AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs ENG: ಮೊದಲ ಟೆಸ್ಟ್ ಪಂದ್ಯಕ್ಕೆ ಪಾಕ್ ತಂಡ ಪ್ರಕಟ; ಫಾರ್ಮ್​ನಲ್ಲಿರುವ ಆಟಗಾರನಿಗಿಲ್ಲ ಅವಕಾಶ

PAK vs ENG: ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ತಂಡದಲ್ಲಿದ್ದ ಅನುಭವಿ ಬ್ಯಾಟ್ಸ್‌ಮನ್ ಕಮ್ರಾನ್ ಗುಲಾಮ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಸರಣಿಯ ಯಾವುದೇ ಪಂದ್ಯದಲ್ಲಿ ಕಮ್ರಾನ್‌ಗೆ ಅವಕಾಶ ನೀಡಲಿಲ್ಲ ಆದರೆ ಅವರ ಪ್ರದರ್ಶನವನ್ನು ಪರಿಶೀಲಿಸದೆ ಅವರನ್ನು ತಂಡದಿಂದ ಕೈಬಿಡಲಾಗಿದೆ. ಕಮ್ರಾನ್ ಗುಲಾಮ್ ಪ್ರಸ್ತುತ ಚಾಂಪಿಯನ್ಸ್ ಏಕದಿನ ಕಪ್‌ನಲ್ಲಿ 248 ರನ್ ಗಳಿಸಿ ಅತ್ಯಧಿಕ ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

PAK vs ENG: ಮೊದಲ ಟೆಸ್ಟ್ ಪಂದ್ಯಕ್ಕೆ ಪಾಕ್ ತಂಡ ಪ್ರಕಟ; ಫಾರ್ಮ್​ನಲ್ಲಿರುವ ಆಟಗಾರನಿಗಿಲ್ಲ ಅವಕಾಶ
ಪಾಕಿಸ್ತಾನ ತಂಡ
ಪೃಥ್ವಿಶಂಕರ
|

Updated on: Sep 25, 2024 | 4:42 PM

Share

ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹೀನಾಯವಾಗಿ ಸೋತ ಮುಖಭಂಗದಿಂದ ಹೊರಬರಲು ಯತ್ನಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಇದೀಗ ಹೊಸ ಸವಾಲು ಎದುರಾಗಿದೆ. ಮುಂದಿನ ತಿಂಗಳು ಇಂಗ್ಲೆಂಡ್ ತಂಡ ಟೆಸ್ಟ್ ಸರಣಿಗಾಗಿ ಪಾಕಿಸ್ತಾನಕ್ಕೆ ಬರಲಿದ್ದು, ಈ ಸರಣಿಯ ಮೊದಲ ಪಂದ್ಯಕ್ಕೆ ಪಾಕಿಸ್ತಾನ ತಂಡವನ್ನು ಇದೀಗ ಪ್ರಕಟಿಸಲಾಗಿದೆ. ಬಾಂಗ್ಲಾದೇಶ ವಿರುದ್ಧ ಕ್ಲೀನ್ ಸ್ವೀಪ್ ಅನುಭವಿಸಿದ್ದರೂ, ಪಾಕಿಸ್ತಾನ ಆಯ್ಕೆ ಮಂಡಳಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲು ಮುಂದಾಗಿಲ್ಲ. ಎಂದಿನಂತೆ ತಂಡದ ನಾಯಕತ್ವ ಶಾನ್ ಮಸೂದ್ ಕೈಯಲ್ಲಿದ್ದರೆ, ಕಳೆದ ಸರಣಿಯಲ್ಲಿ ದಯನೀಯವಾಗಿ ವಿಫಲರಾಗಿದ್ದ ಬಾಬರ್ ಆಝಂ ಮತ್ತು ಶಾಹೀನ್ ಶಾ ಆಫ್ರಿದಿಯಂತಹ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ಮುಲ್ತಾನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಸರಣಿಯ ಮೊದಲ ಟೆಸ್ಟ್ ಅಕ್ಟೋಬರ್ 7 ರಿಂದ ಆರಂಭವಾಗಲಿದೆ. ಟೆಸ್ಟ್ ತಂಡದಲ್ಲಿ ಆಯ್ಕೆಯಾಗಿರುವ ಬಹುತೇಕ ಎಲ್ಲಾ ಆಟಗಾರರು ಪ್ರಸ್ತುತ ಚಾಂಪಿಯನ್ಸ್ ಏಕದಿನ ಕಪ್ ಪಂದ್ಯಾವಳಿಯಲ್ಲಿ ವಿವಿಧ ತಂಡಗಳ ಪರ ಆಡುತ್ತಿದ್ದಾರೆ. ಆದರೆ ಟೆಸ್ಟ್ ತಂಡದ ಕೋಚ್ ಜೇಸನ್ ಗಿಲ್ಲೆಸ್ಪಿ ಅವರ ಸಲಹೆಯ ನಂತರ, ಮಂಡಳಿಯು ಈ ಎಲ್ಲಾ ಆಟಗಾರರಿಗೆ ಉಳಿದ ಪಂದ್ಯಗಳಿಂದ ವಿಶ್ರಾಂತಿ ನೀಡಲು ನಿರ್ಧರಿಸಿದೆ.

ವೈಫಲ್ಯದ ನಡುವೆಯೂ ಅವಕಾಶ

ಪಾಕಿಸ್ತಾನಿ ತಂಡದ ಆಟಗಾರರು, ಪಿಸಿಬಿ ಅಧಿಕಾರಿಗಳು ಮತ್ತು ಕೋಚಿಂಗ್ ಸಿಬ್ಬಂದಿ ನಡುವೆ ಫೈಸಲಾಬಾದ್‌ನಲ್ಲಿ ಒಂದು ದಿನದ ಹಿಂದೆ ಸಂಪರ್ಕ ಶಿಬಿರವನ್ನು ನಡೆಸಲಾಗಿತ್ತು. ಇದರಲ್ಲಿ ತಂಡದಲ್ಲಿನ ಒಗ್ಗಟ್ಟಿನ ಕೊರತೆಯಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಇದಾದ ಒಂದು ದಿನದ ನಂತರ, ಮಂಡಳಿಯು ಮುಲ್ತಾನ್ ಟೆಸ್ಟ್‌ಗೆ ತಂಡವನ್ನು ಪ್ರಕಟಿಸಿದೆ. ಹೆಚ್ಚಿನ ಆಟಗಾರರು ಬಾಂಗ್ಲಾದೇಶ ವಿರುದ್ಧದ ಸರಣಿಯ ಭಾಗವಾಗಿದ್ದವರೇ ಆಗಿದ್ದು, ಇದರಲ್ಲಿ ಬಾಬರ್, ಶಾಹೀನ್ ಶಾ ಆಫ್ರಿದಿ, ನಸೀಮ್ ಶಾ ಮತ್ತು ಅಬ್ದುಲ್ಲಾ ಶಫೀಕ್ ಅವರಂತಹ ಆಟಗಾರರ ಹೆಸರುಗಳು ಸೇರಿವೆ. ಆದರೆ ಇವರೆಲ್ಲರು ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಶೋಚನೀಯವಾಗಿ ವಿಫಲರಾಗಿದ್ದರು.

ಆದರೆ, ವೇಗದ ಬೌಲರ್ ಖುರ್ರಂ ಶಹಜಾದ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದು, ಅವರ ಸ್ಥಾನದಲ್ಲಿ 15 ಟೆಸ್ಟ್ ಪಂದ್ಯಗಳನ್ನು ಆಡಿರುವ ಸ್ಪಿನ್ನರ್ ನೋಮನ್ ಅಲಿ ತಂಡಕ್ಕೆ ಮರಳಿದ್ದಾರೆ. ಬ್ಯಾಟ್ಸ್‌ಮನ್ ಮೊಹಮ್ಮದ್ ಹುರೈರಾ ಕೂಡ ಮತ್ತೊಮ್ಮೆ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ ಆದರೆ ಅವರಿಗೆ ಚೊಚ್ಚಲ ಟೆಸ್ಟ್ ಪಂದ್ಯವಾಡುವ ಅವಕಾಶ ಸಿಗುವ ಸಾಧ್ಯತೆ ಕಡಿಮೆ.

ಅನುಭವಿ ಬ್ಯಾಟ್ಸ್‌ಮನ್​ಗೆ ಕೋಕ್

ಆದರೆ, ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ತಂಡದಲ್ಲಿದ್ದ ಅನುಭವಿ ಬ್ಯಾಟ್ಸ್‌ಮನ್ ಕಮ್ರಾನ್ ಗುಲಾಮ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಸರಣಿಯ ಯಾವುದೇ ಪಂದ್ಯದಲ್ಲಿ ಕಮ್ರಾನ್‌ಗೆ ಅವಕಾಶ ನೀಡಲಿಲ್ಲ ಆದರೆ ಅವರ ಪ್ರದರ್ಶನವನ್ನು ಪರಿಶೀಲಿಸದೆ ಅವರನ್ನು ತಂಡದಿಂದ ಕೈಬಿಡಲಾಗಿದೆ. ಕಮ್ರಾನ್ ಗುಲಾಮ್ ಪ್ರಸ್ತುತ ಚಾಂಪಿಯನ್ಸ್ ಏಕದಿನ ಕಪ್‌ನಲ್ಲಿ 248 ರನ್ ಗಳಿಸಿ ಅತ್ಯಧಿಕ ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಆದಾಗ್ಯೂ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಇನ್ನು ಇಂಗ್ಲೆಂಡ್ ವಿರುದ್ಧದ ಈ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಮುಲ್ತಾನ್ ಮತ್ತು ರಾವಲ್ಪಿಂಡಿಯಲ್ಲಿ ನಡೆಯಲಿದೆ. ಮೊದಲ ಮತ್ತು ಎರಡನೇ ಟೆಸ್ಟ್ ಮುಲ್ತಾನ್‌ನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ರಾವಲ್ಪಿಂಡಿಯಲ್ಲಿ ನಡೆಯಲಿದೆ.

ಪಾಕಿಸ್ತಾನ ತಂಡ: ಶಾನ್ ಮಸೂದ್ (ನಾಯಕ), ಸೈಮ್ ಅಯೂಬ್, ಸೌದ್ ಶಕೀಲ್, ಬಾಬರ್ ಆಝಂ, ಅಬ್ದುಲ್ಲಾ ಶಫೀಕ್, ಅಮೀರ್ ಜಮಾಲ್, ಅಬ್ರಾರ್ ಅಹ್ಮದ್, ಮೀರ್ ಹಮ್ಜಾ, ಮೊಹಮ್ಮದ್ ಹುರೈರಾ, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ನೋಮನ್ ಅಲಿ, ಸಲ್ಮಾನ್ ಅಗಾ, ಸರ್ಫರಾಜ್ ಅಹ್ಮದ್, ಶಾಹೀನ್ ಶಾಹೀನ್ ಅಫ್ರಿದಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ