AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಮಗುವಲ್ಲ’; ತನ್ನ ವಿರುದ್ಧ ಪಿತೂರಿ ಮಾಡಿದ ಸಹ ಆಟಗಾರರ ವಿರುದ್ಧ ಮುನಿದ ಬಾಬರ್..!

Babar Azam: ತಂಡದ ಕಳಪೆ ಪ್ರದರ್ಶನದ ಬಗ್ಗೆ ಮಾಜಿ ಆಟಗಾರರು ಅಸಮಾಧಾನ ಹೊರಹಾಕಿದ್ದರು. ಆ ಬಳಿಕ ತಂಡದ ಮುಖ್ಯ ಕೋಚ್ ಗ್ಯಾರಿ ಕರ್ಸ್ಟನ್ ಪಾಕಿಸ್ತಾನಿ ತಂಡವನ್ನು ಟೀಕಿಸಿದ್ದರು. ಇದೇ ವೇಳೆ ತಂಡದೊಳಗಿರುವ ಒಡಕಿನ ಬಗ್ಗೆ ಮಾತನಾಡಿದ್ದರು. ಇದೆಲ್ಲದರ ಹೊರತಾಗಿ ಇದೀಗ ತಂಡದ ನಾಯಕ ಬಾಬರ್ ಆಝಂ ಅವರೇ ತನ್ನ ವಿರುದ್ಧ ಪಿತೂರಿ ನಡೆಸಿದ್ದ ಆಟಗಾರರ ಮೇಲೆ ಹರಿಹಾಯ್ದಿದ್ದಾರೆ ಎಂದು ವರದಿಯಾಗಿದೆ.

‘ನಾನು ಮಗುವಲ್ಲ’; ತನ್ನ ವಿರುದ್ಧ ಪಿತೂರಿ ಮಾಡಿದ ಸಹ ಆಟಗಾರರ ವಿರುದ್ಧ ಮುನಿದ ಬಾಬರ್..!
ಬಾಬರ್ ಆಝಂ
ಪೃಥ್ವಿಶಂಕರ
|

Updated on:Jun 21, 2024 | 7:56 PM

Share

ಟಿ20 ವಿಶ್ವಕಪ್ (T20 World Cup 2024) ಗ್ರೂಪ್ ಹಂತದಲ್ಲಿ ಪಾಕಿಸ್ತಾನ ತಂಡದ (Pakistan Team) ಪಯಣ ಅಂತ್ಯಗೊಂಡಿದೆ. 2022 ರಲ್ಲಿ ಫೈನಲ್ ಆಡಿದ್ದ ಬಾಬರ್ ಪಡೆಗೆ ಈ ಬಾರಿ ಸೂಪರ್ -8 ತಲುಪಲು ಸಾಧ್ಯವಾಗಲಿಲ್ಲ. ಮೊದಲು ಅಮೆರಿಕ ವಿರುದ್ಧ ಮಣಿದಿದ್ದ ಪಾಕ್ ತಂಡ ಆ ಬಳಿಕ ಭಾರತದ ವಿರುದ್ಧ ಸೋತು ಸಾಕಷ್ಟು ಅವಮಾನಕ್ಕೊಳಗಾಯಿತು. ಆ ನಂತರ ಟೂರ್ನಿಯಿಂದಲೇ ಹೊರಬಿದ್ದಿತ್ತು. ಇದೀಗ ತಂಡದೊಳಗೆ ವಿವಾದಗಳ ಸರಣಿ ಶುರುವಾಗಿದೆ. ಮೊದಲು ತಂಡದ ಕಳಪೆ ಪ್ರದರ್ಶನದ ಬಗ್ಗೆ ಮಾಜಿ ಆಟಗಾರರು ಅಸಮಾಧಾನ ಹೊರಹಾಕಿದ್ದರು. ಆ ಬಳಿಕ ತಂಡದ ಮುಖ್ಯ ಕೋಚ್ ಗ್ಯಾರಿ ಕರ್ಸ್ಟನ್ ಪಾಕಿಸ್ತಾನಿ ತಂಡವನ್ನು ಟೀಕಿಸಿದ್ದರು. ಇದೇ ವೇಳೆ ತಂಡದೊಳಗಿರುವ ಒಡಕಿನ ಬಗ್ಗೆ ಮಾತನಾಡಿದ್ದರು. ಇದೆಲ್ಲದರ ಹೊರತಾಗಿ ಇದೀಗ ತಂಡದ ನಾಯಕ ಬಾಬರ್ ಆಝಂ (Babar Azam) ಅವರೇ ತನ್ನ ವಿರುದ್ಧ ಪಿತೂರಿ ನಡೆಸಿದ್ದ ಆಟಗಾರರ ಮೇಲೆ ಹರಿಹಾಯ್ದಿದ್ದಾರೆ ಎಂದು ವರದಿಯಾಗಿದೆ.

ನಾನು ಮಗುವಲ್ಲ; ಬಾಬರ್

ಪಾಕ್ ಟಿವಿ ಚಾನೆಲ್‌ನ ವರದಿ ಪ್ರಕಾರ, ಟಿ20 ವಿಶ್ವಕಪ್‌ನ ಪಾಕ್ ತಂಡದ ಕೊನೆಯ ಪಂದ್ಯದ ನಂತರ ತಂಡದ ಸಭೆ ನಡೆದಿದೆ. ಈ ಸಭೆಯಲ್ಲಿ ಭಾಗಿಯಾಗಿದ್ದ ಆಯ್ಕೆಗಾರ ವಹಾಬ್ ರಿಯಾಜ್, ಕೋಚ್ ಗ್ಯಾರಿ ಕರ್ಸ್ಟನ್ ಮತ್ತು ನಾಯಕ ಬಾಬರ್ ಆಝಂ ತಂಡದ ಪ್ರದರ್ಶನದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಈ ವೇಳೆ ಮುಖ್ಯ ಕೋಚ್ ಗ್ಯಾರಿ ಕರ್ಸ್ಟನ್ ತಂಡದಲ್ಲಿರುವ ಒಡಕ್ಕಿನ ಬಗ್ಗೆ ಮಾತನಾಡಿದ್ದರು. ಈ ಸಭೆ ಮುಗಿದ ನಂತರ, ತಂಡದ ಆಟಗಾರರನ್ನು ಭೇಟಿ ಮಾಡಿದ್ದ ಬಾಬರ್, ‘ನಾನು ಮಗುವಲ್ಲ. ನನ್ನ ಹಿಂದೆ ಏನು ನಡೆಯುತ್ತಿದೆ ಎಂಬುದರ ಬಗ್ಗೆ ನನಗೆ ಅರಿವಿದೆ ಎಂದು ಹೇಳಿದ್ದಾರೆ ಎಂದು ವರದಿ ಮಾಡಿದ್ದಾರೆ.

ಬಾಬರ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ

ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಹೀನಾಯ ಪ್ರದರ್ಶನದ ಬಳಿಕ ಪಾಕಿಸ್ತಾನದ ಯೂಟ್ಯೂಬರ್ ಮುಬಾಶಿರ್ ಲುಕ್ಮಾನ್ ಬಾಬರ್ ವಿರುದ್ಧ ಫಿಕ್ಸಿಂಗ್ ಆರೋಪ ಹೊರಿಸಿದ್ದರು. ಅವರು, ಪಾಕಿಸ್ತಾನದ ನಾಯಕ ಬಾಬರ್ ದುಬೈನಲ್ಲಿ ಫ್ಲಾಟ್ ಮತ್ತು ಅಮೆರಿಕದಲ್ಲಿ ಪ್ಲಾಟ್ ತೆಗೆದುಕೊಂಡಿದ್ದಾರೆ. ಅಲ್ಲದೆ ಬಾಬರ್ ಇತ್ತೀಚೆಗಷ್ಟೇ 8 ಕೋಟಿ ರೂಪಾಯಿ ಮೌಲ್ಯದ ದುಬಾರಿ ಕಾರನ್ನು ಖರೀದಿಸಿದ್ದಾರೆ. ಇದಕ್ಕೆ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ್ದರು. ಆದಾಗ್ಯೂ, ಪಾಕಿಸ್ತಾನಿ ಕ್ರೀಡಾ ಪತ್ರಕರ್ತರು ಈ ಆರೋಪವನ್ನು ಆಧಾರರಹಿತ ಎಂದು ಕರೆದಿದ್ದು, ಪಿಸಿಬಿಯಿಂದ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Fri, 21 June 24

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ