Asia Cup 2022: ಏಷ್ಯಾಕಪ್​ಗೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ್: ಪ್ರಮುಖ ಬೌಲರ್ ಔಟ್..!

Asia Cup 2022: ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿನ ತಂಡಗಳು ಮುಖಾಮುಖಿಯಾಗಲಿದ್ದು, ಇದರಲ್ಲಿ ಅಗ್ರಸ್ಥಾನ ಪಡೆಯುವ 2 ತಂಡಗಳು ಸೂಪರ್-4 ಹಂತದಲ್ಲಿ ಆಡಲಿದೆ. ಅಂದರೆ ಎ ಗ್ರೂಪ್​ನಿಂದ 2 ತಂಡ, ಬಿ ಗ್ರೂಪ್​ನಿಂದ 2 ತಂಡಗಳು ಮುಂದಿನ ಹಂತಕ್ಕೇರಲಿದೆ.

Asia Cup 2022: ಏಷ್ಯಾಕಪ್​ಗೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ್: ಪ್ರಮುಖ ಬೌಲರ್ ಔಟ್..!
Pakistan Squad
Follow us
| Updated By: ಝಾಹಿರ್ ಯೂಸುಫ್

Updated on: Aug 03, 2022 | 1:31 PM

ಆಗಸ್ಟ್ 27 ರಿಂದ ಯುಎಇನಲ್ಲಿ ಶುರುವಾಗಲಿರುವ ಏಷ್ಯಾಕಪ್ (Asia Cup 2022)​ ಟಿ20 ಟೂರ್ನಿಗಾಗಿ ಪಾಕಿಸ್ತಾನ್ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಬಳಗವನ್ನು ಬಾಬರ್ ಆಜಂ ಮುನ್ನಡೆಸಲಿದ್ದಾರೆ. ಇನ್ನು ಕಳೆದ ವರ್ಷ ಟಿ20 ವಿಶ್ವಕಪ್ ಆಡಿದ ಬಹುತೇಕ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಆಸ್ಟ್ರೇಲಿಯಾ ವಿರುದ್ದದ ಸೆಮಿಫೈನಲ್​ನಲ್ಲಿ ಮ್ಯಾಥ್ಯೂ ವೇಡ್ ಕ್ಯಾಚ್ ಕೈಚೆಲ್ಲಿದ ವೇಗಿ ಹಸನ್ ಅಲಿಗೆ ಈ ಬಾರಿ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಅವರ ಬದಲಿಗೆ ಯುವ ವೇಗಿ ನಸೀಮ್ ಶಾ ಅವಕಾಶ ಪಡೆದಿದ್ದಾರೆ. ಹಾಗೆಯೇ ಹಿರಿಯ ಆಟಗಾರರಾದ ಮೊಹಮ್ಮದ್ ಹಫೀಜ್ ಹಾಗೂ ಶೊಯೇಬ್ ಮಲಿಕ್ ಕೂಡ ತಂಡದಿಂದ ಹೊರಬಿದ್ದಿದ್ದಾರೆ.

ಇನ್ನು ಏಷ್ಯಾಕಪ್‌ಗೆ ತಂಡವನ್ನು ಆಯ್ಕೆ ಮಾಡುವುದರ ಜೊತೆಗೆ, ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಗಾಗಿ ಪಾಕಿಸ್ತಾನ  16 ಸದಸ್ಯರ ತಂಡವನ್ನು ಸಹ ಪ್ರಕಟಿಸಿದೆ. ನೆದರ್ಲೆಂಡ್ಸ್ ಮತ್ತು ಪಾಕಿಸ್ತಾನ ನಡುವಿನ ಏಕದಿನ ಸರಣಿಯು ಆಗಸ್ಟ್ 16-21 ರ ನಡುವೆ ನಡೆಯಲಿದೆ. ಏಕದಿನ ತಂಡದಲ್ಲೂ ಯುವ ವೇಗದ ಬೌಲರ್ ನಸೀಮ್ ಶಾಗೆ ಸ್ಥಾನ ನೀಡಲಾಗಿದೆ. ಹಾಗೆಯೇ ಗಾಯದಿಂದ ಚೇತರಿಸಿಕೊಂಡಿರುವ ಶಾಹೀನ್ ಶಾ ಆಫ್ರಿದಿ ಕೂಡ ಉಭಯ ತಂಡಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಏಷ್ಯಾಕಪ್​ನಲ್ಲಿ ಪಾಕಿಸ್ತಾನ್ ತಂಡವು ತನ್ನ ಮೊದಲ ಪಂದ್ಯವನ್ನು ಭಾರತದ ವಿರುದ್ದ ಆಡಲಿದ್ದು, ಈ ಪಂದ್ಯವು ಆಗಸ್ಟ್ 28 ರಂದು ನಡೆಯಲಿದೆ. ಇದೀಗ ಬಲಿಷ್ಠ ಪಡೆಯನ್ನೇ ಆಯ್ಕೆ ಮಾಡುವ ಮೂಲಕ ಪಾಕ್ ತಂಡವು ಭರ್ಜರಿ ಸಿದ್ಧತೆಗೆ ಮುಂದಾಗಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಏಷ್ಯಾಕಪ್​ಗೆ ಪಾಕಿಸ್ತಾನ್ ತಂಡ ಹೀಗಿದೆ:

ಬಾಬರ್ ಆಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್, ವಾಸಿಮ್ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ, ಶಾನವಾಜ್ ದಹಾನಿ ಮತ್ತು ಉಸ್ಮಾನ್ ಖಾದಿರ್.

ನೆದರ್ಲೆಂಡ್ಸ್​​ ವಿರುದ್ದದ ಏಕದಿನ ಸರಣಿಗೆ ಪಾಕ್ ತಂಡ:

ಬಾಬರ್ ಆಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಮಾಮ್-ಉಲ್-ಹಕ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಸಲ್ಮಾನ್ ಅಲಿ ಅಘಾ, ಶಾಹೀನ್ ಶಾ ಆಫ್ರಿದಿ, ಶಾನವಾಜ್ ದಹಾನಿ ಮತ್ತು ಝಾಹಿದ್ ಮೆಹಮೂದ್

ಏಷ್ಯಾ ಕಪ್ ತಂಡಗಳ ಗ್ರೂಪ್​:

  • ಗ್ರೂಪ್ ಎ ತಂಡಗಳು- ಭಾರತ, ಪಾಕಿಸ್ತಾನ, ಕ್ವಾಲಿಫೈಯರ್ ತಂಡ
  • ಗ್ರೂಪ್ ಬಿ ತಂಡಗಳು- ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ

ಸಂಪೂರ್ಣ ವೇಳಾಪಟ್ಟಿ ಹೀಗಿದೆ:

  • ಆಗಸ್ಟ್ 27 – ಶ್ರೀಲಂಕಾ vs ಅಫ್ಘಾನಿಸ್ತಾನ- ದುಬೈ
  • ಆಗಸ್ಟ್ 28 – ಭಾರತ vs ಪಾಕಿಸ್ತಾನ- ದುಬೈ
  • ಆಗಸ್ಟ್ 30 – ಬಾಂಗ್ಲಾದೇಶ vs ಅಫ್ಘಾನಿಸ್ತಾನ- ಶಾರ್ಜಾ
  • ಆಗಸ್ಟ್ 31 – ಭಾರತ vs ಕ್ವಾಲಿಫೈಯರ್ ಟೀಮ್- ದುಬೈ
  • ಸೆಪ್ಟೆಂಬರ್ 1 – ಶ್ರೀಲಂಕಾ vs ಬಾಂಗ್ಲಾದೇಶ- ದುಬೈ
  • ಸೆಪ್ಟೆಂಬರ್ 2- ಪಾಕಿಸ್ತಾನ vs ಕ್ವಾಲಿಫೈಯರ್ ಟೀಮ್- ಶಾರ್ಜಾ

ಸೂಪರ್- 4 ವೇಳಾಪಟ್ಟಿ:

  • ಸೆಪ್ಟೆಂಬರ್ 3 – B1 vs B2 – ಶಾರ್ಜಾ
  • ಸೆಪ್ಟೆಂಬರ್ 4 A1 vs A2 – ದುಬೈ
  • ಸೆಪ್ಟೆಂಬರ್ 6 A1 vs B1 – ದುಬೈ
  • ಸೆಪ್ಟೆಂಬರ್ 7 A2 vs B2 – ದುಬೈ
  • ಸೆಪ್ಟೆಂಬರ್ 8 A1 vs B2 – ದುಬೈ
  • ಸೆಪ್ಟೆಂಬರ್ 9 B1 vs- A2 ದುಬೈ
  • ಸೆಪ್ಟೆಂಬರ್ 11- ಫೈನಲ್ ಪಂದ್ಯ- ದುಬೈ

ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿನ ತಂಡಗಳು ಮುಖಾಮುಖಿಯಾಗಲಿದ್ದು, ಇದರಲ್ಲಿ ಅಗ್ರಸ್ಥಾನ ಪಡೆಯುವ 2 ತಂಡಗಳು ಸೂಪರ್-4 ಹಂತದಲ್ಲಿ ಆಡಲಿದೆ. ಅಂದರೆ ಎ ಗ್ರೂಪ್​ನಿಂದ 2 ತಂಡ, ಬಿ ಗ್ರೂಪ್​ನಿಂದ 2 ತಂಡಗಳು ಮುಂದಿನ ಹಂತಕ್ಕೇರಲಿದೆ. ಇನ್ನು ಸೆಪ್ಟೆಂಬರ್ 3 ರಿಂದ ಸೂಪರ್- 4 ತಂಡಗಳ ಮುಖಾಮುಖಿ ಶುರುವಾಗಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ಪ್ರಾರಂಭವಾಗುತ್ತವೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ