AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಪಾಕಿಸ್ತಾನದ ಬಹಿಷ್ಕಾರದಿಂದ ಭಾರತಕ್ಕೆ ಸಿಗುವ ಅಂಕ ಎಷ್ಟು?

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್​ನಲ್ಲಿದೆ. ಇದಾಗ್ಯೂ ಈ ಮೊದಲ ಸುತ್ತಿನಲ್ಲಿ ಭಾರತ ತಂಡವನ್ನು ಎದುರಿಸಲು ಪಾಕಿಸ್ತಾನ್ ನಿರಾಕರಿಸಿದೆ. ಅಂದರೆ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ್ ಬಹಿಷ್ಕರಿಸಲು ನಿರ್ಧರಿಸಿದೆ.

IND vs PAK: ಪಾಕಿಸ್ತಾನದ ಬಹಿಷ್ಕಾರದಿಂದ ಭಾರತಕ್ಕೆ ಸಿಗುವ ಅಂಕ ಎಷ್ಟು?
Ind Vs Pak
ಝಾಹಿರ್ ಯೂಸುಫ್
|

Updated on: Feb 02, 2026 | 8:59 AM

Share

ಟಿ20 ವಿಶ್ವಕಪ್​ನಲ್ಲಿನ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಅದರಂತೆ ಫೆಬ್ರವರಿ 15 ರಂದು ನಡೆಯಬೇಕಿರುವ ಭಾರತ ಮತ್ತು ಪಾಕಿಸ್ತಾನ್ ಪಂದ್ಯವು ಜರುಗುವುದು ಅನುಮಾನ. ಒಂದು ವೇಳೆ ಪಂದ್ಯ ನಡೆಯದೇ ಇದ್ದರೆ ಭಾರತಕ್ಕೆ ಸಿಗುವ ಅಂಕ ಎಷ್ಟು ಎಂಬ ಪ್ರಶ್ನೆ ಮೂಡುವುದು ಸಹಜ.

ಸಾಮಾನ್ಯವಾಗಿ ಪಂದ್ಯ ರದ್ದಾದರೆ ಉಭಯ ತಂಡಗಳು ತಲಾ 2 ಅಂಕಗಳನ್ನು ಹಂಚಿಕೊಳ್ಳುತ್ತವೆ. ಇದೀಗ ಪಾಕಿಸ್ತಾನ್ ಪಂದ್ಯವನ್ನು ಬಹಿಷ್ಕರಿಸುವುದರಿಂದ ಅಂಕಗಳನ್ನು ಹಂಚಿಕೊಳ್ಳಲಾಗುತ್ತದೆಯೇ ಎಂಬುದೇ ಪ್ರಶ್ನೆ.

ಈ ಪ್ರಶ್ನೆಗೆ ಉತ್ತರ ಇಲ್ಲ. ಪಾಕಿಸ್ತಾನ್ ತಂಡವು ಪಂದ್ಯವನ್ನು ಬಾಯ್ಕಾಟ್ ಮಾಡುತ್ತಿರುವುದರಿಂದ ಅವರಿಗೆ ಯಾವುದೇ ಅಂಕ ಸಿಗುವುದಿಲ್ಲ. ಇತ್ತ ಟೀಮ್ ಇಂಡಿಯಾ ಪಂದ್ಯವಾಡಲು ಸಿದ್ಧವಾಗಿರುವುದರಿಂದ ಸಂಪೂರ್ಣ ಅಂಕಗಳನ್ನು ಪಡೆಯಲಿದೆ.

ಅಂದರೆ ಗೆಲುವಿಗೆ ನೀಡಲಾಗುವ ಸಂಪೂರ್ಣ ಅಂಕವನ್ನು ಟೀಮ್ ಇಂಡಿಯಾ ಪಡೆಯಲಿದೆ. ಟಿ20 ವಿಶ್ವಕಪ್​ನಲ್ಲಿ ಒಂದು ಗೆಲುವಿಗೆ 2 ಅಂಕಗಳನ್ನು ನೀಡಲಾಗುತ್ತದೆ. ಅಂದರಂತೆ ಪಾಕಿಸ್ತಾನ್ ತಂಡವು ಪಂದ್ಯವನ್ನು ಬಹಿಷ್ಕರಿಸಿದರೆ ಟೀಮ್ ಇಂಡಿಯಾ 2 ಅಂಕಗಳನ್ನು ಪಡೆಯಲಿದೆ.

ಅತ್ತ ಪಂದ್ಯದಿಂದ ಹಿಂದೆ ಸರಿಯುವ ಕಾರಣ ಪಾಕಿಸ್ತಾನ್ ತಂಡಕ್ಕೆ ಯಾವುದೇ ಅಂಕ ಸಿಗುವುದಿಲ್ಲ. ಇದರಿಂದ ಪಾಕಿಸ್ತಾನ್ ತಂಡದ ನೆಟ್ ರನ್ ರೇಟ್ ಮೇಲೆ ನೇರ ಪರಿಣಾಮ ಬೀರಲಿದೆ.

ಪಾಕಿಸ್ತಾನ್ ಪಂದ್ಯವನ್ನು ಬಹಿಷ್ಕರಿಸುತ್ತಿರುವುದೇಕೆ?

ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದೆ. ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಾಂಗ್ಲಾದೇಶ್ ತಂಡದ ಪಂದ್ಯಗಳನ್ನು ಭಾರತದಿಂದ ಶ್ರೀಂಕಾಗೆ ಸ್ಥಳಾಂತರ ಮಾಡಬೇಕೆಂದು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಆಗ್ರಹಿಸಿತ್ತು.

ಆದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಅಲ್ಲದೆ ಬಾಂಗ್ಲಾ ತಂಡವು ಭಾರತದಲ್ಲೇ ಆಡಬೇಕೆಂದು ಸೂಚಿಸಿದ್ದರು. ಐಸಿಸಿಯ ಈ ಸೂಚನೆಯನ್ನು ತಿರಸ್ಕರಿಸಿದ್ದರಿಂದ ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್​ನಿಂದ ಕೈ ಬಿಡಲಾಯಿತು.

ಇತ್ತ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವ ಐಸಿಸಿ ಹಾಗೂ ಬಿಸಿಸಿಐ ಕ್ರಮವನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಖಂಡಿಸಿದೆ. ಇದೇ ಕಾರಣಕ್ಕೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಫೈನಲ್​ನಲ್ಲಿ RCB ತಂಡದ ಎದುರಾಳಿ ಯಾರು?

ಹೀಗಾಗಿ ಫೆಬ್ರವರಿ 15 ಕ್ಕೆ ನಿಗದಿಯಾಗಿರುವ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯುವುದು ಅನುಮಾನ. ಇದಾಗ್ಯೂ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಮನವೊಲಿಸಲು ಐಸಿಸಿ ಯಶಸ್ವಿಯಾಗಲಿದೆಯಾ ಕಾದು ನೋಡಬೇಕಿದೆ.

Follow Us
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?
ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ
8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ