AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌಂಡರಿ ತಡೆಯುವ ಯತ್ನದಲ್ಲಿ ಗಾಯಕ್ಕೆ ತುತ್ತಾದ ಪಾಕ್ ವೇಗಿ; ವಿಡಿಯೋ ನೋಡಿ

Asia Cup 2023: ಈ ಪಂದ್ಯದಲ್ಲಿ ಬಾಂಗ್ಲಾ ತಂಡವನ್ನು ಏಕಪಕ್ಷೀಯವಾಗಿ ಮಣಿಸುವಲ್ಲಿ ಪಾಕಿಸ್ತಾನ ಯಶಸ್ವಿಯಾಗಿದೆ. ಆದರೆ ಇದೇ ವೇಳೆ ತಂಡದ ಸ್ಟಾರ್ ಬೌಲರ್​ ಇಂಜುರಿಗೆ ತುತ್ತಾಗಿರುವುದು ಬಾಬರ್ ಪಡೆಯ ನಿದ್ದೆಗೆಡಿಸಿದೆ. ತಂಡದ ಪ್ರಮುಖ ಬೌಲರ್ ನಸೀಮ್ ಶಾ ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಚೆಂಡನ್ನು ತಡೆಯುವ ಯತ್ನದಲ್ಲಿ ಇಂಜುರಿಗೆ ತುತ್ತಾದರು.

ಬೌಂಡರಿ ತಡೆಯುವ ಯತ್ನದಲ್ಲಿ ಗಾಯಕ್ಕೆ ತುತ್ತಾದ ಪಾಕ್ ವೇಗಿ; ವಿಡಿಯೋ ನೋಡಿ
ನಸೀಮ್ ಶಾ
ಪೃಥ್ವಿಶಂಕರ
|

Updated on:Sep 07, 2023 | 7:19 AM

Share

2023ರ ಏಷ್ಯಾಕಪ್‌ನಲ್ಲಿ (Asia Cup 2023) ಸೂಪರ್-4 ಹಂತ ಆರಂಭವಾಗಿದೆ. ಸೂಪರ್-4 ರ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಪಾಕಿಸ್ತಾನ (Bangladesh vs Pakistan) ತಂಡಗಳು ಲಾಹೋರ್‌ನಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬಾಂಗ್ಲಾ ತಂಡವನ್ನು ಏಕಪಕ್ಷೀಯವಾಗಿ ಮಣಿಸುವಲ್ಲಿ ಪಾಕಿಸ್ತಾನ ಯಶಸ್ವಿಯಾಗಿದೆ. ಆದರೆ ಇದೇ ವೇಳೆ ತಂಡದ ಸ್ಟಾರ್ ಬೌಲರ್​ ಇಂಜುರಿಗೆ ತುತ್ತಾಗಿರುವುದು ಬಾಬರ್ ಪಡೆಯ ನಿದ್ದೆಗೆಡಿಸಿದೆ. ತಂಡದ ಪ್ರಮುಖ ಬೌಲರ್ ನಸೀಮ್ ಶಾ (Naseem Shah) ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಚೆಂಡನ್ನು ತಡೆಯುವ ಯತ್ನದಲ್ಲಿ ಇಂಜುರಿಗೆ ತುತ್ತಾದರು. ಇದರ ಪರಿಣಾಮವಾಗಿ ನಸೀಮ್ ಶಾ ತಕ್ಷಣವೇ ಮೈದಾನದಿಂದ ಹೊರಹೋಗಬೇಕಾಯಿತು.

ಸಹಜವಾಗಿಯೇ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಉತ್ತಮ ಆಟ ಪ್ರದರ್ಶಿಸಿತು. ಹೀಗಾಗಿ ನಸೀಮ್ ಶಾ ಅಲಭ್ಯತೆ ತಂಡವನ್ನು ಹೆಚ್ಚು ಚಿಂತೆಗೀಡು ಮಾಡಲಿಲ್ಲ. ಆದರೆ ಒಂದು ವೇಳೆ ಅವರ ಗಾಯವು ಗಂಭೀರವಾದರೆ ಮಾತ್ರ ಪಾಕ್ ತಂಡಕ್ಕೆ ಸಮಸ್ಯೆ ಹೆಚ್ಚಾಗಲಿದೆ. ಏಕೆಂದರೆ ಏಷ್ಯಾಕಪ್‌ನಲ್ಲಿ ಫೈನಲ್‌ಗೆ ತಲುಪುವ ನಿಜವಾದ ಓಟ ಈಗಷ್ಟೇ ಆರಂಭವಾಗಿದೆ. ಎರಡನೆಯದಾಗಿ, ಪಾಕಿಸ್ತಾನವು ತನ್ನ ಮುಂದಿನ ಪಂದ್ಯವನ್ನು ಭಾರತದೊಂದಿಗೆ ಆಡಬೇಕಾಗಿದೆ. ಈ ಸಂದರ್ಭದಲ್ಲಿ, ನಸೀಮ್‌ ಇಂಜುರಿಗೆ ತುತ್ತಾಗಿರುವುದು ಮೆನ್ ಇನ್ ಗ್ರೀನ್‌ ತಂಡವನ್ನು ಸಂಕಷ್ಟಕ್ಕೀಡು ಮಾಡಲಿದೆ.

Virat Kohli: ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡುವುದೇ ನನ್ನ ಗುರಿ: ನಸೀಮ್ ಶಾ

7ನೇ ಓವರ್‌ನಲ್ಲಿ ನಸೀಮ್​ಗೆ ಗಾಯ

ಬಾಂಗ್ಲಾದೇಶದ ಇನಿಂಗ್ಸ್‌ನ 7ನೇ ಓವರ್‌ನಲ್ಲಿ ನಸೀಮ್ ಶಾ ಗಾಯಗೊಂಡ ಘಟನೆ ನಡೆಯಿತು. ಈ ಓವರ್‌ನ ಎರಡನೇ ಎಸೆತದಲ್ಲಿ ಚೆಂಡನ್ನು ಬೌಂಡರಿಗೆ ಹೋಗದಂತೆ ತಡೆಯುವ ಯತ್ನದಲ್ಲಿ ನಸೀಮ್ ಇಂಜುರಿಗೊಂಡರು. ಇದರಿಂದ ಅವರ ಹೊಟ್ಟೆ ಹಾಗೂ ಭುಜಕ್ಕೆ ಪೆಟ್ಟು ಬಿದ್ದಿತ್ತು. ಆದರೆ ಅದೃಷ್ಟವಶಾತ್ ಅವರ ಗಾಯ ಅಷ್ಟಾಗಿ ಗಂಭೀರವಾಗಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿತ್ತು.

ನಸೀಮ್ ಶಾ ಬದಲಿಗೆ ಮೊಹಮ್ಮದ್ ಹ್ಯಾರಿಸ್ ಮೈದಾನಕ್ಕೆ

ಚೆಂಡನ್ನು ತಡೆಯುವ ಯತ್ನದಲ್ಲಿ ಇಂಜುರಿಗೊಂಡು ಮೈದಾನದಲ್ಲಿ ನರಳಾಡುತ್ತಿದ್ದ ನಸೀಮ್​ರನ್ನು ನೋಡಿದ ಫಿಸಿಯೊ ಕೂಡಲೇ ಮೈದಾನಕ್ಕೆ ಬಂದು ನಸೀಮ್ ಅವರನ್ನು ಮೈದಾನದಿಂದ ಹೊರಗೆ ಕರೆದೊಯ್ದರು. ಇದೇ ವೇಳೆ ಅವರ ಸ್ಥಾನದಲ್ಲಿ ಮೊಹಮ್ಮದ್ ಹ್ಯಾರಿಸ್ ಕಣಕ್ಕಿಳಿದರು. ಆದರೆ, ಸ್ವಲ್ಪ ಸಮಯದ ನಂತರ ನಸೀಮ್ ಶಾ ಮತ್ತೆ ಮೈದಾನಕ್ಕೆ ಮರಳಿದರು.

ಬಾಂಗ್ಲಾ ವಿರುದ್ಧ ಮೊದಲ ಎಸೆತದಲ್ಲೇ ವಿಕೆಟ್

ಗಾಯಗೊಳ್ಳುವ ಮುನ್ನ ನಸೀಮ್ ಶಾ ಅದ್ಭುತ ಬೌಲಿಂಗ್ ಮಾಡಿದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅವರು ತಮ್ಮ ಮೊದಲ ಎಸೆತದಲ್ಲಿ ವಿಕೆಟ್ ಪಡೆದರು. ಮೆಹದಿ ಹಸನ್ ಅವರನ್ನು ವಜಾಗೊಳಿಸಿದ ನಸೀಮ್ ಶಾ ಗಾಯಕ್ಕೂ ಮುನ್ನ 3 ಓವರ್ ಬೌಲ್ ಮಾಡಿ 22 ರನ್ ನೀಡಿ 1 ವಿಕೆಟ್ ಪಡೆದರು. ಅಂತಿಮವಾಗಿ ತಮ್ಮ ಖೋಟಾದ 6 ಓವರ್​ ಬೌಲ್ ಮಾಡಿದ ನಸೀಮ್ ಇದರಲ್ಲಿ 34 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:17 am, Thu, 7 September 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು