AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ಟೂರ್ನಿಯಿಂದ ಪಾಕಿಸ್ತಾನಕ್ಕೆ ಗೇಟ್ ಪಾಸ್?

Asia Cup 2025: ಈ ಬಾರಿಯ ಏಷ್ಯಾಕಪ್​ಗೆ ಬಿಸಿಸಿಐ ಆತಿಥ್ಯವಹಿಸಲಿದೆ. 2026ರ ಟಿ20 ವಿಶ್ವಕಪ್​ಗೂ ಮುಂಚಿತವಾಗಿ ನಡೆಯಲಿರುವ ಈ ಟೂರ್ನಿಯಿಂದ ಪಾಕಿಸ್ತಾನ್ ತಂಡವನ್ನು ಹೊರಗಿಡುವ ಸಾಧ್ಯತೆ ಹೆಚ್ಚಿದೆ. ಈ ಮೂಲಕ ಪಾಕ್ ವಿರುದ್ಧ ಎಲ್ಲಾ ರೀತಿಯ ಕ್ರಿಕೆಟ್ ಸಂಬಂಧವನ್ನು ಮುರಿದುಕೊಳ್ಳಲು ಬಿಸಿಸಿಐ ಮುಂದಾಗುವ ಸಾಧ್ಯತೆಯಿದೆ.

ಏಷ್ಯಾಕಪ್ ಟೂರ್ನಿಯಿಂದ ಪಾಕಿಸ್ತಾನಕ್ಕೆ ಗೇಟ್ ಪಾಸ್?
India Vs Pakistan
ಝಾಹಿರ್ ಯೂಸುಫ್
|

Updated on: May 03, 2025 | 1:58 PM

Share

ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಇದರ ನಡುವೆ ಪಾಕಿಸ್ತಾನಿ ಕ್ರಿಕೆಟಿಗರು ಭಾರತದ ವಿರುದ್ಧ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಈಗಾಗಲೇ ಭಾರತ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇದೀಗ ಬಿಸಿಸಿಐ (BCCI) ಕೂಡ ಪಾಕಿಸ್ತಾನ್ ವಿರುದ್ಧ ಎಲ್ಲಾ ರೀತಿಯ ಕ್ರಿಕೆಟ್​ಗೆ ಬ್ರೇಕ್ ಹಾಕಲು ಚಿಂತಿಸಿದೆ. ಅದರ ಮೊದಲ ಭಾಗವಾಗಿ ಏಷ್ಯಾಕಪ್ ಟೂರ್ನಿಯಿಂದ ಪಾಕ್ ತಂಡವನ್ನು ಹೊರದಬ್ಬುವ ಸಾಧ್ಯತೆಯಿದೆ.

2026 ರ ಟಿ20 ವಿಶ್ವಕಪ್‌ಗೂ ಮುನ್ನ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಈ ಮಹತ್ವದ ಪಂದ್ಯಾವಳಿಯಿಂದ ಹೊರಗಿಡುವ ಸಾಧ್ಯತೆಯಿದೆ. ಹೀಗಾಗಿ ಮುಂಬರುವ ಎಸಿಸಿ ಟೂರ್ನಿಯಲ್ಲಿ ಪಾಕ್ ತಂಡ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಸುನಿಲ್ ಗವಾಸ್ಕರ್.

ಬಿಸಿಸಿಐ  ಯಾವಾಗಲೂ ಭಾರತ ಸರ್ಕಾರದ ಆದೇಶಗಳನ್ನು ಪಾಲಿಸುತ್ತಾ ಬಂದಿದೆ. ಹೀಗಾಗಿ ಏಷ್ಯಾಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ಆಡುವ ಸಾಧ್ಯತೆಯಿಲ್ಲ. ಅಲ್ಲದೆ ಪಾಕಿಸ್ತಾನ್ ತಂಡವನ್ನು ಹೊರಗಿಟ್ಟು ಏಷ್ಯಾಕಪ್ ಆಯೋಜಿಸಲು ಏಷ್ಯನ್ ಕ್ರಿಕೆಟ್​ ಕೌನ್ಸಿಲ್​ಗೆ ಒತ್ತಡ ಹೇರಬಹುದು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ
Image
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
Image
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
Image
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
Image
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಸುನಿಲ್ ಗವಾಸ್ಕರ್ ಅವರ ಪ್ರಕಾರ, ಪಾಕಿಸ್ತಾನವನ್ನು ಹೊರಗಿಡಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅನ್ನು ಸಹ ವಿಸರ್ಜಿಸಬಹುದು. ಇದರರ್ಥ ACC ಯ ಭವಿಷ್ಯವೂ ಅಪಾಯದಲ್ಲಿದೆ. ಪರಿಸ್ಥಿತಿ ಸುಧಾರಿಸದಿದ್ದರೆ, ಅದು ಅಸ್ತಿತ್ವದಲ್ಲೇ ಇರುವುದಿಲ್ಲ. ಏಷ್ಯಾಕಪ್ ಬದಲಿಗೆ ಕೇವಲ 3 ಅಥವಾ 4 ದೇಶಗಳ ನಡುವೆ ಸರಣಿಗಳನ್ನು ಆಯೋಜಿಸಬಹುದು.

ಇದನ್ನೂ ಓದಿ: 11 ಫೋರ್, 3 ಸಿಕ್ಸ್: ಕೊನೆಗೂ ಶತಕ ಪೂರೈಸಿದ ಗ್ಲೆನ್ ಮ್ಯಾಕ್ಸ್​ವೆಲ್

ಸದ್ಯ ಪರಿಸ್ಥಿತಿಯನ್ನು ಗಮನಿಸಿದರೆ, ಭಾರತ ಮತ್ತು ಪಾಕಿಸ್ತಾನ್ ಯಾವುದೇ ಪಂದ್ಯವಾಡುವುದಿಲ್ಲ. ಇದು ಏಷ್ಯಾಕಪ್​ನೊಂದಿಗೆ ಜಾರಿಯಾಗುವ ಸಾಧ್ಯತೆಯಿದೆ. ಆದರೆ ಇಲ್ಲಿ ಏಷ್ಯಾಕಪ್ ಆಯೋಜನೆಗೆ ಬಿಸಿಸಿಐ ಯಾವ ಬೇಡಿಕೆ ಮುಂದಿಡಲಿದೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ಮುಂದಿನ ಕೆಲವು ತಿಂಗಳುಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಲಿದೆ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?