AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತದ ವಿರುದ್ಧ ಹೀನಾಯ ಸೋಲು; ಪಾಕ್ ಕ್ರಿಕೆಟ್ ಮಂಡಳಿಯಲ್ಲಿ ಮೊದಲ ತಲೆದಂಡ

India vs Pakistan Asia Cup Match: ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಸೋಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ (ಪಿಸಿಬಿ) ದೊಡ್ಡ ಸಂಚಲನವನ್ನು ಉಂಟುಮಾಡಿದೆ. ಭಾರತದ 7 ವಿಕೆಟ್‌ಗಳ ಜಯದ ನಂತರ, ಪಾಕಿಸ್ತಾನ ತಂಡದ ನಿರ್ದೇಶಕ ಉಸ್ಮಾನ್ ವಹಾಲಾ ಅವರನ್ನು ಅಮಾನತುಗೊಳಿಸಲಾಗಿದೆ. ಪಂದ್ಯದ ನಂತರದ ಕೈಕುಲುಕದ ಘಟನೆಯನ್ನು ನಿರ್ವಹಿಸುವಲ್ಲಿನ ವೈಫಲ್ಯಕ್ಕಾಗಿ ಅವರನ್ನು ದೂಷಿಸಲಾಗಿದೆ. ಪಿಸಿಬಿ ಮ್ಯಾಚ್ ರೆಫರಿ ವಿರುದ್ಧವೂ ಆಕ್ಷೇಪ ವ್ಯಕ್ತಪಡಿಸಿದೆ.

IND vs PAK: ಭಾರತದ ವಿರುದ್ಧ ಹೀನಾಯ ಸೋಲು; ಪಾಕ್ ಕ್ರಿಕೆಟ್ ಮಂಡಳಿಯಲ್ಲಿ ಮೊದಲ ತಲೆದಂಡ
Pakistan Team
ಪೃಥ್ವಿಶಂಕರ
|

Updated on:Sep 15, 2025 | 8:21 PM

Share

2025 ರ ಏಷ್ಯಾಕಪ್‌ನಲ್ಲಿ (Asia Cup 2025) ಟೀಂ ಇಂಡಿಯಾ ವಿರುದ್ಧ ಹೀನಾಯವಾಗಿ ಸೋತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ (PCB) ಕೋಲಾಹಲ ಉಂಟಾಗಿದೆ. ಭಾರತದ ವಿರುದ್ಧ 7 ವಿಕೆಟ್​ಗಳ ಸೋಲಿನ ಜೊತೆಗೆ, ಪಾಕಿಸ್ತಾನಿ ಆಟಗಾರರು ಮೈದಾನದಲ್ಲಿ ಅವಮಾನವನ್ನು ಎದುರಿಸಬೇಕಾಯಿತು. ವಾಸ್ತವವಾಗಿ, ಈ ಪಂದ್ಯ ಮುಗಿದ ನಂತರ ಟೀಂ ಇಂಡಿಯಾದ ಆಟಗಾರರು, ಪಾಕಿಸ್ತಾನಿ ಆಟಗಾರರೊಂದಿಗೆ ಹಸ್ತಲಾಘವ ಮಾಡದೆ ಡ್ರೆಸಿಂಗ್ ರೂಮ್​ಗೆ ತೆರಳಿದರು. ಈ ಘಟನೆಯ ನಂತರ, ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪಾಕ್ ತಂಡದ ನಿರ್ದೇಶಕರನ್ನು ಹುದ್ದೆಯಿಂದ ಅಮಾನತುಗೊಳಿಸಿದ್ದಾರೆ.

ನಿರ್ದೇಶಕರಿಗೆ ಗೇಟ್​​ಪಾಸ್

ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ತಂಡದ ನಿರ್ದೇಶಕ ಉಸ್ಮಾನ್ ವಹಾಲಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಈ ಹುದ್ದೆಯಿಂದ ಅಮಾನತುಗೊಳಿಸಿದೆ. ಪಂದ್ಯದ ನಂತರ ಕೈಕುಲುಕದ ಘಟನೆಯನ್ನು ನಿರ್ವಹಿಸುವಲ್ಲಿನ ಲೋಪಗಳಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ, ಇದು ಪಾಕಿಸ್ತಾನ ತಂಡವನ್ನು ಕ್ರೀಡಾ ಮನೋಭಾವದ ವಿಷಯದಲ್ಲಿ ದುರ್ಬಲ ಸ್ಥಾನಕ್ಕೆ ತಳ್ಳಿದೆ ಎಂಬುದು ಮಂಡಳಿಯ ಅಭಿಪ್ರಾಯವಾಗಿದೆ. ಹೀಗಾಗಿ ಉಸ್ಮಾನ್ ವಹಾಲಾ ಅವರ ತಲೆದಂಡವಾಗಿದೆ.

ಉಸ್ಮಾನ್ ವಹಾಲಾ ಅವರನ್ನು ಕಳೆದ ಎರಡು ವರ್ಷಗಳಿಂದ ಈ ಹುದ್ದೆಗೆ ನೇಮಿಸಲಾಗಿತ್ತು. ಇದು ಮಾತ್ರವಲ್ಲದೆ ಅವರು ಪಾಕಿಸ್ತಾನ ಸೂಪರ್ ಲೀಗ್‌ನ ಅಧ್ಯಕ್ಷರೂ ಆಗಿದ್ದಾರೆ. ಈ ಸೂಕ್ಷ್ಮ ಸಮಸ್ಯೆಯನ್ನು ಸಮಯಕ್ಕೆ ಸರಿಯಾಗಿ ಪರಿಹರಿಸಲು ಅವರು ವಿಫಲರಾಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಅಲ್ಲದೆ ಪಂದ್ಯ ಪೂರ್ವ ಸಿದ್ಧತೆಗಳಲ್ಲಿ ಪಾಕಿಸ್ತಾನದ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ವಹಾಲಾ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪವನ್ನು ಹೊರಿಸಲಾಗಿದೆ. ಪಂದ್ಯ ಪ್ರಾರಂಭವಾಗುವ ಮೊದಲೇ ಅವರು ಈ ಸಮಸ್ಯೆಯನ್ನು ಪ್ರಸ್ತಾಪಿಸಿ ಪರಿಹರಿಸಬೇಕಿತ್ತು ಎಂಬುದು ಮಂಡಳಿಯ ಅಭಿಪ್ರಾಯ.

IND vs PAK: ಶೇಕ್ ಹ್ಯಾಂಡ್ ಮಾಡದ ಟೀಂ ಇಂಡಿಯಾಕ್ಕೆ ಶಿಕ್ಷೆ? ಐಸಿಸಿ ನಿಯಮ ಏನು ಹೇಳುತ್ತೆ?

ರೆಫರಿ ವಿರುದ್ಧವೂ ಕ್ರಮಕ್ಕೆ ಆಗ್ರಹ

ನಿರ್ದೇಶಕರನ್ನು ಹುದ್ದೆಯಿಂದ ತೆಗೆದು ಹಾಕುವುದರ ಜೊತೆಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ಪಂದ್ಯದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ವಿರುದ್ಧವೂ ಗಂಭೀರ ಆರೋಪಗಳನ್ನು ಮಾಡಿದೆ. ಟಾಸ್ ಸಮಯದಲ್ಲಿ ಕೈಕುಲುಕದಂತೆ ಇಬ್ಬರೂ ನಾಯಕರಿಗೆ ಮ್ಯಾಚ್ ರೆಫರಿ ಹೇಳಿದ್ದಾರೆ. ಇದು ಐಸಿಸಿಯ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಪಿಸಿಬಿ ಆರೋಪಿಸಿದೆ. ಈ ಕಾರಣಕ್ಕಾಗಿ ಮ್ಯಾಚ್ ರೆಫರಿ ಪೈಕ್ರಾಫ್ಟ್ ಅವರನ್ನು ಏಷ್ಯಾಕಪ್ ಪಂದ್ಯಾವಳಿಯಿಂದ ತೆಗೆದುಹಾಕುವಂತೆ ಪಿಸಿಬಿ ಒತ್ತಾಯಿಸಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥರೂ ಆಗಿರುವ ಮೊಹ್ಸಿನ್ ನಖ್ವಿ, ಈ ವಿಷಯದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ಐಸಿಸಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Mon, 15 September 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ