AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC World Cup 2023: ವಿಶ್ವಕಪ್​ನಲ್ಲಿ ಆಡಲು ಪಾಕಿಸ್ತಾನ್ ಹಿಂದೇಟು? ಸಮಿತಿ ರಚಿಸಿದ ಪಾಕ್ ಪ್ರಧಾನಿ

ICC World Cup 2023: ಪಾಕಿಸ್ತಾನ್ ತಂಡದ ಪಂದ್ಯಗಳಿಗೆ ಹೈದರಾಬಾದ್, ಚೆನ್ನೈ, ಬೆಂಗಳೂರು ಮತ್ತು ಕೋಲ್ಕತ್ತಾದ ಮೈದಾನಗಳು ಆತಿಥ್ಯವಹಿಸಲಿದೆ.

ICC World Cup 2023: ವಿಶ್ವಕಪ್​ನಲ್ಲಿ ಆಡಲು ಪಾಕಿಸ್ತಾನ್ ಹಿಂದೇಟು? ಸಮಿತಿ ರಚಿಸಿದ ಪಾಕ್ ಪ್ರಧಾನಿ
Pakistan Team
TV9 Web
| Edited By: |

Updated on: Jul 08, 2023 | 10:54 PM

Share

ICC World Cup 2023: ಭಾರತದಲ್ಲಿ ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಭಾಗವಹಿಸುವುದಿಲ್ಲವಾ? ಈ ಪ್ರಶ್ನೆಗೆ ಇದುವರೆಗೆ ಪಾಕ್ ಕ್ರಿಕೆಟ್ ಮಂಡಳಿ ಐಸಿಸಿಗೆ ಉತ್ತರ ನೀಡಿಲ್ಲ. ಇದರ ನಡುವೆ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಭಾಗವಹಿಸುವಿಕೆಯನ್ನು ಖಚಿತ ಪಡಿಸಲು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ನೇತೃತ್ವದ ಸಮಿತಿಯನ್ನು ಪಾಕ್ ಪ್ರಧಾನಿ ಶಹಬಾಜ್ ಷರೀಫ್ ರಚಿಸಿದ್ದಾರೆ.

ಉಭಯ ದೇಶಗಳ ನಡುವಿನ ಸಂಬಂಧದಿಂದ ಹಿಡಿದು ಕ್ರೀಡೆಯನ್ನು ರಾಜಕೀಯದಿಂದ ದೂರವಿಡುವ ಮಹತ್ವದವರೆಗಿನ ಎಲ್ಲಾ ಅಂಶಗಳನ್ನು ಸಮಿತಿಯು ಚರ್ಚಿಸಲಿದೆ. ಹಾಗೆಯೇ ಈ ಸಮಿತಿಯ ಸದಸ್ಯರು ಭಾರತಕ್ಕೂ ಆಗಮಿಸಿ ಪರಿಶೀಲಿಸಲಿದೆ ಎಂದು ವರದಿಯಾಗಿದೆ. ಇದಾದ ಬಳಿಕ ಪಾಕ್ ಪ್ರಧಾನಿಗೆ ವರದಿ ಸಲ್ಲಿಸಲಿದ್ದು, ಆ ಬಳಿಕವಷ್ಟೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಈಗಾಗಲೇ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆದರೆ ಪಾಕ್ ತಂಡದ ಭಾಗವಹಿಸುವಿಕೆಯನ್ನು ಇನ್ನೂ ಕೂಡ ದೃಢಪಡಿಸಲಾಗಿಲ್ಲ. ಅಲ್ಲದೆ ಪಾಕಿಸ್ತಾನ್ ತಂಡದ ಪಾಲ್ಗೊಳ್ಳುವಿಕೆಗೆ ಸರ್ಕಾರದ ಅನುಮತಿಯ ಅಗತ್ಯವಿದೆ ಎಂದು ಪಿಸಿಬಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ತಿಳಿಸಿದೆ.

ಇದೀಗ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಕ್ರೀಡಾ ಸಚಿವ ಅಹ್ಸಾನ್ ಮಜಾರಿ, ಮರ್ಯಮ್ ಔರಂಗಜೇಬ್, ಅಸದ್ ಮಹಮೂದ್, ಅಮೀನ್ ಉಲ್ ಹಕ್, ಕಮರ್ ಜಮಾನ್ ಕೈರಾ ಮತ್ತು ಮಾಜಿ ರಾಜತಾಂತ್ರಿಕ ತಾರಿಕ್ ಫಾತ್ಮಿ ಒಳಗೊಂಡ ಸಮಿತಿಯನ್ನು ಪಾಕ್ ಪ್ರಧಾನಿ ಶಹಬಾಜ್ ಷರೀಫ್ ರಚಿಸಿದ್ದಾರೆ.

ಪಾಕ್​ ತಂಡಕ್ಕೆ ನಿಗದಿಯಾಗಿರುವ ಸ್ಥಳಗಳನ್ನು ಪರಿಶೀಲಿಸಲು, ಭದ್ರತಾ ವ್ಯವಸ್ಥೆಗಳ ಮಾಹಿತಿ ಪಡೆಯಲು ನಿಯೋಗವೊಂದನ್ನು ಭಾರತಕ್ಕೆ ಕಳುಹಿಸಲಾಗುತ್ತದೆ. ಇದಾದ ಬಳಿಕ ಅಂತಿಮ ವರದಿಯನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥರೂ ಆಗಿರುವ ಪ್ರಧಾನಿಗೆ ಸಲ್ಲಿಸಲಿದ್ದಾರೆ. ಆ ಬಳಿಕ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಇತ್ತ ಪಾಕಿಸ್ತಾನ್ ತಂಡದ ಪಂದ್ಯಗಳಿಗೆ ಹೈದರಾಬಾದ್, ಚೆನ್ನೈ, ಬೆಂಗಳೂರು ಮತ್ತು ಕೋಲ್ಕತ್ತಾದ ಮೈದಾನಗಳು ಆತಿಥ್ಯವಹಿಸಲಿದೆ. ಅಲ್ಲದೆ ಭಾರತ-ಪಾಕಿಸ್ತಾನ್ ನಡುವಣ ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದು, ಇದಾಗ್ಯೂ ಟೂರ್ನಿಯಲ್ಲಿ ಭಾಗವಹಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭದ್ರತಾ ವ್ಯವಸ್ಥೆಯ ನೆಪಗಳನ್ನು ಹೇಳುತ್ತಿರುವುದು ವಿಪರ್ಯಾಸ.

ಏಷ್ಯಾಕಪ್​ಗೆ ಪ್ರತೀಕಾರ?

ಈ ಬಾರಿಯ ಏಷ್ಯಾಕಪ್ ಅನ್ನು ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಂದಿತ್ತು. ಆದರೆ ಪಾಕ್​ನಲ್ಲಿ ಟೂರ್ನಿ ಆಯೋಜಿಸಿದರೆ ಭಾರತ ತಂಡ ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಅಲ್ಲದೆ ತಟಸ್ಥ ಸ್ಥಳದಲ್ಲಿ ಟೂರ್ನಿ ಆಯೋಜಿಸುವಂತೆ ತಿಳಿಸಿತ್ತು.

ಅಂತಿಮವಾಗಿ ಬಿಸಿಸಿಐ ಡಿಮ್ಯಾಂಡ್​ಗೆ ತಲೆಬಾಗಿದ ಪಾಕ್ ಕ್ರಿಕೆಟ್ ಬೋರ್ಡ್ ಏಷ್ಯಾಕಪ್ ಅನ್ನು ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ಆಯೋಜಿಸಲು ನಿರ್ಧರಿಸಿದೆ. ಅಂದರೆ ಇಲ್ಲಿ ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿದೆ.

ಇದನ್ನೂ ಓದಿ: Zimbabwe: ಝಿಂಬಾಬ್ವೆ ಅಬ್ಬರಕ್ಕೆ ಪಾಕಿಸ್ತಾನ್ ದಾಖಲೆ ಧೂಳೀಪಟ

ಇದೀಗ ಪಾಕಿಸ್ತಾನಕ್ಕೆ ಬರಲು ಹಿಂದೇಟು ಹಾಕಿರುವ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಪಾಕ್ ಕ್ರಿಕೆಟ್ ಬೋರ್ಡ್  ಏಕದಿನ ವಿಶ್ವಕಪ್​ನಲ್ಲಿ ತಮ್ಮ ತಂಡದ ಭಾಗವಹಿಸುವಿಕೆಯನ್ನು ಖಚಿಪಡಿಸಲು ಮೀನಮೇಷ ಎಣಿಸುತ್ತಿದೆ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ