AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಸ್ಪೀಡ್ ಇದ್ದರೆ ಸಾಲದು! ಉಮ್ರಾನ್ ಮಲಿಕ್​ ಕಂಡರೆ ಪಾಕ್ ವೇಗಿಗ್ಯಾಕೆ ಇಷ್ಟೊಂದು ಹೊಟ್ಟೆಕಿಚ್ಚು

ಮಲಿಕ್​ರನ್ನು ತೆಗಳುತ್ತಾ ಹೇಳಿಕೆ ನೀಡಿದ ಅಫ್ರಿದಿ, ವೇಗದಿಂದ ಮಾತ್ರ ಏನೂ ಆಗುವುದಿಲ್ಲ ಎಂದರು. "ನೀವು ಲೈನ್ ಅಂಡ್ ಲೆಂಥ್​ ಹೊಂದಿಲ್ಲದಿದ್ದರೆ ವೇಗವು ನಿಮಗೆ ಯಾವುದೇ ಪ್ರಯೋಜನವನ್ನು ನೀಡುವುದಿಲ್ಲ ಎಂದು ಶಾಹೀನ್ ಹೇಳಿದರು.

ಕೇವಲ ಸ್ಪೀಡ್ ಇದ್ದರೆ ಸಾಲದು! ಉಮ್ರಾನ್ ಮಲಿಕ್​ ಕಂಡರೆ ಪಾಕ್ ವೇಗಿಗ್ಯಾಕೆ ಇಷ್ಟೊಂದು ಹೊಟ್ಟೆಕಿಚ್ಚು
ಶಾಹೀನ್ ಅಫ್ರಿದಿ, ಉಮ್ರಾನ್ ಮಲಿಕ್
TV9 Web
| Edited By: |

Updated on: Jun 03, 2022 | 8:10 PM

Share

ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ಐಪಿಎಲ್ 2022 (IPL 2022)ರಲ್ಲಿ ಮುಳುಗಿರಬಹುದು, ಆದರೆ ಈ ಸೀಸನ್​ ಖಂಡಿತವಾಗಿಯೂ ತಂಡದ ವೇಗದ ಬೌಲರ್ ಉಮ್ರಾನ್ ಮಲಿಕ್ (Umran Malik) ಅವರ ಅದೃಷ್ಟವನ್ನು ತಿರುಗಿಸಿದೆ. ಜಮ್ಮುವಿನ ಮೂಲದ ಉಮ್ರಾನ್ ಈ ಸೀಸನ್​ನಲ್ಲಿ ತಮ್ಮದೇ ವೇಗದಿಂದ ಅಪಾರ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಜೊತೆಗೆ ಖ್ಯಾತ ಕ್ರಿಕೆಟಿಗರು ಕೂಡ ಇವರ ವೇಗಕ್ಕೆ ತಲೆಬಾಗಿದ್ದಾರೆ. ಐಪಿಎಲ್ 2022 ರಲ್ಲಿ ಅವರ ಪ್ರದರ್ಶನದ ಆಧಾರದ ಮೇಲೆ, ಈ ಯುವ ಸ್ಟಾರ್ ಅನ್ನು ಟೀಮ್ ಇಂಡಿಯಾಕ್ಕೆ ಆಯ್ಕೆ ಕೂಡ ಮಾಡಲಾಗಿದೆ. ಉಮ್ರಾನ್‌ನ ವೇಗ ಪ್ರಪಂಚದಾದ್ಯಂತ ಚರ್ಚೆಯಾಗುತ್ತಿದೆ. ಆದರೆ, ಪಕ್ಕದ ದೇಶದ ಯುವ ವೇಗದ ಬೌಲರ್ ಶಾಹೀನ್ ಅಫ್ರಿದಿಗ್ಯಾಕೋ (shaheen Afridi) ಉಮ್ರಾನ್ ಖ್ಯಾತಿ ಹೊಟ್ಟೆಕಿಚ್ಚು ಮೂಡಿಸಿದಂತಿದೆ.

ಶಾಹೀನ್ ಅಫ್ರಿದಿ ಪಾಕಿಸ್ತಾನದ ಸ್ಟಾರ್ ಯುವ ಬೌಲರ್

ಪಾಕಿಸ್ತಾನದ ಶಾಹೀನ್ ಅಫ್ರಿದಿ ಕಳೆದ ಕೆಲವು ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅಂಡರ್-19 ವಿಶ್ವಕಪ್ ನಂತರ, ಶಾಹೀನ್‌ಗೆ ನೇರವಾಗಿ ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಅವಕಾಶ ನೀಡಲಾಯಿತು. ಕ್ರಮೇಣ ಅವರು ಎಲ್ಲಾ ಮೂರು ತಂಡಗಳಲ್ಲಿ ಸ್ಥಾನ ಪಡೆದರು. ಇತ್ತೀಚೆಗಷ್ಟೇ ಉಮ್ರಾನ್ ಬಗ್ಗೆ ಕೇಳಿದಾಗ ಅವರು ವಿಭಿನ್ನ ಉತ್ತರ ನೀಡಿದ್ದಾರೆ.

ಇದನ್ನೂ ಓದಿ
Image
IND vs SA: ಹೊಸ ಹೇರ್ ಸ್ಟೈಲ್​ನಲ್ಲಿ ಮಿಂಚಿದ ಚಹಾಲ್; ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಸಖತ್ ವೈರಲ್
Image
IPL 2022: ಈ ಐಪಿಎಲ್​ ನನಗೆ ಸಾಕಷ್ಟು ವಿಶಿಷ್ಟವಾಗಿದ್ದರೂ ಅದೊಂದು ನಿರಾಸೆ ನನ್ನನ್ನು ಕಾಡುತ್ತಿದೆ; ಜೋಸ್ ಬಟ್ಲರ್
Image
Rafael Nadal Birthday: 36 ನೇ ವರ್ಷಕ್ಕೆ ಕಾಲಿಟ್ಟ ನಡಾಲ್; ಕಿಂಗ್ ಆಫ್ ಕ್ಲೇ ಜೀವನದ ಬಗ್ಗೆ ಕೆಲವು ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ

ಇದನ್ನೂ ಓದಿ:ಉಮ್ರಾನ್ ಭಾರತೀಯ ಕ್ರಿಕೆಟ್‌ನ ಅದ್ಭುತ ಆವಿಷ್ಕಾರ! ಮುಂದೊಂದು ದಿನ ಅಖ್ತರ್ ದಾಖಲೆ ಮುರಿಯುತ್ತಾನೆ; ಬ್ರೆಟ್ ಲೀ

ಉಮ್ರಾನ್ ಮಲಿಕ್ ವೇಗಕ್ಕೆ ಶಾಹೀನ್ ಅಫ್ರಿದಿ ಉತ್ತರ

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲು ಸುದ್ದಿಗಾರರೊಂದಿಗೆ ಮಾತನಾಡುವಾಗ ಐಪಿಎಲ್‌ನಲ್ಲಿ ಉಮ್ರಾನ್ ಮಲಿಕ್ ಮತ್ತು ಲಾಕಿ ಫರ್ಗುಸನ್ ಅವರ ವೇಗದ ಬಗ್ಗೆ ಶಾಹೀನ್ ಅಫ್ರಿದಿ ಅವರನ್ನು ಕೇಳಲಾಯಿತು. ಮಲಿಕ್​ರನ್ನು ತೆಗಳುತ್ತಾ ಹೇಳಿಕೆ ನೀಡಿದ ಅಫ್ರಿದಿ, ವೇಗದಿಂದ ಮಾತ್ರ ಏನೂ ಆಗುವುದಿಲ್ಲ ಎಂದರು. “ನೀವು ಲೈನ್ ಅಂಡ್ ಲೆಂಥ್​ ಹೊಂದಿಲ್ಲದಿದ್ದರೆ ವೇಗವು ನಿಮಗೆ ಯಾವುದೇ ಪ್ರಯೋಜನವನ್ನು ನೀಡುವುದಿಲ್ಲ ಎಂದು ಶಾಹೀನ್ ಹೇಳಿದರು. ಮೂರು ಏಕದಿನ ಪಂದ್ಯಗಳ ಈ ಸರಣಿಯು ಜೂನ್ 8 ರಿಂದ ಪ್ರಾರಂಭವಾಗಲಿದ್ದು, ಜೂನ್ 12 ರವರೆಗೆ ನಡೆಯಲಿದೆ ಮತ್ತು ಎಲ್ಲಾ ಪಂದ್ಯಗಳು ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.

ಅನುಭವಿಗಳನ್ನು ಮೆಚ್ಚಿಸಿದ ಉಮ್ರಾನ್ ಮಲಿಕ್

IPL-15 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ಗಾಗಿ ಆಡುತ್ತಿರುವ ಜಮ್ಮು ವೇಗಿ ಉಮ್ರಾನ್ ತಮ್ಮ ವೇಗದಿಂದ ಎಲ್ಲರನ್ನೂ ಆಕರ್ಷಿಸಿದ್ದಾರೆ. ನಿಯಮಿತವಾಗಿ 150 ಕಿಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದಾರೆ. ಪ್ರಸಕ್ತ ಟೂರ್ನಿಯಲ್ಲಿ ಉಮ್ರಾನ್ ಇದುವರೆಗೆ 21 ವಿಕೆಟ್‌ಗಳನ್ನು ಪಡೆದಿದ್ದು, ಈ ಅವಧಿಯಲ್ಲಿ 25 ರನ್‌ಗಳಿಗೆ ಐದು ವಿಕೆಟ್‌ಗಳನ್ನು ಪಡೆದಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಪಂದ್ಯಾವಳಿಯ ಅತ್ಯಂತ ಯಶಸ್ವಿ ಬೌಲರ್‌ಗಳ ಪಟ್ಟಿಯಲ್ಲಿ ಅವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ತನ್ನ ವೇಗದ ಮೂಲಕ ಎಲ್ಲರನ್ನೂ ರೋಮಾಂಚನಗೊಳಿಸಿರುವ ಯುವ ವೇಗಿ ಉಮ್ರಾನ್ ಮಲಿಕ್ ಭಾರತಕ್ಕೆ ಅತ್ಯುತ್ತಮ ಬೌಲರ್ ಆಗಲಿದ್ದಾರೆ ಎಂದು ಶ್ರೀಲಂಕಾದ ಮಾಜಿ ವೇಗಿ ಚಮಿಂದಾ ವಾಸ್ ಹೇಳಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ