AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಯಾ ಮ್ಯಾಜಿಕ್: ಸಿರಾಜ್ ಬರೆದ ಐತಿಹಾಸಿಕ ದಾಖಲೆಗೆ ಒಂದು ವರ್ಷ

Asia Cup 2023 India vs Sri Lanka: ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು 6.1 ಓವರ್​ಗಳಲ್ಲಿ ಚೇಸ್ ಮಾಡಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತು.

ಮಿಯಾ ಮ್ಯಾಜಿಕ್: ಸಿರಾಜ್ ಬರೆದ ಐತಿಹಾಸಿಕ ದಾಖಲೆಗೆ ಒಂದು ವರ್ಷ
Mohammad Siraj
ಝಾಹಿರ್ ಯೂಸುಫ್
|

Updated on: Sep 17, 2024 | 12:43 PM

Share

ಅದು ಸೆಪ್ಟೆಂಬರ್ 17, 2023… ಆರ್​ ಪ್ರೇಮದಾಸ ಮೈದಾನದಲ್ಲಿ ನಡೆದ ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ದಸುನ್ ಶಾನಕ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡವು 16 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಹೀಗೆ ಕೇವಲ 16 ಎಸೆತಗಳಲ್ಲಿ ಐದು ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದು ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡಕ್ಕೆ ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ಇದಾದ ಬಳಿಕ ಶುರುವಾಗಿದ್ದೇ ಮಿಯಾ ಮ್ಯಾಜಿಕ್. 4ನೇ ಓವರ್​ನ ಮೊದಲ ಎಸೆತದಲ್ಲಿ ಪಾತುಮ್ ನಿಸ್ಸಂಕಾ ಅವರ ವಿಕೆಟ್ ಪಡೆದ ಸಿರಾಜ್, ಮೂರನೇ ಎಸೆತದಲ್ಲಿ ಸದೀರ ಸಮರವಿಕ್ರಮ ಅವರನ್ನು ಎಲ್​ಬಿಡಬ್ಲ್ಯೂ ಬಲೆಗೆ ಕೆಡವಿದರು. ಇನ್ನು ನಾಲ್ಕನೇ ಎಸೆತದಲ್ಲಿ ಚರಿತ್ ಅಸಲಂಕಾ ಅವರನ್ನು ಔಟ್ ಮಾಡಿದರು. ಆರನೇ ಎಸೆತದಲ್ಲಿ ಧನಜಂಯ ಡಿಸಿಲ್ವಾ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಒಂದೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್​ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು. ಅಷ್ಟೇ ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ವಿಶ್ವದ 2ನೇ ಬೌಲರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಚಾಮಿಂಡ ವಾಸ್ ಈ ಸಾಧನೆ ಮಾಡಿದ್ದರು.

2003 ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ್ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಈ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ ಮೊಹಮ್ಮದ್ ಸಿರಾಜ್ ಹೊಸ ಇತಿಹಾಸ ನಿರ್ಮಿಸಿದ್ದರು.

ಈ ಪಂದ್ಯದಲ್ಲಿ 7 ಓವರ್​ಗಳನ್ನು ಎಸೆದ ಮೊಹಮ್ಮದ್ ಸಿರಾಜ್ ಕೇವಲ 21 ರನ್ ನೀಡಿ 6 ವಿಕೆಟ್ ಕಬಳಿಸಿದರು. ಸಿರಾಜ್ ಅವರ ಈ ಕರಾರುವಾಕ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು.

ಸಿರಾಜ್ ಭರ್ಜರಿ ಬೌಲಿಂಗ್ ವಿಡಿಯೋ:

51 ರನ್​ಗಳ ಸುಲಭ ಗುರಿಯನ್ನು ಟೀಮ್ ಇಂಡಿಯಾ 6.1 ಓವರ್​ಗಳಲ್ಲಿ ಚೇಸ್ ಮಾಡಿ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ 8ನೇ ಬಾರಿಗೆ ಏಷ್ಯಾಕಪ್ ಕಿರೀಟ ಮುಡಿಗೇರಿಸಿಕೊಂಡಿದ್ದರು. ಈ ಐತಿಹಾಸಿಕ ಗೆಲುವಿಗೆ ಒಂದು ವರ್ಷ ಎಂಬುದೇ ವಿಶೇಷ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್ (ವಿಕೆಟ್ ಕೀಪರ್) , ಇಶಾನ್ ಕಿಶನ್ , ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ , ವಾಷಿಂಗ್ಟನ್ ಸುಂದರ್ , ಜಸ್​ಪ್ರೀತ್ ಬುಮ್ರಾ , ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2025: ಈ ಸಲ ಕಪ್ ನಮ್ದೆ… ಇದುವೇ ಕೆಎಲ್ ರಾಹುಲ್ ಇಚ್ಛೆ..!

ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ , ಕುಸಾಲ್ ಪೆರೇರ , ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್) , ಸದೀರ ಸಮರವಿಕ್ರಮ , ಚರಿತ್ ಅಸಲಂಕ , ಧನಂಜಯ ಡಿ ಸಿಲ್ವ , ದಸುನ್ ಶಾನಕ (ನಾಯಕ) , ದುನಿತ್ ವೆಲ್ಲಲಾಗೆ , ದುಶನ್ ಹೇಮಂತ , ಪ್ರಮೋದ್ ಮದುಶನ್ , ಮಥೀಶ ಪತಿರಾಣ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ