AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs SL: ಕ್ರಿಕೆಟ್​ಗೂ ಬರೆ ಎಳೆದ ಲಂಕಾದ ತುರ್ತು ಪರಿಸ್ಥಿತಿ; ಪಾಕ್-ಲಂಕಾ ಸರಣಿ ಮುಂದೂಡಿಕೆ, ಏಕದಿನ ಸರಣಿ ರದ್ದು!

PAK vs SL: ಶ್ರೀಲಂಕಾದ ಇತ್ತೀಚಿನ ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳು ಶ್ರೀಲಂಕಾ ಕ್ರಿಕೆಟ್ ತಂಡ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ನಡುವಿನ ODI ಸರಣಿಯನ್ನು ರದ್ದುಗೊಳಿಸುವಲ್ಲಿ ಪಾತ್ರವಹಿಸಿವೆ. ಶ್ರೀಲಂಕಾದಲ್ಲಿ ವಿದ್ಯುತ್ ವ್ಯತ್ಯಯದಿಂದಾಗಿ, ಹಗಲು-ರಾತ್ರಿ ಪಂದ್ಯಗಳನ್ನು ಆಯೋಜಿಸುವುದು ಕಷ್ಟಕರವಾಗಿದೆ.

PAK vs SL: ಕ್ರಿಕೆಟ್​ಗೂ ಬರೆ ಎಳೆದ ಲಂಕಾದ ತುರ್ತು ಪರಿಸ್ಥಿತಿ; ಪಾಕ್-ಲಂಕಾ ಸರಣಿ ಮುಂದೂಡಿಕೆ, ಏಕದಿನ ಸರಣಿ ರದ್ದು!
pak vs sl
TV9 Web
| Updated By: ಪೃಥ್ವಿಶಂಕರ|

Updated on:May 09, 2022 | 6:15 PM

Share

ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಲ್ಲಿ ಸಮಸ್ಯೆಗಳು ಸದ್ಯಕ್ಕೆ ಪರಿಹಾರವಾಗುವಂತಿಲ್ಲ. ಅಧ್ಯಕ್ಷ ಗೊಟಬಾಯ ರಾಜಪಕ್ಸೆ ವಿರುದ್ಧ ಜನರ ಅಸಹನೆ ಮತ್ತು ಪ್ರತಿಭಟನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಅನಿರ್ದಿಷ್ಟಾವಾಧಿ ತುರ್ತು ಪರಿಸ್ಥಿತಿಯನ್ನು ಅಧ್ಯಕ್ಷ ಗೊಟಬಾಯ ರಾಜಪಕ್ಸೆ ಹೇರಿದ್ದಾರೆ. ಶ್ರೀಲಂಕಾದ ಇಂದಿನ ದುಸ್ಥಿತಿಗೆ ರಾಜಪಕ್ಸೆ ಕುಟುಂಬದ ದುರಾಡಳಿತವೇ ಕಾರಣ. ಅವರು ಮೊದಲು ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಜನರು ಒತ್ತಾಯಿಸಿದ್ದಾರೆ. ಈ ನಡುವೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕೋರಿಕೆಯ ಮೇರೆಗೆ ಪಾಕಿಸ್ತಾನದ ಮುಂಬರುವ ಶ್ರೀಲಂಕಾ ಪ್ರವಾಸದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ರದ್ದುಗೊಳಿಸಲಾಗಿದೆ. ಆದರೆ ಜುಲೈ-ಆಗಸ್ಟ್‌ನಲ್ಲಿ ಕೇವಲ 2 ಟೆಸ್ಟ್ ಪಂದ್ಯಗಳಿಗಾಗಿ ಪಾಕಿಸ್ತಾನ ಕ್ರಿಕೆಟ್, ಶ್ರೀಲಂಕಾಕ್ಕೆ ಪ್ರಯಾಣಿಸಲಿದೆ. ಈ ODI ಸರಣಿಯನ್ನು ICC ವಿಶ್ವಕಪ್ ಸೂಪರ್ ಲೀಗ್‌ನಲ್ಲಿ ಸೇರಿಸಲಾಗಿಲ್ಲ. ಆದರೆ ಟೆಸ್ಟ್ ಸರಣಿಯು ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ICC World Test Championship) 2021-23 ರ ಭಾಗವಾಗಿರಲಿದೆ ಎಂದು ವರದಿಯಾಗಿದೆ.

ಶ್ರೀಲಂಕಾದ ಇತ್ತೀಚಿನ ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳು ಶ್ರೀಲಂಕಾ ಕ್ರಿಕೆಟ್ ತಂಡ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ನಡುವಿನ ODI ಸರಣಿಯನ್ನು ರದ್ದುಗೊಳಿಸುವಲ್ಲಿ ಪಾತ್ರವಹಿಸಿವೆ. ಶ್ರೀಲಂಕಾದಲ್ಲಿ ವಿದ್ಯುತ್ ವ್ಯತ್ಯಯದಿಂದಾಗಿ, ಹಗಲು-ರಾತ್ರಿ ಪಂದ್ಯಗಳನ್ನು ಆಯೋಜಿಸುವುದು ಕಷ್ಟಕರವಾಗಿದೆ.

ಇದನ್ನೂ ಓದಿ
Image
LSG vs GT IPL 2022 Match Prediction: ಲಕ್ನೋ- ಗುಜರಾತ್ ಮುಖಾಮುಖಿ; ಗೆದ್ದವರಿಗೆ ಪ್ಲೇ ಆಫ್ ಟಿಕೆಟ್ ಖಚಿತ
Image
IPL 2022: ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ನೀಡಿದ ಐಪಿಎಲ್​ನ ಅತ್ಯಂತ ದುಬಾರಿ ಬೌಲರ್​ಗಳಿವರು..!

ಪಾಕಿಸ್ತಾನ ಕೇವಲ 2 ಟೆಸ್ಟ್ ಪಂದ್ಯಗಳಿಗಾಗಿ ಶ್ರೀಲಂಕಾಕ್ಕೆ ಪ್ರಯಾಣ ಏತನ್ಮಧ್ಯೆ, ಕ್ರಿಕೆಟ್ ಆಸ್ಟ್ರೇಲಿಯಾ ಶ್ರೀಲಂಕಾದ ಪರಿಸ್ಥಿತಿಯನ್ನು ಗಮನಿಸುತ್ತಿದೆ. ಆಸ್ಟ್ರೇಲಿಯನ್ ಕ್ರಿಕೆಟ್ ತಂಡವು ಈ ವರ್ಷದ ಕೊನೆಯಲ್ಲಿ ಎರಡು ಟೆಸ್ಟ್‌ಗಳು, ಐದು ODIಗಳು ಮತ್ತು ಮೂರು T20 ಅಂತರಾಷ್ಟ್ರೀಯ ಪಂದ್ಯಗಳಿಗಾಗಿ ಶ್ರೀಲಂಕಾಕ್ಕೆ ಪ್ರಯಾಣಿಸಲಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಮಾಧ್ಯಮ ನಿರ್ದೇಶಕ ಸಮಿ-ಉಲ್-ಹಸನ್ ಬರ್ನಿ, ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಏಕದಿನ ಪಂದ್ಯಗಳನ್ನು ರದ್ದುಗೊಳಿಸುವಂತೆ ವಿನಂತಿಸಿದೆ ಎಂಬುದನ್ನು ಮಾಧ್ಯಮ ಹೇಳಿಕೆಯಲ್ಲಿ ಬಹಿರಂಗಪಡಿಸಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಮಾಧ್ಯಮ ನಿರ್ದೇಶಕ ಸಾಮಿ-ಉಲ್-ಹಸನ್ ಬರ್ನಿ, ಕ್ರಿಕೆಟ್ ಪಾಕಿಸ್ತಾನವನ್ನು ಉಲ್ಲೇಖಿಸಿ, “ಆರ್ಥಿಕ ನಷ್ಟವನ್ನು ಕಡಿಮೆ ಮಾಡಲು ಶ್ರೀಲಂಕಾ ಮಂಡಳಿಯು ಒಂದು ವಾರ ಮುಂಚಿತವಾಗಿ ತಮ್ಮ ಲೀಗ್ ಅನ್ನು ಪ್ರಾರಂಭಿಸಲು ಬಯಸಿದೆ. ಆದ್ದರಿಂದ ODI ಸರಣಿಯನ್ನು ರದ್ದುಪಡಿಸುವಂತೆ ಶ್ರೀಲಂಕಾ ಕ್ರಿಕೆಟ್​ ನಮ್ಮನ್ನು ಕೇಳಿಕೊಂಡಿತ್ತು. ಹೀಗಾಗಿ ನಾವು ಅವರ ಸಂಕಷ್ಟದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅವರ ಕೋರಿಕೆಯನ್ನು ಒಪ್ಪಿಕೊಳ್ಳಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

ಮುಂದುವರೆದು ಮಾತನಾಡಿದ ಸಾಮಿ-ಉಲ್-ಹಸನ್ ಬರ್ನಿ, ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ಮುಂಬರುವ ಏಕದಿನ ಸರಣಿಯು ಮುಂಬರುವ ವಿಶ್ವಕಪ್ ಸೂಪರ್ ಲೀಗ್‌ನ ಭಾಗವಾಗಿಲ್ಲ. ಹಾಗಾಗಿ ಸರಣಿ ರದ್ದುಪಡಿಸಲು ನಮಗೆ ಮನಸ್ಸಿಲ್ಲ. ಸರಣಿಯ ಅಂತಿಮ ವೇಳಾಪಟ್ಟಿಯನ್ನು ಇನ್ನೂ ಚರ್ಚಿಸಲಾಗುತ್ತಿದ್ದು, ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

Published On - 6:15 pm, Mon, 9 May 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?