AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀನಾಯ ಸೋಲಿನ ಬೆನ್ನಲ್ಲೇ ಪಾಕಿಸ್ತಾನ್ ತಂಡದಿಂದ 7 ಆಟಗಾರರು ಔಟ್..!

England vs Pakistan: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಪಾಕಿಸ್ತಾನf ಕ್ರಿಕೆಟ್ ಮಂಡಳಿ (PCB) ಇಡೀ ತಂಡಕ್ಕೇ ಬಿಗ್ ಶಾಕ್ ನೀಡಿದೆ. ಸರಣಿಯ ಮಧ್ಯದಲ್ಲೇ ಅರ್ಧ ತಂಡಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಕಳಪೆ ಪ್ರದರ್ಶನ ನೀಡಿದ 7 ಪ್ರಮುಖ ಆಟಗಾರರನ್ನು ತಂಡದಿಂದ ಗೇಟ್‌ಪಾಸ್ ನೀಡಿ ಮನೆಗೆ ಕಳುಹಿಸಲಾಗಿದೆ. 

ಹೀನಾಯ ಸೋಲಿನ ಬೆನ್ನಲ್ಲೇ ಪಾಕಿಸ್ತಾನ್ ತಂಡದಿಂದ 7 ಆಟಗಾರರು ಔಟ್..!
Pakistan Image Credit source: PCB
ಝಾಹಿರ್ ಯೂಸುಫ್
|

Updated on:Sep 01, 2026 | 7:33 AM

Share

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಪಾಕ್ ತಂಡಕ್ಕೆ ಮೇಜರ್ ಸರ್ಜರಿ ಮಾಡಿದೆ. ಈ ಕಠಿಣ ಕ್ರಮದ ಭಾಗವಾಗಿ ತಂಡದ ಏಳು ಪ್ರಮುಖ ಆಟಗಾರರನ್ನು ಕೈಬಿಡಲಾಗಿದ್ದು, ಮುಖ್ಯ ತರಬೇತುದಾರ ಸೇರಿದಂತೆ ಇಡೀ ಕೋಚಿಂಗ್ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ.

ಹೆಡಿಂಗ್ಲೆಯಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಇನ್ನಿಂಗ್ಸ್ ಮತ್ತು 103 ರನ್‌ಗಳ ಭಾರಿ ಸೋಲು ಹಾಗೂ ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ 194 ರನ್‌ಗಳ ಹೀನಾಯ ಸೋಲಿನ ಬೆನ್ನಲ್ಲೇ ಪಿಸಿಬಿ ಈ ಕಠಿಣ ಕ್ರಮ ಕೈಗೊಂಡಿದೆ. ಇದರಿಂದಾಗಿ ಮೂರನೇ ಪಂದ್ಯಕ್ಕೂ ಮುನ್ನ ಪಾಕ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ.

ಹೊರಬಿದ್ದ ಆಟಗಾರರು ಯಾರೆಲ್ಲಾ?

ಆಗಸ್ಟ್ 31, 2026 ರಂದು ಹೊರಡಿಸಲಾದ ಅಧಿಕೃತ ಆದೇಶದ ಪ್ರಕಾರ, ಕಳಪೆ ಪ್ರದರ್ಶನ ನೀಡಿದ ಆಟಗಾರರನ್ನು ತಕ್ಷಣವೇ ಪ್ರವಾಸದಿಂದ ಮುಕ್ತಗೊಳಿಸಿ ಪಾಕಿಸ್ತಾನಕ್ಕೆ ವಾಪಸ್ ಕಳುಹಿಸಲಾಗಿದೆ. ಅದರಂತೆ ಪಾಕ್ ತಂಡದಿಂದ ಹೊರಬಿದ್ದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

  • ಮೊಹಮ್ಮದ್ ರಿಝ್ವಾನ್
  • ಇಮಾಮ್-ಉಲ್-ಹಕ್
  • ಸಲ್ಮಾನ್ ಅಲಿ ಅಘಾ
  • ಅಲಿ ಉಸ್ಮಾನ್
  • ಅಮೀರ್ ಜಮಾಲ್ಮು
  • ಹಮ್ಮದ್ ಅವೈಸ್ ಜಫರ್
  • ಖುರ್ರಮ್ ಶಹಜಾದ್.

ವಜಾಗೊಂಡ ಕೋಚಿಂಗ್ ಸಿಬ್ಬಂದಿ: ಮುಖ್ಯ ಕೋಚ್ ಸರ್ಫರಾಝ್ ಅಹ್ಮದ್ ಮತ್ತು ಬೌಲಿಂಗ್ ಕೋಚ್ ಉಮರ್ ಗುಲ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

ಹೊಸ ಕೋಚ್ ಯಾರು?

ಸೆಪ್ಟೆಂಬರ್ 9 ರಿಂದ ಎಡ್ಜ್‌ಬಾಸ್ಟನ್‌ನಲ್ಲಿ ಆರಂಭವಾಗಲಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಹೊಸ ಆಡಳಿತ ಮಂಡಳಿ ಮತ್ತು ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಹೊಸ ಕೋಚ್: ಸದ್ಯ ವೈಟ್-ಬಾಲ್ ಕೋಚ್ ಆಗಿರುವ ಮೈಕ್ ಹೆಸನ್ ಅವರಿಗೆ ಟೆಸ್ಟ್ ತಂಡದ ಮುಖ್ಯ ಕೋಚ್ ಜವಾಬ್ದಾರಿಯನ್ನೂ ನೀಡಲಾಗಿದೆ. ಆಸ್ಟ್ರೇಲಿಯಾದ ಮಾಜಿ ವೇಗಿ ಆಶ್ಲೇ ನಾಫ್ಕೆ ನೂತನ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಇನ್ನು ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಆಯ್ಕೆಯಾದ ಹೊಸ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

  • ಸೈಮ್ ಅಯೂಬ್
  • ಅಬ್ದುಲ್ಲಾ ಫಝಲ್
  • ಅರಾಫತ್ ಮಿನ್ಹಾಸ್
  • ಸಾದ್ ಬೇಗ್
  • ಮೊಹಮ್ಮದ್ ಇಮ್ರಾನ್
  • ರಝಾವುಲ್ಲಾ ಖಾನ್
  • ಮೊಹಮ್ಮದ್ ಇಮ್ರಾನ್ ಜೂನಿಯರ್.

ಇದನ್ನೂ ಓದಿ: ಟೀಮ್ ಇಂಡಿಯಾದ ಮುಂದಿನ ಸರಣಿ ಯಾವಾಗ? ಯಾರ ವಿರುದ್ಧ?

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಈಗಾಗಲೇ 0-2 ಅಂತರದಿಂದ ಸೋತಿರುವ ಪಾಕಿಸ್ತಾನ್ ತಂಡಕ್ಕೆ, ಈ ಆಕಸ್ಮಿಕ ಬದಲಾವಣೆಗಳು ಕೊನೆಯ ಪಂದ್ಯದಲ್ಲಿ ಮಾನ ಉಳಿಸಿಕೊಳ್ಳಲು ಸಹಾಯ ಮಾಡುತ್ತವೆಯೇ ಎಂಬುದನ್ನು ಕಾದು ನೋಡಬೇಕಿದೆ.

Published On - 7:31 am, Tue, 1 September 26

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ