T20 World Cup 2024: ಭಾರತ ಟಿ20 ವಿಶ್ವಕಪ್ ಗೆದ್ದು ಇಂದಿಗೆ 1 ತಿಂಗಳು; ವಿಶೇಷ ವಿಡಿಯೋ ಹಂಚಿಕೊಂಡ ಬಿಸಿಸಿಐ

T20 World Cup 2024: 2024 ರ ಟಿ20 ವಿಶ್ವಕಪ್ ಮುಗಿದು ಇಂದಿಗೆ ಸರಿಯಾಗಿ ಒಂದು ತಿಂಗಳು ಮುಗಿದಿದೆ. ಜೂನ್ 29 ರಂದು ವೆಸ್ಟ್ ಇಂಡೀಸ್​ನಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 6 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

T20 World Cup 2024: ಭಾರತ ಟಿ20 ವಿಶ್ವಕಪ್ ಗೆದ್ದು ಇಂದಿಗೆ 1 ತಿಂಗಳು; ವಿಶೇಷ ವಿಡಿಯೋ ಹಂಚಿಕೊಂಡ ಬಿಸಿಸಿಐ
|

Updated on: Jul 29, 2024 | 3:29 PM

2024 ರ ಟಿ20 ವಿಶ್ವಕಪ್ ಮುಗಿದು ಇಂದಿಗೆ ಸರಿಯಾಗಿ ಒಂದು ತಿಂಗಳು ಮುಗಿದಿದೆ. ಜೂನ್ 29 ರಂದು ವೆಸ್ಟ್ ಇಂಡೀಸ್​ನಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 6 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ವಾಸ್ತವವಾಗಿ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟ ಟೀಂ ಇಂಡಿಯಾ ಕೈಯಿಂದ ಭಾಗಶಃ ಜಾರಿ ಹೋಗಿತ್ತು. ಆದರೆ ಕೊನೆವರೆಗೂ ಹೋರಾಟ ಬಿಡದ ಟೀಂ ಇಂಡಿಯಾ ಆಟಗಾರರು ಅಸಾಧ್ಯವಾದುದ್ದನ್ನು ಸಾಧ್ಯವಾಗಿಸಿದ್ದರು.

ವಾಸ್ತವವಾಗಿ ಆಫ್ರಿಕಾ ಗೆಲುವಿಗೆ 30 ಎಸೆತಗಳಲ್ಲಿ 29 ರನ್ ಬೇಕಿತ್ತು. ಅಲ್ಲದೆ ಕ್ರಿಸ್​ನಲ್ಲಿ ಎನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್​ರಂತಹ ಸ್ಫೋಟಕ ಬ್ಯಾಟ್ಸ್‌ಮನ್​ಗಳಿದ್ದರು. ಹೀಗಾಗಿ ಈ ಬಾರಿ ಆಫ್ರಿಕಾ ತಂಡವೇ ಟಿ20 ವಿಶ್ವಕಪ್ ಚಾಂಪಿಯನ್ ಆಗಲಿದೆ ಎಂಬುದು ಅಲ್ಲರ ಅಭಿಪ್ರಾಯವಾಗಿತ್ತು. ಆದರೆ ಭಾರತದ ಬೌಲರ್​ಗಳ ಶತಪ್ರಯತ್ನದಿಂದಾಗಿ ಕೊನೆಯಲ್ಲಿ ಪಂದ್ಯ ಭಾರತದತ್ತ ವಾಲಿತ್ತು. ಅದಕ್ಕೆ ಪ್ರಮುಖ ಕಾರಣ 20ನೇ ಓವರ್​ನ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಬಾರಿಸಿದ ದೊಡ್ಡ ಹೊಡೆತವನ್ನು ಸೂರ್ಯಕುಮಾರ್ ಯಾದವ್ ಕ್ಯಾಚ್ ಆಗಿ ಪರಿವರ್ತಿಸಿದ್ದು.

ಆರಂಭದಲ್ಲಿ ಎಲ್ಲರೂ ಇದು ಸಿಕ್ಸರ್ ಎಂದು ಭಾವಿಸಿದ್ದರು. ಆದರೆ ಸೂರ್ಯಕುಮಾರ್ ಯಾದವ್ ತನ್ನ ಸಮಯ ಪ್ರಜ್ಞೆ ಮೆರೆದು, ಸಿಕ್ಸರ್ ಹೊಗುತ್ತಿದ್ದ ಚೆಂಡನ್ನು ಕ್ಯಾಚ್ ಆಗಿ ಪರಿವರ್ತಿಸಿದರು. ಈ ಕ್ಯಾಚ್ ಟೀಂ ಇಂಡಿಯಾವನ್ನು ಚಾಂಪಿಯನ್ ಆಗಿ ಮಾಡಿತ್ತು. ಇದೀಗ ಈ ಕ್ಯಾಚ್ ಬಗ್ಗೆ ಸೂರ್ಯಕುಮಾರ್ ಮಾತನಾಡಿರುವ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

Follow us
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​