AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ‘ಸಂಕಷ್ಟದಲ್ಲಿದ್ದೇವೆ ಸಹಾಯ ಮಾಡಿ’; ವಿಶ್ವದ ಮುಂದೆ ವಿಶೇಷ ಮನವಿ ಇಟ್ಟ ಪಾಕ್ ಕ್ರಿಕೆಟರ್ಸ್

IND vs PAK: ಪ್ರವಾಹ ಸಂತ್ರಸ್ತರಿಗಾಗಿ ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಪ್ರಾರ್ಥಿಸಿದ್ದು, ಈ ಸಂಕಷ್ಟದ ಸಮಯದಲ್ಲಿ ಎಲ್ಲ ದೇಶಗಳು ಒಗ್ಗಟ್ಟಾಗಬೇಕು ಎಂದಿದ್ದಾರೆ. ಮತ್ತೊಂದೆಡೆ, ಸಂತ್ರಸ್ತರಿಗೆ ಸಹಾಯ ಮಾಡಲು ಹೆಚ್ಚು ಹೆಚ್ಚು ದೇಣಿಗೆ ನೀಡುವಂತೆ ಶಾಹೀನ್ ಶಾ ಆಫ್ರಿದಿ ಎಲ್ಲಾ ಜನರಲ್ಲಿ ಮನವಿ ಮಾಡಿದ್ದಾರೆ.

IND vs PAK: ‘ಸಂಕಷ್ಟದಲ್ಲಿದ್ದೇವೆ ಸಹಾಯ ಮಾಡಿ’; ವಿಶ್ವದ ಮುಂದೆ ವಿಶೇಷ ಮನವಿ ಇಟ್ಟ ಪಾಕ್ ಕ್ರಿಕೆಟರ್ಸ್
Pak cricketers
TV9 Web
| Edited By: |

Updated on:Aug 28, 2022 | 5:03 PM

Share

ಏಷ್ಯಾಕಪ್ (Asia Cup 2022) ಪಂದ್ಯಾವಳಿ ಆರಂಭವಾಗಿದ್ದು, ಭಾರತ ಇಂದಿನಿಂದ ತನ್ನ ಅಭಿಯಾನ ಆರಂಭಿಸಲಿದೆ. ಟೀಂ ಇಂಡಿಯಾದ ಮೊದಲ ಪಂದ್ಯ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧವಿದೆ. ಆದರೆ, ಭಾರತದೊಂದಿಗೆ ಕಣಕ್ಕಿಳಿಯುವ ಮುನ್ನ ಪಾಕ್ ಆಟಗಾರರ ಮನಸ್ಸು ಕೊಂಚ ಚಂಚಲವಾದಂತೆ ತೋರುತ್ತಿದೆ. ಪಾಕ್ ಕ್ರಿಕೆಟಿಗರು ವಿಶ್ವದ ಮುಂದೆ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಬಾಬರ್ ಆಜಮ್‌ನಿಂದ ಹಿಡಿದು ನಸೀಮ್ ಶಾ (Babar Azam to Naseem Shah) ತನಕ ಎಲ್ಲರೂ ಸಹಾಯ ಕೋರಿದ್ದಾರೆ. ಈಗ ನೀವು ಯೋಚಿಸುತ್ತಿರಬೇಕು ಈ ಆಟಗಾರರು ಹೀಗೆ ಮಾಡುವ ಅಗತ್ಯವೇನು ಎಂದು?. ಇದಕ್ಕೆ ಪ್ರಮುಖ ಕಾರಣವೆಮದರೆ ಪಾಕಿಸ್ತಾನದಲ್ಲಿ ಉಂಟಾಗಿರುವ ಪ್ರವಾಹದಿಂದ ಅಲ್ಲಿನ ಜನರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಅವರ ನೆರವಿಗೆ ದಾವಿಸುವಂತೆ ಪಾಕ್ ಕ್ರಿಕೆಟಿಗರು ಮನವಿ ಮಾಡಿದ್ದಾರೆ.

ಪಾಕಿಸ್ತಾನದ ಸಿಂಧ್, ಪಂಜಾಬ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯಗಳಲ್ಲಿ ಸುಮಾರು 10000 ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ. ಇದರಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದು, ಇನ್ನೂ ಅನೇಕ ಜನರು ನಿರಾಶ್ರಿತರಾಗಿದ್ದಾರೆ. ಒಟ್ಟಿನಲ್ಲಿ ಅತಿವೃಷ್ಟಿಯಿಂದ ಭಾರೀ ಪ್ರಮಾಣದ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ನಷ್ಟವಾಗಿದೆ. ಇದೇ ಕಾರಣಕ್ಕೆ ಏಷ್ಯಾಕಪ್ ಆಡಲು ಬಂದಿರುವ ಹಲವು ಪಾಕಿಸ್ತಾನಿ ಕ್ರಿಕೆಟಿಗರು ಸಂತ್ರಸ್ತರಿಗಾಗಿ ಪ್ರಾರ್ಥಿಸಿ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ನೆರವು ಕೋರಿದ ಪಾಕ್ ಕ್ರಿಕೆಟರ್ಸ್​

ಪ್ರವಾಹ ಸಂತ್ರಸ್ತರಿಗಾಗಿ ಪಾಕಿಸ್ತಾನದ ನಾಯಕ ಬಾಬರ್ ಆಜಮ್ ಪ್ರಾರ್ಥಿಸಿದ್ದು, ಈ ಸಂಕಷ್ಟದ ಸಮಯದಲ್ಲಿ ಎಲ್ಲ ದೇಶಗಳು ಒಗ್ಗಟ್ಟಾಗಬೇಕು ಎಂದಿದ್ದಾರೆ. ಮತ್ತೊಂದೆಡೆ, ಸಂತ್ರಸ್ತರಿಗೆ ಸಹಾಯ ಮಾಡಲು ಹೆಚ್ಚು ಹೆಚ್ಚು ದೇಣಿಗೆ ನೀಡುವಂತೆ ಶಾಹೀನ್ ಶಾ ಆಫ್ರಿದಿ ಎಲ್ಲಾ ಜನರಲ್ಲಿ ಮನವಿ ಮಾಡಿದ್ದಾರೆ. ಅದೇ ಸಮಯದಲ್ಲಿ, ನಸೀಮ್ ಶಾ ಸಹ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ಶಹನವಾಜ್ ದಹಾನಿ ಮತ್ತು ಶೋಯೆಬ್ ಅಖ್ತರ್ ಕೂಡ ಪಾಕಿಸ್ತಾನದ ಪ್ರವಾಹ ಸಂತ್ರಸ್ತರ ನೆರವಿಗಾಗಿ ಧ್ವನಿ ಎತ್ತಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಜನರಿಗಾಗಿ ಶಾಹಿದ್ ಅಫ್ರಿದಿ ಅವರ ಪ್ರತಿಷ್ಠಾನದ ಕಾರ್ಯವನ್ನು ಶೋಯೆಬ್ ಅಖ್ತರ್ ಶ್ಲಾಘಿಸಿದ್ದಾರೆ.

Published On - 5:03 pm, Sun, 28 August 22

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ