AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಯಾ ಮ್ಯಾಜಿಕ್: ಸಿರಾಜ್ ಬರೆದ ಐತಿಹಾಸಿಕ ದಾಖಲೆಗೆ ಒಂದು ವರ್ಷ

Asia Cup 2023 India vs Sri Lanka: ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು 6.1 ಓವರ್​ಗಳಲ್ಲಿ ಚೇಸ್ ಮಾಡಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತು.

ಮಿಯಾ ಮ್ಯಾಜಿಕ್: ಸಿರಾಜ್ ಬರೆದ ಐತಿಹಾಸಿಕ ದಾಖಲೆಗೆ ಒಂದು ವರ್ಷ
Mohammad Siraj
ಝಾಹಿರ್ ಯೂಸುಫ್
|

Updated on: Sep 17, 2024 | 12:43 PM

Share

ಅದು ಸೆಪ್ಟೆಂಬರ್ 17, 2023… ಆರ್​ ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ದಸುನ್ ಶಾನಕ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡವು 16 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಹೀಗೆ ಕೇವಲ 16 ಎಸೆತಗಳಲ್ಲಿ ಐದು ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದು ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಇದಾದ ಬಳಿಕ ಶುರುವಾಗಿದ್ದೇ ಮಿಯಾ ಮ್ಯಾಜಿಕ್. 4ನೇ ಓವರ್​ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ ಅವರ ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಒಂದೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್​ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು. ಅಷ್ಟೇ ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚಾಮಿಂಡ ವಾಸ್ ಈ ಸಾಧನೆ ಮಾಡಿದ್ದರು.

2003 ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ್ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಈ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ ಮೊಹಮ್ಮದ್ ಸಿರಾಜ್ ಹೊಸ ಇತಿಹಾಸ ನಿರ್ಮಿಸಿದ್ದರು.

ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು.

ಸಿರಾಜ್ ಭರ್ಜರಿ ಬೌಲಿಂಗ್ ವಿಡಿಯೋ:

51 ರನ್​ಗಳ ಸುಲಭ ಗುರಿಯನ್ನು ಟೀಮ್ ಇಂಡಿಯಾ 6.1 ಓವರ್​ಗಳಲ್ಲಿ ಚೇಸ್ ಮಾಡಿ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ 8ನೇ ಬಾರಿಗೆ ಏಷ್ಯಾಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದರು. ಈ ಐತಿಹಾಸಿಕ ಗೆಲುವಿಗೆ ಒಂದು ವರ್ಷ ಎಂಬುದೇ ವಿಶೇಷ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್ (ವಿಕೆಟ್ ಕೀಪರ್) , ಇಶಾನ್ ಕಿಶನ್ , ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ , ವಾಷಿಂಗ್ಟನ್ ಸುಂದರ್ , ಜಸ್​ಪ್ರೀತ್ ಬುಮ್ರಾ , ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!

ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ , ಕುಸಾಲ್ ಪೆರೇರ , ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್) , ಸದೀರ ಸಮರವಿಕ್ರಮ , ಚರಿತ್ ಅಸಲಂಕ , ಧನಂಜಯ ಡಿ ಸಿಲ್ವ , ದಸುನ್ ಶಾನಕ (ನಾಯಕ) , ದುನಿತ್ ವೆಲ್ಲಲಾಗೆ , ದುಶನ್ ಹೇಮಂತ , ಪ್ರಮೋದ್ ಮದುಶನ್ , ಮಥೀಶ ಪತಿರಾಣ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ