಬಳಲುತ್ತಿರುವ ಕಾರಣ ಕೊಲಂಬೊ ಟೆಸ್ಟ್‌ಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ ಎಂದಿದ್ದಾರೆ. ಇನ್ನು ನಾಲ್ಕನೇ ದಿನದಾಟದ ಯೋಜನೆಯ ಬಗ್ಗೆ ಮಾಹಿತಿ ನೀಡಿದ ಮಾರ್ಕೆಲ್,‘ ಬುಧವಾರ ಟೀಂ ಇಂಡಿಯಾ ಶ್ರೀಲಂಕಾದ ಉಳಿದ ಎರಡು ವಿಕೆಟ್‌ಗಳನ್ನು ಸಾಧ್ಯವಾದಷ್ಟು ಬೇಗ ಪಡೆಯುವ ಮೂಲಕ ಮುನ್ನಡೆ ಕಾಯ್ದುಕೊಳ್ಳಲು ಬಯಸುತ್ತದೆ. ಹೀಗಾಗಿ ಬೌಲರ್‌ಗಳು ಸರಿಯಾದ ಲೈನ್ ಮತ್ತು ಲೆಂತ್‌ನಲ್ಲಿ ನಿರಂತರವಾಗಿ ಬೌಲಿಂಗ್ ಮಾಡಬೇಕಾಗುತ್ತದೆ ಮತ್ತು ಪಾಲುದಾರಿಕೆಯಲ್ಲಿ ವಿಕೆಟ್‌ಗಳನ್ನು ಪಡೆಯಬೇಕಾಗುತ್ತದೆ ಎಂದಿದ್ದಾರೆ.

ಜಡೇಜಾ ಮಾತು ಕೇಳಿ ಸತತ 22 ಬಾರಿ ಯಾಮಾರಿರುವ ನಾಯಕ

ಲಂಕಾ ಇನ್ನಿಂಗ್ಸ್ ಹೀಗಿದೆ

ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆತಿಥೇಯ ಶ್ರೀಲಂಕಾ ತಂಡ ಮೂರನೇ ದಿನದಾಟದಂತ್ಯಕ್ಕೆ 8 ವಿಕೆಟ್‌ಗಳನ್ನು ಕಳೆದುಕೊಂಡು 265 ರನ್ ಕಲೆಹಾಕಿದೆ. ಮಳೆಯಿಂದಾಗಿ ಮೂರನೇ ದಿನದಾಟವನ್ನು ಬೇಗನೇ ಅಂತ್ಯಗೊಳಿಸಲಾಯಿತು. ಮೂರನೇ ದಿನದಾಟದಂತ್ಯಕ್ಕೆ ಶ್ರೀಲಂಕಾ ಪರ ಲಹಿರು ಕುಮಾರ 8 ರನ್ ಮತ್ತು ಸೋನಲ್ ದಿನುಷಾ 85 ರನ್ ಬಾರಿಸಿ ಕ್ರೀಸ್‌ನಲ್ಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?