6.4 ಓವರ್​ಗಳಲ್ಲಿ ವಿಶ್ವಕಪ್​ನಿಂದ ಹೊರಬಿದ್ದ ಪಾಕಿಸ್ತಾನ್..!

Pakistan vs England: ಬೆನ್ ಸ್ಟೋಕ್ಸ್​, ಜೋ ರೂಟ್ ಹಾಗೂ ಜಾನಿ ಬೈರ್​ಸ್ಟೋವ್ ಬಾರಿಸಿದ ಅರ್ಧಶತಕಗಳೊಂದಿಗೆ ಇಂಗ್ಲೆಂಡ್ ತಂಡವು ನಿಗದಿತ 50 ಓವರ್​ಗಳಲ್ಲಿ 337 ರನ್​ ಕಲೆಹಾಕಿತು. ಈ ಬೃಹತ್ ಗುರಿಯನ್ನು ಕೇವಲ 6.2 ಓವರ್​ಗಳಲ್ಲಿ ಚೇಸ್ ಮಾಡಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶವಿತ್ತು.

6.4 ಓವರ್​ಗಳಲ್ಲಿ ವಿಶ್ವಕಪ್​ನಿಂದ ಹೊರಬಿದ್ದ ಪಾಕಿಸ್ತಾನ್..!
Pakistan
Follow us
| Updated By: ಝಾಹಿರ್ ಯೂಸುಫ್

Updated on:Nov 11, 2023 | 7:01 PM

ಏಕದಿನ ವಿಶ್ವಕಪ್ 2023 ರಿಂದ ಪಾಕಿಸ್ತಾನ್ ತಂಡ ಅಧಿಕೃತವಾಗಿ ಹೊರಬಿದ್ದಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯುತ್ತಿರುವ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್​ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಬೆನ್ ಸ್ಟೋಕ್ಸ್​ (84), ಜೋ ರೂಟ್ (60) ಹಾಗೂ ಜಾನಿ ಬೈರ್​ಸ್ಟೋವ್ (59) ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು.

ಈ ಅರ್ಧಶತಕಗಳೊಂದಿಗೆ ಇಂಗ್ಲೆಂಡ್ ತಂಡವು ನಿಗದಿತ 50 ಓವರ್​ಗಳಲ್ಲಿ 337 ರನ್​ ಕಲೆಹಾಕಿತು. ಈ ಬೃಹತ್ ಗುರಿಯನ್ನು ಕೇವಲ 6.4 ಓವರ್​ಗಳಲ್ಲಿ ಚೇಸ್ ಮಾಡಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶವಿತ್ತು.

ಅಂದರೆ ಇಲ್ಲಿ ನ್ಯೂಝಿಲೆಂಡ್ ತಂಡದ ನೆಟ್​ ರನ್​ ರೇಟ್​ ಅನ್ನು ಹಿಂದಿಕ್ಕಿದರೆ ಮಾತ್ರ ಪಾಕ್ ತಂಡಕ್ಕೆ ಸೆಮಿಫೈನಲ್​ಗೇರಬಹುದಿತ್ತು. ಹೀಗೆ ನೆಟ್​ ರನ್​ ರೇಟ್ ಹಿಂದಿಕ್ಕಲು ಪಾಕ್ ತಂಡವು ಇಂಗ್ಲೆಂಡ್ ನೀಡಿದ 338 ರನ್​ಗಳ ಗುರಿಯನ್ನು ಕೇವಲ 6.4 ಓವರ್​ಗಳಲ್ಲಿ ಚೇಸ್ ಮಾಡಬೇಕಿತ್ತು.

ಆದರೆ 6.4 ಓವರ್​ಗಳಲ್ಲಿ ಪಾಕಿಸ್ತಾನ್ ತಂಡ ಕಲೆಹಾಕಿದ್ದು ಕೇವಲ 30 ರನ್​ಗಳು ಮಾತ್ರ. ಇನ್ನು ಈ ಪಂದ್ಯದಲ್ಲಿ ಪಾಕ್ ತಂಡ ಗೆದ್ದರೂ ನೌಕೌಟ್ ಹಂತಕ್ಕೇರುವುದಿಲ್ಲ. ಇದರೊಂದಿಗೆ ಏಕದಿನ ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡವು ಅಧಿಕೃತವಾಗಿ ಹೊರಬಿದ್ದಂತಾಗಿದೆ.

ಹಾಗೆಯೇ ಏಕದಿನ ವಿಶ್ವಕಪ್​ನ ಸೆಮಿಫೈನಲ್ಸ್​ ಪಂದ್ಯಗಳಲ್ಲಿ ಭಾರತ, ನ್ಯೂಝಿಲೆಂಡ್, ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಕಣಕ್ಕಿಳಿಯಲಿದೆ.

ಇಂಗ್ಲೆಂಡ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಗುಸ್ ಅಟ್ಕಿನ್ಸನ್, ಆದಿಲ್ ರಶೀದ್.

ಇದನ್ನೂ ಓದಿ: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತದ ದಾಖಲೆ ಮುರಿದ ಅಫ್ಘಾನಿಸ್ತಾನ್

ಪಾಕಿಸ್ತಾನ್ (ಪ್ಲೇಯಿಂಗ್ XI): ಅಬ್ದುಲ್ಲಾ ಶಫೀಕ್, ಫಖರ್ ಝಮಾನ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್.

Published On - 6:59 pm, Sat, 11 November 23

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್