AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಸೆಮೀಸ್ ಎದುರಾಳಿಯಾದ್ರೆ? ಪಾಕ್ ನಾಯಕ ನೀಡಿದ ಉತ್ತರವೇನು ನೋಡಿ

India vs Pakistan T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯ ಪಾಕಿಸ್ತಾನ ಸರ್ಕಾರದ ನಿರ್ಧಾರದಿಂದ ರದ್ದಾಗಿದೆ. ಈ ಬಹಿಷ್ಕಾರ ಲೀಗ್ ಹಂತದಲ್ಲಿ ಪಾಕ್‌ಗೆ 2 ಅಂಕಗಳ ನಷ್ಟ ತರಲಿದೆ. ಸೆಮಿಫೈನಲ್ ಅಥವಾ ಫೈನಲ್‌ನಲ್ಲೂ ಭಾರತ ಎದುರಾದರೆ ಆಗಲೂ ಸರ್ಕಾರದ ನಿಯಮ ಪಾಲಿಸಬೇಕಾಗುತ್ತದೆ ಎಂದು ಸಲ್ಮಾನ್ ಅಘಾ ಹೇಳಿದ್ದಾರೆ.

ಭಾರತ ಸೆಮೀಸ್ ಎದುರಾಳಿಯಾದ್ರೆ? ಪಾಕ್ ನಾಯಕ ನೀಡಿದ ಉತ್ತರವೇನು ನೋಡಿ
Ind Vs Pak
ಪೃಥ್ವಿಶಂಕರ
|

Updated on: Feb 05, 2026 | 10:28 PM

Share

2026 ರ ಟಿ20 ವಿಶ್ವಕಪ್‌ (T20 World Cup 2026) ಇನ್ನೇರಡು ದಿನಗಳಲ್ಲಿ ಆರಂಭವಾಗಲಿದೆ. ಆದಾಗ್ಯೂ ಕೋಟ್ಯಾಂತರ ಅಭಿಮಾನಿಗಳು ಕಾದು ಕುಳಿತಿದ್ದ ಪಂದ್ಯ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವೆ ಫೆಬ್ರವರಿ 15 ರಂದು ನಡೆಯಬೇಕಿತ್ತು. ಆದರೆ ಈ ಪಂದ್ಯ ರದ್ದಾಗಿದೆ. ಇದಕ್ಕೆ ಕಾರಣ ಪಾಕಿಸ್ತಾನ. ಟೀಂ ಇಂಡಿಯಾ ವಿರುದ್ಧದ ಈ ಪಂದ್ಯವನ್ನು ನಾವು ಬಹಿಷ್ಕರಿಸುತ್ತಿದ್ದೇವೆ ಎಂದು ಪಾಕಿಸ್ತಾನ ಪ್ರಧಾನಿ ಹೇಳಿಕೆ ನೀಡಿದ್ದಾರೆ. ಇದರಿಂದ ಲೀಗ್ ಹಂತದಲ್ಲಿ ಉಭಯ ತಂಡಗಳ ನಡುವೆ ನಡೆಯಬೇಕಿದ್ದ ಪಂದ್ಯ ರದ್ದಾಗಿದೆ. ಪಾಕಿಸ್ತಾನದ ಈ ನಿರ್ಧಾರ ಅದಕ್ಕೆ ದೊಡ್ಡ ಆತಂಕವನ್ನು ತಂದೊಡ್ಡಿದೆ. ಏಕೆಂದರೆ ಸೆಮಿಫೈನಲ್ ಹಾಗೂ ಫೈನಲ್​ನಲ್ಲಿ ಟೀಂ ಇಂಡಿಯಾವೇ ಪಾಕಿಸ್ತಾನಕ್ಕೆ ಎದುರಾದರೆ, ಆಗಲೂ ಪಾಕಿಸ್ತಾನ ಆ ಪಂದ್ಯವನ್ನು ಬಹಿಷ್ಕರಿಸುತ್ತದಾ ಎಂಬ ಪ್ರಶ್ನೆ ಮೂಡಿದೆ.

ಸೆಮೀಸ್ ಮತ್ತು ಫೈನಲ್​ನಲ್ಲಿ ಎದುರಾದರೆ?

ಲೀಗ್ ಹಂತದಲ್ಲಿ ಪಂದ್ಯವನ್ನು ಬಹಿಷ್ಕರಿಸುತ್ತಿರುವುದು ಪಾಕಿಸ್ತಾನಕ್ಕೆ 2 ಅಂಕಗಳ ನಷ್ಟವನ್ನುಂಟು ಮಾಡುತ್ತದೆ. ಆದರೆ ಇತರೆ ತಂಡಗಳ ವಿರುದ್ಧ ಗೆದ್ದು ಮುಂದಿನ ಹಂತಕ್ಕೆ ಹೋಗುವ ಅವಕಾಶ ಪಾಕಿಸ್ತಾನಕ್ಕಿದೆ. ಆದರೆ ಸೆಮಿಫೈನಲ್ ಹಾಗೂ ಫೈನಲ್ ಸುತ್ತಿನಲ್ಲಿ ಅದು ಸಾಧ್ಯವಿಲ್ಲ. ಒಂದು ವೇಳೆ ಪಾಕಿಸ್ತಾನ ಆ ಸಂದರ್ಭದಲ್ಲೂ ತನ್ನ ನಿರ್ಧಾರಕ್ಕೆ ಬದ್ಧವಾಗಿ ನಿತ್ತರೆ ಅದು ಟೂರ್ನಿಯಿಂದಲೇ ಹೊರಬೀಳಬೇಕಾಗುತ್ತದೆ. ಇದೀಗ ಇದೇ ಪ್ರಶ್ನೆಯನ್ನು ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಘಾ ಬಳಿ ಕೇಳಲಾಗಿದೆ.

ಕೊಲಂಬೊದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಲ್ಮಾನ್ ಆಘಾ ಈ ವಿಷಯವನ್ನು ಪ್ರಸ್ತಾಪಿಸಿದರು. ‘ಭಾರತದ ವಿರುದ್ಧದ ಪಂದ್ಯ ನಮ್ಮ ನಿಯಂತ್ರಣದಲ್ಲಿಲ್ಲ. ಅದು ಪಾಕಿಸ್ತಾನ ಸರ್ಕಾರದ ನಿರ್ಧಾರ, ಮತ್ತು ನಾವೆಲ್ಲರೂ ಅದನ್ನು ಗೌರವಿಸುತ್ತೇವೆ. ಅವರು ಏನು ಹೇಳುತ್ತಾರೋ ಅದನ್ನು ನಾವು ಮಾಡುತ್ತೇವೆ’ ಎಂದರು. ಇದೇ ವೇಳೆ ನಾಕೌಟ್ ಪಂದ್ಯಗಳಲ್ಲಿಯೂ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮುಖಾಮುಖಿಯಾದರೆ, ಮತ್ತೊಮ್ಮೆ ಪಾಕಿಸ್ತಾನ ಸರ್ಕಾರದ ನಿರ್ಧಾರಕ್ಕೆ ತಂಡ ಬದ್ಧವಾಗಿರುತ್ತಾ ಎಂಬ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಸಲ್ಮಾನ್ ಆಘಾ, ‘ನಾವು ಸೆಮಿಫೈನಲ್ ಅಥವಾ ಫೈನಲ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ಮತ್ತೆ ಆಡಬೇಕಾದ ಸಂದರ್ಭ ಬಂದರೆ ಆಗಲೂ ಸರ್ಕಾರದ ಸಲಹೆಯನ್ನು ಅನುಸರಿಸಬೇಕಾಗುತ್ತದೆ’ಎಂದಿದ್ದಾರೆ.

ಬಾಂಗ್ಲಾ ಆಡದಿರುವುದು ನಿರಾಶೆ ತಂದಿದೆ

ಇದೇ ವೇಳೆ ಬಾಂಗ್ಲಾದೇಶ ತಂಡ ಹಿಂದೆ ಸರಿದಿರುವುದರ ಬಗ್ಗೆ ಮಾತನಾಡಿದ ಅಘಾ, ‘ಬಾಂಗ್ಲಾದೇಶ ತಂಡವು ಟೂರ್ನಮೆಂಟ್‌ನಲ್ಲಿ ಆಡದಿರುವುದು ದುರದೃಷ್ಟಕರ. ಅವರು ನಮ್ಮ ಸಹೋದರರು. ಅವರು ಟೂರ್ನಮೆಂಟ್‌ನಲ್ಲಿ ನಮ್ಮನ್ನು ಬೆಂಬಲಿಸಬಹುದಿತ್ತು ಎಂದು ನಾನು ಹೇಳುತ್ತೇನೆ. ಮತ್ತು ಅವರನ್ನು ಈ ಸ್ಥಿತಿಯಲ್ಲಿ ನೋಡುವುದು ನಿಜಕ್ಕೂ ದುಃಖಕರವಾಗಿದೆ’ ಎಂದರು. ಇನ್ನು ಕಳೆದ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ವಿರುದ್ಧದ ಸೋಲಿನ ಬಗ್ಗೆಯೂ ಮಾತನಾಡಿದ ಸಲ್ಮಾನ್ ಆಘಾ, ‘ನಾವು ಕಳೆದ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ವಿರುದ್ಧ ಸೋತಿದ್ದೇವೆ, ಆದರೆ ಅದು ಹಿಂದಿನದು. ಇದು ಹೊಸ ವಿಶ್ವಕಪ್. ಇದು ಹೊಸ ತಂಡ, ಮತ್ತು ನಾವು ಇದಕ್ಕಾಗಿ ತುಂಬಾ ಉತ್ಸುಕರಾಗಿದ್ದೇವೆ. ನಾಯಕನಾಗಿ ಇದು ನನ್ನ ಮೊದಲ ವಿಶ್ವಕಪ್, ಮತ್ತು ನಾನು ತಂಡವನ್ನು ಮುನ್ನಡೆಸಲು ಬಯಸುತ್ತೇನೆ. ಪ್ರತಿಯೊಬ್ಬ ಆಟಗಾರನು ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ವಾತಾವರಣವನ್ನು ಸೃಷ್ಟಿಸಲು ನಾನು ಬಯಸುತ್ತೇನೆ’ ಎಂದಿದ್ದಾರೆ.

9 ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಇದುವರೆಗೆ ಮುರಿಯಲಾಗದ ದಾಖಲೆಗಳಿವು

ಪಾಕಿಸ್ತಾನದ ವೇಳಾಪಟ್ಟಿ

ಟಿ20 ವಿಶ್ವಕಪ್​​ನಲ್ಲಿ ಪಾಕಿಸ್ತಾನದ ತನ್ನ ಮೊದಲ ಪಂದ್ಯವನ್ನು ಫೆಬ್ರವರಿ 7 ರಂದು ನೆದರ್ಲ್ಯಾಂಡ್ಸ್ ವಿರುದ್ಧ ಆಡಲಿದೆ. ನಂತರ ಫೆಬ್ರವರಿ 10 ರಂದು ಅಮೆರಿಕವನ್ನು ಎದುರಿಸಲಿದೆ. ಫೆಬ್ರವರಿ 15 ರಂದು ಪಾಕಿಸ್ತಾನ ಭಾರತವನ್ನು ಎದುರಿಸಲಿದೆ. ಆದಾಗ್ಯೂ, ಈ ಪಂದ್ಯದ ಸ್ಥಿತಿ ಇನ್ನೂ ಸ್ಪಷ್ಟವಾಗಿಲ್ಲ. ಫೆಬ್ರವರಿ 18 ರಂದು ನಮೀಬಿಯಾ ವಿರುದ್ಧ ಅಂತಿಮ ಲೀಗ್ ಪಂದ್ಯ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ