AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs AUS: ಪಾಕ್ ವಿರುದ್ಧ 38 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡ ಆಸ್ಟ್ರೇಲಿಯಾ

Pakistan vs Australia 3rd ODI: ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಏಕದಿನ ಸರಣಿ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಪಾಕಿಸ್ತಾನಿ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ ಕೇವಲ 157 ರನ್‌ಗಳಿಗೆ ಆಲೌಟ್ ಆಗಿದೆ. ನಾಯಕ ಜೋಶ್ ಇಂಗ್ಲಿಸ್ (65) ಹೋರಾಟ ನಡೆಸಿದರೂ, ಶಾಹೀನ್ ಅಫ್ರಿದಿ (3 ವಿಕೆಟ್) ಮಾರಕ ಬೌಲಿಂಗ್ ಮುಂದೆ ಉಳಿದ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ಸರಣಿ ಗೆಲ್ಲಲು ಪಾಕಿಸ್ತಾನಕ್ಕೆ ಸುಲಭ ಗುರಿ ಲಭಿಸಿದೆ.

PAK vs AUS: ಪಾಕ್ ವಿರುದ್ಧ 38 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡ ಆಸ್ಟ್ರೇಲಿಯಾ
Pak Vs Aus
ಪೃಥ್ವಿಶಂಕರ
|

Updated on: Jun 04, 2026 | 9:30 PM

Share

ಪ್ರಸ್ತುತ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (Pakistan vs Australia) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಈಗಾಗಲೇ ನಡೆದಿರುವ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೀಗಾಗಿ ಕೊನೆಯ ಪಂದ್ಯವನ್ನು ಗೆದ್ದ ತಂಡಕ್ಕೆ ಸರಣಿ ಸಿಗಲಿದೆ. ಹೀಗಾಗಿ ಇಂದು ನಡೆದ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡ, ಪಾಕಿಸ್ತಾನಿ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ ಹೋಗಿದೆ. ಇದರ ಪರಿಣಾಮವಾಗಿ ಇಡೀ ಆಸ್ಟ್ರೇಲಿಯಾ ತಂಡವು 42 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 157 ರನ್‌ಗಳಿಗೆ ಆಲೌಟ್ ಆಗಿದೆ.

ಆಸೀಸ್​ಗೆ ಆರಂಭದಲ್ಲೇ ಆಘಾತ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ತನ್ನ ಕೊನೆಯ ಏಳು ವಿಕೆಟ್‌ಗಳನ್ನು ಕೇವಲ 38 ರನ್‌ಗಳಿಗೆ ಕಳೆದುಕೊಂಡಿತು. ಇತ್ತ ತಂಡಕ್ಕೆ ಉತ್ತಮ ಆರಂಭವೂ ಸಿಗಲಿಲ್ಲ. ಶೂನ್ಯಕ್ಕೆ ಮೊದಲ ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ, 42 ರನ್​ಗಳಿಗೆ ತನ್ನ ಎರಡನೇ ವಿಕೆಟ್ ಕಳೆದುಕೊಂಡಿತು. 100 ರನ್​ಗಳ ಒಳಗೆ ಮೂರನೇ ವಿಕೆಟ್ ಕೂಡ ಪತನವಾಯಿತು. ಆದಾಗ್ಯೂ ನಾಯಕ ಜೋಶ್ ಇಂಗ್ಲಿಸ್ ಒಂದು ತುದಿಯನ್ನು ದೃಢವಾಗಿ ನಿಂತು 65 ರನ್​ಗಳ ಇನ್ನಿಂಗ್ಸ್ ಆಡಿದರು. ಇಂಗ್ಲಿಸ್ ಕ್ರೀಸ್‌ನಲ್ಲಿದ್ದ ತನಕ, ಆಸ್ಟ್ರೇಲಿಯಾ ದೊಡ್ಡ ಸ್ಕೋರ್‌ ದಾಖಲಿಸುವಂತೆ ತೋರುತ್ತಿತ್ತು. ಆದರೆ ಶಾಹೀನ್ ಶಾ ಅಫ್ರಿದಿ ಇಂಗ್ಲಿಸ್ ಅವರನ್ನು ಔಟ್ ಮಾಡಿದ ತಕ್ಷಣ, ಇಡೀ ಆಸ್ಟ್ರೇಲಿಯನ್ ಇನ್ನಿಂಗ್ಸ್ ತರಗೆಲೆಗಳಂತೆ ಉದುರಿತು.

157 ರನ್​ಗಳಿಗೆ ಆಲೌಟ್

ಒಂದು ಹಂತದಲ್ಲಿ ಆಸ್ಟ್ರೇಲಿಯಾ 26 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 119 ರನ್ ಗಳಿಸಿತ್ತು. ಆದರೆ ಜೋಶ್ ಇಂಗ್ಲಿಸ್ ಔಟಾದ ಬಳಿಕ ಆಸ್ಟ್ರೇಲಿಯಾದ ಯಾವುದೇ ಬ್ಯಾಟ್ಸ್‌ಮನ್​ಗೆ ಕ್ರೀಸ್‌ನಲ್ಲಿ ಹೆಚ್ಚು ಕಾಲ ಉಳಿಯಲು ಸಾಧ್ಯವಾಗಲಿಲ್ಲ. ತಂಡವು 157 ರನ್ ತಲುಪುವ ಹೊತ್ತಿಗೆ, ಉಳಿದ 6 ವಿಕೆಟ್‌ಗಳನ್ನು ಕಳೆದುಕೊಂಡಿತು. ಜೋಶ್ ಇಂಗ್ಲಿಸ್ ಹೊರತುಪಡಿಸಿ, ಬೇರೆ ಯಾವುದೇ ಬ್ಯಾಟ್ಸ್‌ಮನ್​ಗೂ 20 ರನ್ ಗಳಿಸಲು ಸಾಧ್ಯವಾಗಲಿಲ್ಲ. ಮಾರ್ನಸ್ ಲಬುಶೇನ್ ಮತ್ತು ಅಲೆಕ್ಸ್ ಕ್ಯಾರಿ ತಲಾ 19 ರನ್ ಗಳಿಸಿದರೆ, ಕೊನೆಯಲ್ಲಿ ಆಡಮ್ ಜಂಪಾ 10 ರನ್ ಗಳಿಸಿದರು. ಬೇರೆ ಯಾವುದೇ ಆಟಗಾರನಿಗೆ ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ.

ಗಾಯಗೊಂಡ ವಿರಾಟ್ ಕೊಹ್ಲಿ; ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಔಟ್

ಶಾಹೀನ್ ಶಾ ಅಫ್ರಿದಿ ಮಾರಕ ದಾಳಿ

ಪಾಕಿಸ್ತಾನ ಪರ ಶಾಹೀನ್ ಶಾ ಅಫ್ರಿದಿ ಅದ್ಭುತ ಬೌಲಿಂಗ್ ಪ್ರದರ್ಶಿಸಿ ಎಂಟು ಓವರ್‌ಗಳಲ್ಲಿ 30 ರನ್‌ಗಳಿಗೆ ಮೂರು ವಿಕೆಟ್ ಪಡೆದರು. ಅಬ್ರಾರ್ ಅಹ್ಮದ್ ಮತ್ತು ಶಾದಾಬ್ ಖಾನ್ ತಲಾ ಎರಡು ವಿಕೆಟ್ ಪಡೆದರು. ಹ್ಯಾರಿಸ್ ರೌಫ್ ಕೂಡ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್