ಮಿಯಾ ಮ್ಯಾಜಿಕ್: ಸಿರಾಜ್ ಬರೆದ ಐತಿಹಾಸಿಕ ದಾಖಲೆಗೆ ಒಂದು ವರ್ಷ

Asia Cup 2023 India vs Sri Lanka: ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು 6.1 ಓವರ್​ಗಳಲ್ಲಿ ಚೇಸ್ ಮಾಡಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತು.

ಮಿಯಾ ಮ್ಯಾಜಿಕ್: ಸಿರಾಜ್ ಬರೆದ ಐತಿಹಾಸಿಕ ದಾಖಲೆಗೆ ಒಂದು ವರ್ಷ
Mohammad Siraj
Follow us
|

Updated on: Sep 17, 2024 | 12:43 PM

ಅದು ಸೆಪ್ಟೆಂಬರ್ 17, 2023… ಆರ್​ ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ದಸುನ್ ಶಾನಕ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡವು 16 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಹೀಗೆ ಕೇವಲ 16 ಎಸೆತಗಳಲ್ಲಿ ಐದು ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದು ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಇದಾದ ಬಳಿಕ ಶುರುವಾಗಿದ್ದೇ ಮಿಯಾ ಮ್ಯಾಜಿಕ್. 4ನೇ ಓವರ್​ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ ಅವರ ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಒಂದೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್​ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು. ಅಷ್ಟೇ ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚಾಮಿಂಡ ವಾಸ್ ಈ ಸಾಧನೆ ಮಾಡಿದ್ದರು.

2003 ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ್ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಈ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ ಮೊಹಮ್ಮದ್ ಸಿರಾಜ್ ಹೊಸ ಇತಿಹಾಸ ನಿರ್ಮಿಸಿದ್ದರು.

ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು.

ಸಿರಾಜ್ ಭರ್ಜರಿ ಬೌಲಿಂಗ್ ವಿಡಿಯೋ:

51 ರನ್​ಗಳ ಸುಲಭ ಗುರಿಯನ್ನು ಟೀಮ್ ಇಂಡಿಯಾ 6.1 ಓವರ್​ಗಳಲ್ಲಿ ಚೇಸ್ ಮಾಡಿ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ 8ನೇ ಬಾರಿಗೆ ಏಷ್ಯಾಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದರು. ಈ ಐತಿಹಾಸಿಕ ಗೆಲುವಿಗೆ ಒಂದು ವರ್ಷ ಎಂಬುದೇ ವಿಶೇಷ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್ (ವಿಕೆಟ್ ಕೀಪರ್) , ಇಶಾನ್ ಕಿಶನ್ , ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ , ವಾಷಿಂಗ್ಟನ್ ಸುಂದರ್ , ಜಸ್​ಪ್ರೀತ್ ಬುಮ್ರಾ , ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!

ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ , ಕುಸಾಲ್ ಪೆರೇರ , ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್) , ಸದೀರ ಸಮರವಿಕ್ರಮ , ಚರಿತ್ ಅಸಲಂಕ , ಧನಂಜಯ ಡಿ ಸಿಲ್ವ , ದಸುನ್ ಶಾನಕ (ನಾಯಕ) , ದುನಿತ್ ವೆಲ್ಲಲಾಗೆ , ದುಶನ್ ಹೇಮಂತ , ಪ್ರಮೋದ್ ಮದುಶನ್ , ಮಥೀಶ ಪತಿರಾಣ.

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!