AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan Team Jersey: ಪಾಕ್ ತಂಡದ ಹೊಸ ಜೆರ್ಸಿ: ಕಲ್ಲಂಗಡಿ ವಿನ್ಯಾಸ ಎಂದು ಫುಲ್ ಟ್ರೋಲ್

Pakistan Cricket Team's New Jersey: ಹೊಸ ಕಿಟ್ ಕುರಿತು ಪಾಕಿಸ್ತಾನ್ ಕ್ರಿಕೆಟ್​ ಮಂಡಳಿಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಹೀಗಾಗಿ ಜೆರ್ಸಿಯ ವಿನ್ಯಾಸ ಬದಲಾದರೂ ಅಚ್ಚರಿಪಡಬೇಕಿಲ್ಲ.

Pakistan Team Jersey: ಪಾಕ್ ತಂಡದ ಹೊಸ ಜೆರ್ಸಿ: ಕಲ್ಲಂಗಡಿ ವಿನ್ಯಾಸ ಎಂದು ಫುಲ್ ಟ್ರೋಲ್
Pakistan Team's New Jersey
TV9 Web
| Edited By: |

Updated on: Sep 19, 2022 | 12:05 PM

Share

ಮುಂಬರುವ ಐಸಿಸಿ ಟಿ20 ವಿಶ್ವಕಪ್ 2022 ಗಾಗಿ ಹಲವು ತಂಡಗಳು ಈಗಾಗಲೇ ತಮ್ಮ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಭಾನುವಾರ ಟೀಮ್ ಇಂಡಿಯಾ ಕೂಡ ತನ್ನ ವಿಶ್ವಕಪ್ ಜೆರ್ಸಿಯನ್ನು ಬಿಡುಗಡೆ ಮಾಡಿದೆ. ಹೊಸ ವಿನ್ಯಾಸದಿಂದ ಕೂಡಿರುವ ನೂತನ ಜೆರ್ಸಿಗೆ ಟೀಮ್ ಇಂಡಿಯಾ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಆದರೆ ಮತ್ತೊಂದೆಡೆ ಪಾಕಿಸ್ತಾನ್ ತಂಡದ ಹೊಸ ಜೆರ್ಸಿಯ ವಿನ್ಯಾಸ ಇದೀಗ ನಗೆಪಾಟಲಿಗೀಡಾಗಿದೆ.

ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್ ಜೆರ್ಸಿಯ ವಿನ್ಯಾಸ ಎನ್ನಲಾಗಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋದಲ್ಲಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ನೂತನ ಜೆರ್ಸಿ ಧರಿಸಿ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಜೆರ್ಸಿಯ ವಿನ್ಯಾಸವು ಕಳಪೆ ಮಟ್ಟದಲ್ಲಿದ್ದು, ಹೀಗಾಗಿ ಅಭಿಮಾನಿಗಳು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಅನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

ಅದರಲ್ಲೂ ಜೆರ್ಸಿಯಲ್ಲಿ ನೀಡಲಾಗಿರುವ ವಿನ್ಯಾಸವು ಕಲ್ಲಂಗಡಿಯನ್ನು ಹೋಲುತ್ತಿದೆ ಎಂದು ಅನೇಕರು ಕಮೆಂಟಿಸಿದ್ದಾರೆ. ಹೀಗಾಗಿ ಕಲ್ಲಂಗಡಿಯಿಂದ ಪ್ರೇರಣೆ ಪಡೆದು ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್​ ಜೆರ್ಸಿಯನ್ನು ರೂಪಿಸಿದೆ ಎಂದು ಟ್ರೋಲ್ ಮಾಡಲಾಗುತ್ತಿರುವುದು ವಿಶೇಷ.

ಇನ್ನು ಕೆಲವರು ಸೆಂಟರ್​ಫ್ರೆಶ್​ ಬಬಲ್​ಗಮ್​ನ ರ್ಯಾಪರ್​ ಥರ ಇದೆ ಎಂದು ಕಿಚಾಯಿಸಿದ್ದಾರೆ. ಇದೀಗ ಭಾರತ ಹಾಗೂ ಪಾಕಿಸ್ತಾನ್ ತಂಡಗಳ ಜೆರ್ಸಿಯನ್ನು ಹೋಲಿಕೆ ಮಾಡಲಾಗುತ್ತಿದ್ದು, ಈ ಮೂಲಕ ಪಾಕ್ ತಂಡದ ನೂತನ ಜೆರ್ಸಿಯ ವಿನ್ಯಾಸ ಹಾಗೂ ಬಣ್ಣಗಳ ಆಯ್ಕೆಯನ್ನು ವ್ಯಂಗ್ಯವಾಡಲಾಗುತ್ತಿದೆ. ಆದಾಗ್ಯೂ, ಹೊಸ ಕಿಟ್ ಕುರಿತು ಪಾಕಿಸ್ತಾನ್ ಕ್ರಿಕೆಟ್​ ಮಂಡಳಿಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಹೀಗಾಗಿ ಜೆರ್ಸಿಯ ವಿನ್ಯಾಸ ಬದಲಾದರೂ ಅಚ್ಚರಿಪಡಬೇಕಿಲ್ಲ.

ಪಾಕಿಸ್ತಾನ್ ಟಿ20 ವಿಶ್ವಕಪ್ ತಂಡ ಹೀಗಿದೆ:

ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೇನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ, ನಸೀಮ್ ಶಾ, ಶಾಹಿನ್ ಅಫ್ರಿದಿ , ಶಾನ್ ಮಸೂದ್, ಉಸ್ಮಾನ್ ಖಾದಿರ್

ಮೀಸಲು: ಫಖರ್ ಝಮಾನ್, ಮೊಹಮ್ಮದ್ ಹ್ಯಾರಿಸ್, ಶಹನವಾಜ್ ದಹಾನಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ