AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್‌ ವಿರುದ್ಧದ ಉಳಿದೆರಡು ಟೆಸ್ಟ್ ಪಂದ್ಯಗಳಿಗೆ ಪಾಕ್ ತಂಡ ಪ್ರಕಟ; ಬಾಬರ್, ಆಫ್ರಿದಿಗೆ ತಂಡದಿಂದ ಗೇಟ್​ಪಾಸ್

PAK vs ENG: ಪಾಕಿಸ್ತಾನ ಹಾಗೂ ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಉಳಿದೆರಡು ಪಂದ್ಯಗಳಿಗೆ ಆತಿಥೇಯ ಪಾಕಿಸ್ತಾನ ತಂಡವನ್ನು ಪ್ರಕಟಿಸಲಾಗಿದೆ. ತಂಡದ ಆಯ್ಕೆಯಲ್ಲಿ ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿರುವ ಪಾಕ್ ಆಯ್ಕೆ ಮಂಡಳಿ, ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್ ಜೀವಾಳ ಎನಿಸಿಕೊಂಡಿರುವ ಆಟಗಾರರನ್ನೇ ತಂಡದಿಂದ ಕೈಬಿಟ್ಟಿದೆ.

ಇಂಗ್ಲೆಂಡ್‌ ವಿರುದ್ಧದ ಉಳಿದೆರಡು ಟೆಸ್ಟ್ ಪಂದ್ಯಗಳಿಗೆ ಪಾಕ್ ತಂಡ ಪ್ರಕಟ; ಬಾಬರ್, ಆಫ್ರಿದಿಗೆ ತಂಡದಿಂದ ಗೇಟ್​ಪಾಸ್
ಪಾಕಿಸ್ತಾನ ಟೆಸ್ಟ್ ತಂಡ
ಪೃಥ್ವಿಶಂಕರ
|

Updated on:Oct 13, 2024 | 6:10 PM

Share

ಪಾಕಿಸ್ತಾನ ಹಾಗೂ ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಉಳಿದೆರಡು ಪಂದ್ಯಗಳಿಗೆ ಆತಿಥೇಯ ಪಾಕಿಸ್ತಾನ ತಂಡವನ್ನು ಪ್ರಕಟಿಸಲಾಗಿದೆ. ತಂಡದ ಆಯ್ಕೆಯಲ್ಲಿ ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಂಡಿರುವ ಪಾಕ್ ಆಯ್ಕೆ ಮಂಡಳಿ, ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್ ಜೀವಾಳ ಎನಿಸಿಕೊಂಡಿರುವ ಆಟಗಾರರನ್ನೇ ತಂಡದಿಂದ ಕೈಬಿಟ್ಟಿದೆ. ಅದರಂತೆ ತಂಡದ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಆಝಂರನ್ನು ಇಡೀ ಸರಣಿಯಿಂದಲೇ ಹೊರಹಾಕಿದೆ. ಹಾಗೆಯೇ ತಂಡದ ಸ್ಟಾರ್ ಬೌಲರ್ ಶಾಹೀನ್ ಶಾ ಆಫ್ರಿದಿ ಮತ್ತು ನಸೀಮ್ ಶಾ ಅವರಿಗೂ ಸಹ ಗೇಟ್​ಪಾಸ್ ನೀಡಿದೆ. ಒಟ್ಟಿನಲ್ಲಿ 4 ಆಟಗಾರರು ತಂಡದಿಂದ ಹೊರಬಿದಿದ್ದು, ಕೆಲವು ಹೊಸ ಮುಖಗಳಿಗೆ ಅವಕಾಶ ಸಿಕ್ಕಿದೆ.

ಬಾಬರ್​ಗೆ ಮರ್ಮಾಘಾತ

ಉಭಯ ತಂಡಗಳ ನಡುವೆ ಮುಲ್ತಾನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಇನಿಂಗ್ಸ್ ಮತ್ತು 47 ರನ್‌ಗಳಿಂದ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಮೊದಲ ಇನಿಂಗ್ಸ್‌ನಲ್ಲಿ 556 ರನ್ ಗಳಿಸಿತ್ತಾದರೂ ಸೋಲಿನಿಂದ ಪಾರಾಗಲು ಸಾಧ್ಯವಾಗಲಿಲ್ಲ. ಆದರೆ ಎರಡೂ ಇನ್ನಿಂಗ್ಸ್‌ಗಳಲ್ಲಿ ಬಾಬರ್ ಆಝಂ ಬ್ಯಾಟ್ ಸದ್ದು ಮಾಡಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ 30 ರನ್ ಗಳಿಸಿದ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 5 ರನ್ ಗಳಿಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಸತತ 18ನೇ ಇನ್ನಿಂಗ್ಸ್‌ನಲ್ಲಿ 50ರ ಗಡಿ ಮುಟ್ಟಲು ಬಾಬರ್​ಗೆ ಸಾಧ್ಯವಾಗಲಿಲ್ಲ. ಡಿಸೆಂಬರ್ 2022 ರಲ್ಲಿ ಕೊನೆಯದಾಗಿ ಶತಕ ಸಿಡಿಸಿದ್ದ ಬಾಬರ್, ಆ ಬಳಿಕ ನಿರಂತರವಾಗಿ ವೈಫಲ್ಯ ಅನುಭವಿಸಿದ್ದರು. ಹೀಗಾಗಿ ಬಾಬರ್​ ಅವರನ್ನು ತಂಡದಿಂದ ಹೊರಹಾಕಬೇಕೆನ್ನುವ ಒತ್ತಡ ಹೆಚ್ಚಿತ್ತು. ಅಂತಿಮವಾಗಿ ಪಿಸಿಬಿಯ ಹೊಸ ಆಯ್ಕೆ ಸಮಿತಿಯು ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ.

ಶಾಹೀನ್ ಸೇರಿದಂತೆ ಮೂವರಿಗೆ ಕೋಕ್

ಬಾಬರ್ ಜೊತೆಗೆ, ತಂಡದ ಪ್ರಮುಖ ಬೌಲರ್ ಶಾಹೀನ್ ಶಾ ಆಫ್ರಿದಿ ಕೂಡ ತಂಡದಿಂದ ಹೊರಬಿದ್ದಿದ್ದಾರೆ. ಮೂರು ಮಾದರಿಯ ಕ್ರಿಕೆಟ್​ನಲ್ಲೂ ಪಾಕ್ ತಂಡವನ್ನು ಪ್ರತಿನಿಧಿಸುತ್ತಿರುವ ಆಫ್ರಿದಿಗೂ ಆಯ್ಕೆ ಮಂಡಳಿ ಗೇಟ್ ಪಾಸ್ ನೀಡಿದೆ. ವಾಸ್ತವವಾಗಿ ಬಾಬರ್‌ ಅವರಂತೆ ಶಾಹೀನ್‌ ಆಫ್ರಿದಿ ಅವರ ಪ್ರದರ್ಶನವೂ ಕಳೆದ ಒಂದೂವರೆ ವರ್ಷದಿಂದ ಕಳಪೆಯಾಗಿದೆ. ಇದಕ್ಕೆ ಉದಾಹರಣೆಯಾಗಿ ಮುಲ್ತಾನ್ ಟೆಸ್ಟ್‌ನಲ್ಲಿ 26 ಓವರ್‌ ಎಸೆದ ಶಾಹೀನ್ 120 ರನ್‌ ನೀಡಿ 1 ವಿಕೆಟ್ ಮಾತ್ರ ಪಡೆದರು. ಕಳೆದ ಒಂದು ವರ್ಷದಲ್ಲಿ ಆಡಿರುವ 11 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ಕೇವಲ 17 ವಿಕೆಟ್ ಮಾತ್ರ ಆಫ್ರಿದಿ ಖಾತೆಗೆ ಸೇರಿವೆ.

ಆಫ್ರಿದಿ ಜೊತೆಗೆ ಮತ್ತೊಬ್ಬ ವೇಗದ ಬೌಲರ್ ನಸೀಮ್ ಶಾರನ್ನು ಸರಣಿಯಿಂದ ಕೈಬಿಡಲಾಗಿದೆ. ಕಳೆದ ಪಂದ್ಯದಲ್ಲಿ ನಸೀಮ್ 31 ಓವರ್ ಎಸೆದು 157 ರನ್ ನೀಡಿ 2 ವಿಕೆಟ್ ಮಾತ್ರ ಕಬಳಿಸಿದರು. ಹೀಗಾಗಿ ಅವರ ಫಿಟ್ನೆಸ್ ಮೇಲೆ ನಿರಂತರವಾಗಿ ಪ್ರಶ್ನೆಗಳು ಕೇಳಿಬರುತ್ತಿವೆ ಆದ್ದರಿಂದ ಅವರನ್ನು ಸರಣಿಯಿಂದ ತೆಗೆದುಹಾಕಲಾಗಿದೆ. ಇದಕ್ಕೂ ಮೊದಲು, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಿಂದಲೂ ನಸೀಮ್ ಮತ್ತು ಶಾಹೀನ್ ಅವರನ್ನು ಕೈಬಿಡಲಾಗಿತ್ತು. ಇವರಲ್ಲದೆ ಮೊದಲ ಟೆಸ್ಟ್​ನಲ್ಲಿ ಅಸ್ವಸ್ಥಗೊಂಡಿದ್ದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಕೂಡ ತಂಡದಿಂದ ಹೊರಬಿದ್ದಿದ್ದಾರೆ.

ಮೂವರು ಅನ್‌ಕ್ಯಾಪ್ಡ್ ಆಟಗಾರರಿಗೆ ಸ್ಥಾನ

ಸರಣಿಯಿಂದ ಹೊರಬಿದ್ದಿರುವ ಈ ಸ್ಟಾರ್ ಆಟಗಾರರ ಸ್ಥಾನದಲ್ಲಿ ಆಯ್ಕೆ ಸಮಿತಿಯು 3 ಅನ್‌ಕ್ಯಾಪ್ಡ್ ಆಟಗಾರರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಈ ಮೂವರಿಗೆ ಅವಕಾಶ ನೀಡಬೇಕೆಂದು ಬಹಳ ದಿನಗಳಿಂದ ಬೇಡಿಕೆ ಇತ್ತು. ಅದರಂತೆ ಕಮ್ರಾನ್ ಗುಲಾಮ್ ಮತ್ತು ವಿಕೆಟ್ ಕೀಪರ್ ಹಸಿಬುಲ್ಲಾ ಜೊತೆಗೆ ಸ್ಪಿನ್ನರ್ ಮೆಹ್ರಾನ್ ಮುಮ್ತಾಜ್ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಉಳಿದೆರಡು ಟೆಸ್ಟ್ ಪಂದ್ಯಗಳಿಗೆ ಪಾಕ್ ತಂಡ: ಶಾನ್ ಮಸೂದ್ (ನಾಯಕ), ಸೌದ್ ಶಕೀಲ್ (ಉಪನಾಯಕ), ಅಮೀರ್ ಜಮಾಲ್, ಅಬ್ದುಲ್ಲಾ ಶಫೀಕ್, ಹಸೀಬುಲ್ಲಾ, ಕಮ್ರಾನ್ ಗುಲಾಮ್, ಮೆಹ್ರಾನ್ ಮುಮ್ತಾಜ್, ಮೀರ್ ಹಮ್ಜಾ, ಮೊಹಮ್ಮದ್ ಅಲಿ, ಮೊಹಮ್ಮದ್ ಹುರೈರಾ, ಮೊಹಮ್ಮದ್ ರಿಜ್ವಾನ್, ನೋಮನ್ ಅಲಿ, ಸೈಮ್ ಅಯೂಬ್, ಸಾಜಿದ್ ಖಾನ್, ಸಲ್ಮಾನ್ ಅಘಾ ಮತ್ತು ಜಾಹಿದ್ ಮಹಮೂದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:55 pm, Sun, 13 October 24

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!