AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಟೀಂ ಇಂಡಿಯಾ ಬಗ್ಗೆ ಮಾತನಾಡದಂತೆ ಆಟಗಾರರಿಗೆ ನಿರ್ಬಂಧ ಹೇರಿದ ಪಾಕ್ ನಾಯಕ

IND vs PAK: ಉದಯೋನ್ಮುಖ ಏಷ್ಯಾಕಪ್ ಸಮಯದಲ್ಲಿ ಟೀಂ ಇಂಡಿಯಾ ಬಗ್ಗೆ ಯಾವುದೇ ಚರ್ಚೆ ನಡೆಯುವುದಿಲ್ಲ. ನಾನು 2023 ರ ವಿಶ್ವಕಪ್‌ನಲ್ಲಿ ಆಡಿದಾಗ, ಎಲ್ಲರೂ ಟೀಂ ಇಂಡಿಯಾ ಬಗ್ಗೆ ಮಾತನಾಡುತ್ತಿದ್ದರು. ಇದು ಸಾಕಷ್ಟು ಒತ್ತಡವನ್ನು ಸೃಷ್ಟಿಸಿತು ಎಂದು ಪಾಕಿಸ್ತಾನ ತಂಡದ ನಾಯಕ ಮೊಹಮ್ಮದ್ ಹ್ಯಾರಿಸ್ ಹೇಳಿಕೆ ನೀಡಿದ್ದಾರೆ.

IND vs PAK: ಟೀಂ ಇಂಡಿಯಾ ಬಗ್ಗೆ ಮಾತನಾಡದಂತೆ ಆಟಗಾರರಿಗೆ ನಿರ್ಬಂಧ ಹೇರಿದ ಪಾಕ್ ನಾಯಕ
ಪಾಕ್ ತಂಡ
ಪೃಥ್ವಿಶಂಕರ
|

Updated on: Oct 16, 2024 | 3:55 PM

Share

ಒಮಾನ್​ನಲ್ಲಿ ಇದೇ ಅಕ್ಟೋಬರ್ 18 ರಿಂದ ಆರಂಭವಾಗಲಿರುವ ಎಮರ್ಜಿಂಗ್ ಏಷ್ಯಾಕಪ್​ಗೆ ಎಲ್ಲಾ ತಂಡಗಳು ಸಜ್ಜಾಗಿವೆ. ಈ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಸೇರಿದಂತೆ ಹಲವು ಏಷ್ಯನ್ ರಾಷ್ಟ್ರಗಳು ಭಾಗವಹಿಸಲಿವೆ. ಈ ಟೂರ್ನಿಗಾಗಿ ಈಗಾಗಲೇ ಎಲ್ಲಾ ತಂಡಗಳು ಪ್ರಕಟಗೊಂಡಿವೆ. ಟೂರ್ನಿ ಅಕ್ಟೋಬರ್ 18ಕ್ಕೆ ಆರಂಭವಾದರೂ, ಅಕ್ಟೋಬರ್ 19 ರಂದು ನಡೆಯಲ್ಲಿರುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದೊಂದಿಗೆ ಪಂದ್ಯಾವಳಿಯ ಕಾವು ಹೆಚ್ಚಾಗಲಿದೆ. ಆದರೆ ಅದಕ್ಕೂ ಮುನ್ನ ಪಾಕಿಸ್ತಾನ ತಂಡದ ನಾಯಕ ತೆಗೆದುಕೊಂಡಿರುವ ಅಚ್ಚರಿಯ ನಿರ್ಧಾರವೊಂದು ಭಾರಿ ಚರ್ಚೆಗೆ ಒಳಗಾಗಿರುವುದಲ್ಲದೆ, ಟೀಂ ಇಂಡಿಯಾ ಎಂದರೆ ನೆರೆ ರಾಷ್ಟ್ರಕ್ಕೆ ಇನ್ನೇಷ್ಟು ಭಯವಿದೆ ಎಂಬುದನ್ನು ಸಾಭೀತುಪಡಿಸಿದೆ.

ವಾಸ್ತವವಾಗಿ ಪಂದ್ಯಾವಳಿ ಆರಂಭಕ್ಕೂ ಮುನ್ನ ಮಾತನಾಡಿರುವ ಪಾಕಿಸ್ತಾನ ತಂಡದ ನಾಯಕ ಮೊಹಮ್ಮದ್ ಹ್ಯಾರಿಸ್, ತಂಡದ ಆಟಗಾರರು ಟೀಂ ಇಂಡಿಯಾ ಬಗ್ಗೆ ಮಾತನಾಡುವುದನ್ನು ನಿಷೇಧಿಸಿರುವುದಾಗಿ ಹೇಳಿದ್ದಾರೆ. ಅಂದರೆ, ಇಡೀ ಟೂರ್ನಮೆಂಟ್‌ನಲ್ಲಿ ಪಾಕಿಸ್ತಾನ ತಂಡದ ಯಾವುದೇ ಆಟಗಾರ ಭಾರತ ತಂಡದ ಬಗ್ಗೆ ಮಾತನಾಡುವಂತಿಲ್ಲ. ಇದನ್ನು ಸ್ವತಃ ಪಾಕಿಸ್ತಾನ ತಂಡದ ನಾಯಕ ಮೊಹಮ್ಮದ್ ಹ್ಯಾರಿಸ್ ಅವರೇ ಬಹಿರಂಗಪಡಿಸಿದ್ದಾರೆ. ಇದಕ್ಕೆ ಆಘಾತಕಾರಿ ಕಾರಣ ನೀಡಿರುವ ಮೊಹಮ್ಮದ್ ಹಾರಿಸ್, ಟೀಂ ಇಂಡಿಯಾ ಬಗ್ಗೆ ಮಾತನಾಡುವುದರಿಂದ ಪಾಕ್ ತಂಡದ ಮೇಲೆ ಒತ್ತಡ ಹೆಚ್ಚುತ್ತದೆ ಎಂದಿದ್ದಾರೆ.

ಮೊಹಮ್ಮದ್ ಹಾರಿಸ್ ಹೇಳಿದ್ದೇನು?

ಮಾಧ್ಯಮಗಳೊಂದಿಗೆ ಮಾತನಾಡಿದ ಮೊಹಮ್ಮದ್ ಹ್ಯಾರಿಸ್, ‘ಪಾಕಿಸ್ತಾನ ತಂಡದ ಆಟಗಾರರು ಟೀಂ ಇಂಡಿಯಾ ಬಗ್ಗೆ ಮಾತನಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಉದಯೋನ್ಮುಖ ಏಷ್ಯಾಕಪ್ ಸಮಯದಲ್ಲಿ ಟೀಂ ಇಂಡಿಯಾ ಬಗ್ಗೆ ಯಾವುದೇ ಚರ್ಚೆ ನಡೆಯುವುದಿಲ್ಲ. ನಾನು 2023 ರ ವಿಶ್ವಕಪ್‌ನಲ್ಲಿ ಆಡಿದಾಗ, ಎಲ್ಲರೂ ಟೀಂ ಇಂಡಿಯಾ ಬಗ್ಗೆ ಮಾತನಾಡುತ್ತಿದ್ದರು. ಇದು ಸಾಕಷ್ಟು ಒತ್ತಡವನ್ನು ಸೃಷ್ಟಿಸಿತು ಎಂದಿದ್ದಾರೆ.

ಉದಯೋನ್ಮುಖ ಏಷ್ಯಾಕಪ್ ಹೀಗಿದೆ

ಉದಯೋನ್ಮುಖ ಏಷ್ಯಾಕಪ್‌ನಲ್ಲಿ 8 ತಂಡಗಳು ಭಾಗವಹಿಸಲಿವೆ. ಎ ಗುಂಪಿನಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಹಾಂಗ್ ಕಾಂಗ್ ಮತ್ತು ಶ್ರೀಲಂಕಾ ತಂಡಗಳಿವೆ. ಮತ್ತೊಂದೆಡೆ, ಬಿ ಗುಂಪಿನಲ್ಲಿ ಭಾರತ, ಓಮನ್, ಪಾಕಿಸ್ತಾನ ಮತ್ತು ಯುಎಇ ತಂಡಗಳಿವೆ. ಮೇಲೆ ಹೇಳಿದಂತೆ ಈ ಟೂರ್ನಿಯ ಅತಿದೊಡ್ಡ ಪಂದ್ಯ ಅಕ್ಟೋಬರ್ 19 ರಂದು ನಡೆಯಲಿದ್ದು, ಈ ಹೈವೋಲ್ಟೇಜ್ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಲೀಗ್ ಹಂತದಲ್ಲಿ ಪಾಕಿಸ್ತಾನವನ್ನು ಎದುರಿಸಿದ ನಂತರ ಟೀಂ ಇಂಡಿಯಾ ಅಕ್ಟೋಬರ್ 21 ರಂದು ಯುಎಇಯನ್ನು ಎದುರಿಸಲಿದೆ. ಇದಾದ ನಂತರ ಅಕ್ಟೋಬರ್ 23 ರಂದು ಒಮಾನ್ ವಿರುದ್ಧ ಆಡಲಿದ್ದು, ಅಕ್ಟೋಬರ್ 27 ರಂದು ಫೈನಲ್ ಪಂದ್ಯ ನಡೆಯಲಿದೆ.

ಟೀಂ ಇಂಡಿಯಾ: ತಿಲಕ್ ವರ್ಮಾ (ನಾಯಕ), ವೈಭವ್ ಅರೋರಾ, ಆಯುಷ್ ಬಧೋನಿ, ರಾಹುಲ್ ಚಹಾರ್, ಅನ್ಶುಲ್ ಕಾಂಬೋಜ್, ಸಾಯಿ ಕಿಶೋರ್, ಆಕಿಬ್ ಖಾನ್, ಅನುಜ್ ರಾವತ್, ರಾಸಿಖ್ ಸಲಾಂ, ನಿಶಾಂತ್ ಸಿಂಧು, ಪ್ರಭಾಸಿಮ್ರಾನ್ ಸಿಂಗ್, ಅಭಿಷೇಕ್ ಶರ್ಮಾ, ರಮಣದೀಪ್ ಸಿಂಗ್, ಹೃತಿಕ್ ಶೌಕೀನ್, ನೆಹಾಲ್ ವಧೇರಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!