AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಈ ಸಲ ಪಾಕಿಸ್ತಾನ್ ಫ್ಯಾನ್ಸ್ ಟಿವಿ ಒಡೆಯಲ್ಲ, ಏಕೆಂದರೆ…

India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಕದನಕ್ಕೆ ಕೌಂಟ್ ಡೌನ್ ಶುರುವಾಗಿದೆ. ನಾಳೆ (ಫೆ.23) ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋತರೂ ಅಭಿಮಾನಿಗಳು ಈ ಬಾರಿ ಟಿವಿ ಮೇಲೆ ತಮ್ಮ ಆಕ್ರೋಶ ತೀರಿಸಲ್ಲ ಎಂದಿದ್ದಾರೆ ಪಾಕ್ ತಂಡದ ಮಾಜಿ ಆಟಗಾರ ಬಾಸಿತ್ ಅಲಿ.

IND vs PAK: ಈ ಸಲ ಪಾಕಿಸ್ತಾನ್ ಫ್ಯಾನ್ಸ್  ಟಿವಿ ಒಡೆಯಲ್ಲ, ಏಕೆಂದರೆ...
Ind Vs Pak
ಝಾಹಿರ್ ಯೂಸುಫ್
|

Updated on:Feb 22, 2025 | 11:57 AM

Share

ಇಂಡೊ ಮತ್ತು ಪಾಕ್ ನಡುವಣ ಕ್ರಿಕೆಟ್ ಪಂದ್ಯ ಮುಗಿದರೆ, ಇತ್ತ ಭಾರತದಲ್ಲಿ ಸಂಭ್ರಮ ಮನೆ ಮಾಡಿದರೆ ಅತ್ತ ಪಾಕಿಸ್ತಾನದಲ್ಲಿ ಅಭಿಮಾನಿಗಳ ಪಿತ್ತ ನೆತ್ತಿಗೇರಿರುತ್ತದೆ. ಹೀಗೆ ಪ್ರತಿ ಬಾರಿಯೂ ನಿರಾಸೆಗೊಳ್ಳುವ ಪಾಕ್ ಅಭಿಮಾನಿಗಳು ಮಾಡುವ ಮೊದಲ ಕೆಲಸವೆಂದರೆ ಟಿವಿಯನ್ನು ಒಡೆದು ಹಾಕುವುದು. ಹೀಗೆ ಟಿವಿ ಒಡೆದು ಕೋಪ ನೀಗಿಸಿಕೊಳ್ಳುವ ಪ್ರವೃತ್ತಿ ಹೊಂದಿರುವ ಪಾಕಿಸ್ತಾನ್ ಅಭಿಮಾನಿಗಳು ಈ ಬಾರಿ ಟಿವಿ ಒಡೆಯಲ್ಲ. ಹೀಗಂದಿದ್ದು ಮತ್ಯಾರೂ ಅಲ್ಲ, ಪಾಕಿಸ್ತಾನ್ ತಂಡದ ಮಾಜಿ ಆಟಗಾರ ಬಾಸಿತ್ ಅಲಿ.

ಫೆಬ್ರವರಿ 23 ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವುದು ಬಹುತೇಕ ಖಚಿತ. ಇದಾಗ್ಯೂ ಈ ಬಾರಿ ಪಾಕಿಸ್ತಾನ್ ಸೋತರೆ, ಪಾಕ್ ಅಭಿಮಾನಿಗಳು ತಮ್ಮ ಆಕ್ರೋಶವನ್ನು ಟಿವಿ ಮೇಲೆ ತೀರಿಸಲ್ಲ ಎಂದು ಬಾಸಿತ್ ಅಲಿ ಹೇಳಿದ್ದಾರೆ.

ಇದಕ್ಕೆ ಮುಖ್ಯ ಕಾರಣ ಪಾಕಿಸ್ತಾನದಲ್ಲಿನ ಆರ್ಥಿಕ ಪರಿಸ್ಥಿತಿ. ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ಏಕಪಕ್ಷೀಯವಾಗಿ ಮುಗಿದರೂ, ಪಾಕ್ ಅಭಿಮಾನಿಗಳು ಟಿವಿ ಒಡೆಯುವಂತಹ ಸಾಹಸಕ್ಕೆ ಕೈ ಹಾಕಲ್ಲ. ಇಲ್ಲಿನ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಜನರು ಪ್ರತಿಯೊಂದಕ್ಕೂ ದುಬಾರಿ ಮೊತ್ತವನ್ನು ಪಾವತಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಈ ಬಾರಿ ಪಾಕ್ ತಂಡ ಸೋತರೂ ಟಿವಿ ಸೆಟ್​​ಗಳು ಒಡೆಯುವಂತಹ ಶಬ್ದ ಕೇಳಿಸಲ್ಲ ಎಂದು ಬಾಸಿತ್ ಅಲಿ ಹೇಳಿದ್ದಾರೆ.

ಇದೇ ವೇಳೆ ಈ ಪಂದ್ಯದಲ್ಲಿ ಭಾರತ ತಂಡವೇ ಗೆಲ್ಲುವ ಫೇವರೇಟ್ ಎಂದಿರುವ ಬಾಸಿತ್ ಅಲಿ, ಪಾಕಿಸ್ತಾನಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಒಂದಾರ್ಥದಲ್ಲಿ ಫೈನಲ್ ಮ್ಯಾಚ್ ಎನ್ನಬಹುದು. ಈ ಪಂದ್ಯದಲ್ಲಿ ಸೋತರೆ ಪಾಕಿಸ್ತಾನ್ ತಂಡದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಅಂತ್ಯವಾಗಲಿದೆ.

ಇಂತಹ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋತರೆ, ಈ ಬಾರಿ ಅಭಿಮಾನಿಗಳು ತಮ್ಮ ದುಬಾರಿ ವಸ್ತುಗಳ ಮೇಲೆ ಕೋಪ ತೋರಿಸಲ್ಲ. ಬದಲಾಗಿ ಮಾತಿನಲ್ಲೇ ವಿಮರ್ಶೆಗಳು ಮುಂದುವರೆಯಲಿದೆ ಎಂದು ಬಾಸಿತ್ ಅಲಿ ಹೇಳಿದ್ದಾರೆ.

ಇದನ್ನೂ ಓದಿ: 5126 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಮೊಹಮ್ಮದ್ ಶಮಿ

ಒಟ್ಟಿನಲ್ಲಿ ದುಬೈನಲ್ಲಿ ನಾಳೆ (ಫೆ.23) ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಇತ್ತ ಭಾರತದಲ್ಲಿ ಗೆಲುವಿನ ಸಂಭ್ರಮದೊಂದಿಗೆ ಪಟಾಕಿ ಹೊಡೆಯಲು ತಯಾರಿಗಳು ಆರಂಭಿಸಿದ್ದರೆ, ಅತ್ತ ಪಾಕಿಸ್ತಾನಿಗಳು ಟಿವಿ ಒಡೆಯುತ್ತಾರಾ ಎಂಬುದೇ ಈಗ ಕುತೂಹಲ.

Published On - 11:54 am, Sat, 22 February 25

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು