AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ದೇಶದ ಗೌರವದ ಪ್ರಶ್ನೆ; ನ್ಯೂಜಿಲೆಂಡ್ ಪ್ರಧಾನಿಗೆ ಕರೆ ಮಾಡಿ ಅಂಗಲಾಚಿದ ಇಮ್ರಾನ್ ಖಾನ್! ಆದರೂ ಒಪ್ಪದ ಕಿವಿ ತಂಡ

ನ್ಯೂಜಿಲ್ಯಾಂಡ್ ಪ್ರಧಾನ ಮಂತ್ರಿಗೆ ಕರೆ ಮಾಡಿದ್ದ ಇಮ್ರಾನ್ ಖಾನ್, ನಿಮ್ಮ ನಿರ್ಧಾರ ದೇಶದ ಗೌರವವನ್ನು ಕುಂಠಿತಗೊಳಿಸಿದೆ. ವಾಪಸ್ ಹೋಗುಬೇಡಿ ಎಂದು ಕೇಳಿಕೊಂಡಿದ್ದಾರೆ.

ಇದು ದೇಶದ ಗೌರವದ ಪ್ರಶ್ನೆ; ನ್ಯೂಜಿಲೆಂಡ್ ಪ್ರಧಾನಿಗೆ ಕರೆ ಮಾಡಿ ಅಂಗಲಾಚಿದ ಇಮ್ರಾನ್ ಖಾನ್! ಆದರೂ ಒಪ್ಪದ ಕಿವಿ ತಂಡ
ಇಮ್ರಾನ್ ಖಾನ್, ನ್ಯೂಜಿಲೆಂಡ್ ತಂಡ
TV9 Web
| Edited By: |

Updated on: Sep 17, 2021 | 6:05 PM

Share

ನ್ಯೂಜಿಲೆಂಡ್ ಕ್ರಿಕೆಟ್ ತಂಡ ತನ್ನ ಪಾಕಿಸ್ತಾನ ಪ್ರವಾಸವನ್ನು ರದ್ದುಗೊಳಿಸಿದೆ. ನ್ಯೂಜಿಲ್ಯಾಂಡ್ ಕ್ರಿಕೆಟ್ (NZC) ಹೇಳಿಕೆಯನ್ನು ನೀಡುವ ಮೂಲಕ ಈ ಮಾಹಿತಿಯನ್ನು ನೀಡಿದೆ. ರಾವಲ್ಪಿಂಡಿಯಲ್ಲಿ ನಡೆದ ಗಲಾಟೆಯಿಂದಾಗಿ ಪಂದ್ಯದ ಆರಂಭವು ವಿಳಂಬವಾಯಿತು. ಜೊತೆಗೆ ಇದರಿಂದ ಆಟಗಾರರನ್ನು ತಮ್ಮ ಕೋಣೆಗಳಲ್ಲಿ ಉಳಿಯುವಂತೆ ಹೇಳಲಾಯಿತು. ಈ ಅಪಾಯಕಾರಿ ಸನ್ನಿವೇಶ ಮನಗಂಡ ನ್ಯೂಜಿಲೆಂಡ್ ಈ ಪ್ರವಾಸವನ್ನು ರದ್ದು ಮಾಡಿದೆ. ಭದ್ರತಾ ಕಾರಣಗಳಿಂದಾಗಿ ಈ ಪ್ರವಾಸವನ್ನು ರದ್ದುಗೊಳಿಸಲಾಗಿದೆ ಎಂದು ನ್ಯೂಜಿಲೆಂಡ್ ಹೇಳಿದೆ. ಈ ಘಟನೆಯಿಂದ ಆಘಾತಕ್ಕೊಳಗಾಗಿರುವ ದೇಶದ ಪ್ರಧಾನಿ, ಇಮ್ರಾನ್ ಖಾನ್ ಕೂಡ ಅವರನ್ನು ತಡೆಯಲು ಪ್ರಯತ್ನಿಸಿದರು. ನ್ಯೂಜಿಲ್ಯಾಂಡ್ ಪ್ರಧಾನ ಮಂತ್ರಿಗೆ ಕರೆ ಮಾಡಿದ್ದ ಇಮ್ರಾನ್ ಖಾನ್, ನಿಮ್ಮ ನಿರ್ಧಾರ ದೇಶದ ಗೌರವವನ್ನು ಕುಂಠಿತಗೊಳಿಸಿದೆ. ವಾಪಸ್ ಹೋಗುಬೇಡಿ ಎಂದು ಕೇಳಿಕೊಂಡಿದ್ದಾರೆ.

ಪಾಕಿಸ್ತಾನಕ್ಕೆ ಬಂದ ನ್ಯೂಜಿಲ್ಯಾಂಡ್ ತಂಡವನ್ನು ಪ್ರೀತಿಯಿಂದ ಸ್ವಾಗತಿಸಲಾಯಿತು. ಕಿವಿ ತಂಡದ ಆಟಗಾರರು ಕೂಡ ಪಾಕ್ ತಂಡವನ್ನು ಸಾಕಷ್ಟು ಹೊಗಳಿದರು. ಆದರೆ, ಪಂದ್ಯ ಆರಂಭಕ್ಕೂ ಮುನ್ನ ಪಾಕಿಸ್ತಾನದೊಳಗಿನ ನೈಜ ಮುಖ ಮುನ್ನೆಲೆಗೆ ಬಂದಿತು. ಇದನ್ನು ನೋಡಿದ ನ್ಯೂಜಿಲ್ಯಾಂಡ್ ತಂಡವು ಗಾಬರಿಗೊಂಡು ಕೂಡಲೇ ಪಾಕ್​ ನೆಲದಿಂದ ಕಾಲ್ಕಿಳಲು ಆರಂಭಿಸಿದೆ.

ನ್ಯೂಜಿಲ್ಯಾಂಡ್ ಪ್ರಧಾನಿಗೆ ಕರೆ ಮಾಡಿದ ಪಾಕ್ ಪ್ರಧಾನಿ ಅಂದಹಾಗೆ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನ್ಯೂಜಿಲ್ಯಾಂಡ್ ಪ್ರಧಾನಿಯೊಂದಿಗೆ ಫೋನಿನಲ್ಲಿ ಮಾತನಾಡಿ ತನ್ನ ಭದ್ರತಾ ವ್ಯವಸ್ಥೆಯನ್ನು ವಿಶ್ವದ ಅತ್ಯುತ್ತಮ ಎಂದು ಹೇಳಿದರು. ಜೊತೆಗೆ ಕಿವಿ ತಂಡಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂಬುದನ್ನು ಮನವರಿಕೆ ಮಾಡಿಕೊಟ್ಟರು. ಆದರೆ, ಪಾಕ್​ ಪ್ರಧಾನಿಯ ಮಾತಿಗೆ ಸೊಪ್ಪು ಹಾಕದ ನ್ಯೂಜಿಲೆಂಡ್ ಕೂಡಲೇ ಆಟಗಾರರನ್ನು ಪಾಕಿಸ್ತಾನದಿಂದ ಹೊರಟು ಬರುವಂತೆ ಆದೇಶ ಹೊರಡಿಸಿದೆ.

ಪಾಕ್ ಕ್ರಿಕೆಟ್ ಕೊಂದ ನ್ಯೂಜಿಲ್ಯಾಂಡ್- ಶೋಯಿಬ್ ಅಖ್ತರ್ ಪಾಕಿಸ್ತಾನ ಕ್ರಿಕೆಟ್‌ಗೆ ನ್ಯೂಜಿಲೆಂಡ್ ನೀಡಿದ ಆಘಾತದಿಂದ ಅನುಭವಿ ಕ್ರಿಕೆಟಿಗರಿಗೂ ನೋವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಶೋಯೆಬ್ ಅಖ್ತರ್, ನ್ಯೂಜಿಲೆಂಡ್​ನ ಈ ನಿರ್ಧಾರ ಪಾಕಿಸ್ತಾನದಲ್ಲಿ ಕ್ರಿಕೆಟ್ ಭವಿಷ್ಯದ ಬಗ್ಗೆ ದುಃಖದ ಸುದ್ದಿ ಎಂದರು. ನಂತರ ಅವರ ಎರಡನೇ ಟ್ವೀಟ್ ಮೂಲಕ ನ್ಯೂಜಿಲ್ಯಾಂಡ್ ಪಾಕಿಸ್ತಾನದಲ್ಲಿ ಮತ್ತೆ ಕ್ರಿಕೆಟ್ ಅನ್ನು ಕೊಂದಿದೆ ಎಂದು ಬರೆದುಕೊಂಡಿದ್ದಾರೆ.

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ