AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ತಂಡದಿಂದಲೂ ಬಾಬರ್ ಔಟ್; 6 ಹೊಸ ಮುಖಗಳಿಗೆ ಚೊಚ್ಚಲ ಅವಕಾಶ

Pakistan Cricket Shake-up: 2026ರ ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನದ ನಂತರ ಪಾಕಿಸ್ತಾನ ತಂಡದಲ್ಲಿ ಮಹತ್ವದ ಬದಲಾವಣೆಗಳು ನಡೆದಿವೆ. ಕಳಪೆ ಫಾರ್ಮ್‌ನಲ್ಲಿದ್ದ ಬಾಬರ್ ಆಜಮ್ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿದೆ. ಬಾಂಗ್ಲಾದೇಶ ವಿರುದ್ಧದ ಮುಂಬರುವ ಏಕದಿನ ಸರಣಿಗೆ ಪಾಕಿಸ್ತಾನ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಹಲವು ಹಿರಿಯ ಆಟಗಾರರನ್ನು ಕೈಬಿಟ್ಟು, ಆರು ಹೊಸ ಆಟಗಾರರಿಗೆ ಅವಕಾಶ ನೀಡಿದೆ. ಶಾಹೀನ್ ಅಫ್ರಿದಿ ನಾಯಕತ್ವ ಮುಂದುವರಿದಿದೆ.

ಏಕದಿನ ತಂಡದಿಂದಲೂ ಬಾಬರ್ ಔಟ್; 6 ಹೊಸ ಮುಖಗಳಿಗೆ ಚೊಚ್ಚಲ ಅವಕಾಶ
Pak Team
ಪೃಥ್ವಿಶಂಕರ
|

Updated on:Mar 04, 2026 | 5:34 PM

Share

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup  2026) ಪಾಕಿಸ್ತಾನ ತಂಡದ ಪ್ರದರ್ಶನ ಸಾಧಾರಣವಾಗಿತ್ತು. ಲೀಗ್ ಸುತ್ತನ್ನು ದಾಟಿ, ಸೂಪರ್ 8 ಸುತ್ತಿಗೆ ಬಂದಿದ್ದ ಪಾಕ್ ತಂಡಕ್ಕೆ ಈ ಸುತ್ತನ್ನು ಮೀರಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಹೀಗಾಗಿ ತಂಡದ ಕಳಪೆ ಪ್ರದರ್ಶನದಿಂದ ಕೆರಳಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಇತ್ತೀಚೆಗಷ್ಟೇ ಆಟಗಾರರಿಗೆ ದಂಡ ವಿಧಿಸಿತ್ತು. ಏತನ್ಮಧ್ಯೆ, ಅಲೀಮ್ ದಾರ್ ಆಯ್ಕೆದಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ತಂಡದ ಸ್ಟಾರ್ ಆಟಗಾರ ಬಾಬರ್ ಆಝಂ (Babar Azam) ವಿರುದ್ಧ ಮಂಡಳಿಯು ಮಹತ್ವದ ಕ್ರಮ ಕೈಗೊಂಡಿದೆ. ವಾಸ್ತವವಾಗಿ ಟಿ20 ವಿಶ್ವಕಪ್​ನಲ್ಲಿ ಬಾಬರ್ ಆಝಂ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಕೈಬಿಡಲಾಗಿತ್ತು. ಈಗ, ಏಕದಿನ ತಂಡದಿಂದಲೂ ಹೊರಹಾಕಲಾಗಿದೆ.

ಏಕದಿನ ತಂಡದಿಂದ ಆಝಂಗೆ ಗೇಟ್​ಪಾಸ್

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಂಬರುವ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಮೂರು ಪಂದ್ಯಗಳ ಸರಣಿಯು ಮಾರ್ಚ್ 11, 13 ಮತ್ತು 15, 2026 ರಂದು ಢಾಕಾದ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ತಂಡದಲ್ಲಿ ಪ್ರಮುಖ ಬದಲಾವಣೆಗಳಾಗಿದ್ದು, ಹಲವಾರು ಹಿರಿಯ ಆಟಗಾರರನ್ನು ಕೈಬಿಡಲಾಗಿದ್ದು, ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಇದರ ಪರಿಣಾಮವಾಗಿ ಪ್ರಸ್ತುತ ಕಳಪೆ ಫಾರ್ಮ್‌ನೊಂದಿಗೆ ಹೋರಾಡುತ್ತಿರುವ ಬಾಬರ್ ಆಝಂ ಕೂಡ ತಂಡದಿಂದ ಹೊರಗುಳಿದಿದ್ದಾರೆ.

ಬಾಬರ್ ಆಝಂ ಜೊತೆಗೆ, ಸ್ಯಾಮ್ ಅಯೂಬ್ ಮತ್ತು ಮೊಹಮ್ಮದ್ ನವಾಜ್ ಅವರಂತಹ ಅನುಭವಿ ಆಟಗಾರರನ್ನು ಸರಣಿಯಿಂದ ಹೊರಗಿಡಲಾಗಿದೆ. ಟಿ20 ವಿಶ್ವಕಪ್ ತಂಡದಿಂದ ಹೊರಗುಳಿದಿದ್ದ ಹ್ಯಾರಿಸ್ ರೌಫ್ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇವರೊಂದಿಗೆವಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫೈಸಲ್ ಅಕ್ರಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರಂತಹ ಆಟಗಾರರು ಸಹ ತಂಡದ ಭಾಗವಾಗಿದ್ದಾರೆ.

ಈ ಹೊಸ ಆಟಗಾರರಿಗೆ ಅವಕಾಶ

ಮತ್ತೊಂದೆಡೆ, ಶಹೀನ್ ಶಾ ಅಫ್ರಿದಿ ಏಕದಿನ ತಂಡದ ನಾಯಕನಾಗಿ ಮುಂದುವರಿಯಲಿದ್ದಾರೆ. ತಂಡದಲ್ಲಿ ಆರು ಮಂದಿ ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. ಅವರಲ್ಲಿ ಅಬ್ದುಲ್ ಸಮದ್, ಮಾಜ್ ಸದಾಕತ್, ಮುಹಮ್ಮದ್ ಘಾಜಿ ಘೋರಿ, ಸಾದ್ ಮಸೂದ್, ಸಾಹಿಬ್ಜಾದಾ ಫರ್ಹಾನ್ ಮತ್ತು ಶಮಯಾಲ್ ಹುಸೇನ್ ಸೇರಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸಾಹಿಬ್ಜಾದಾ ಫರ್ಹಾನ್ ಈಗ ಏಕದಿನ ಮಾದರಿಯಲ್ಲಿ ಛಾಪು ಮೂಡಿಸಲು ಸಿದ್ಧರಾಗಿದ್ದಾರೆ. ಅಬ್ದುಲ್ ಸಮದ್ ಪಾಕಿಸ್ತಾನದ ಟಿ20 ತಂಡದ ಭಾಗವಾಗಿದ್ದು, ಇದೀಗ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ; ಪಾಕ್ ತಂಡದಲ್ಲಿ ಮೊದಲ ವಿಕೆಟ್ ಪತನ

ಪಾಕಿಸ್ತಾನ ತಂಡ: ಶಾಹೀನ್ ಶಾ ಅಫ್ರಿದಿ (ನಾಯಕ), ಅಬ್ದುಲ್ ಸಮದ್, ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫೈಸಲ್ ಅಕ್ರಮ್, ಹ್ಯಾರಿಸ್ ರೌಫ್, ಹುಸೇನ್ ತಲಾತ್, ಮಾಜ್ ಸದಾಕತ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಂ ಜೂನಿಯರ್, ಮೊಹಮ್ಮದ್ ಘಾಜಿ ಘೋರಿ (ವಿಕೆಟ್ ಕೀಪರ್), ಸಾದ್ ಮಸೂದ್, ಸಾಹಿಬ್‌ಜಾದಾ ಫರ್ಹಾನ್, ಸಲ್ಮಾನ್ ಅಲಿ ಅಘಾ ಮತ್ತು ಶಮಿಲ್ ಹುಸೇನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Wed, 4 March 26

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ