AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತ ಬಳಿಕ ಬಾಂಗ್ಲಾದೇಶ್ ವಿರುದ್ಧ ದೂರು ದಾಖಲಿಸಿದ ಪಾಕಿಸ್ತಾನ್

Bangladesh vs Pakistan, 3rd ODI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್​ಗಳಲ್ಲಿ 290 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು 279 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬಾಂಗ್ಲಾದೇಶ್ ಪಡೆ 11 ರನ್​ಗಳ ಗೆಲುವು ದಾಖಲಿಸಿದೆ. 

ಸೋತ ಬಳಿಕ ಬಾಂಗ್ಲಾದೇಶ್ ವಿರುದ್ಧ ದೂರು ದಾಖಲಿಸಿದ ಪಾಕಿಸ್ತಾನ್
Pakistan
ಝಾಹಿರ್ ಯೂಸುಫ್
|

Updated on:Mar 16, 2026 | 1:56 PM

Share

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ 1-2 ಅಂತರದಿಂದ ಸೋತಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ತಂಡವು ಮ್ಯಾಚ್ ರೆಫರಿ ನೀಯಮೂರ್ ರಶೀದ್ ಅವರಿಗೆ ಅಧಿಕೃತ ದೂರು ನೀಡಿದ್ದಾರೆ. ಈ ದೂರಿನಲ್ಲಿ ಬಾಂಗ್ಲಾದೇಶ್ ತಂಡವು ರಿವ್ಯೂ ತೆಗೆದುಕೊಳ್ಳಲು ಈ ಮಿತಿಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ ಎಂದು ಆರೋಪಿಸಲಾಗಿದೆ.

ಮಾರ್ಚ್ 15, 2026 ರಂದು ಢಾಕಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ಕೊನೆಯ ಓವರ್‌ನಲ್ಲಿ ಪಾಕಿಸ್ತಾನಕ್ಕೆ ಗೆಲ್ಲಲು 2 ಎಸೆತಗಳಲ್ಲಿ 12 ರನ್‌ಗಳ ಅಗತ್ಯವಿತ್ತು. ಈ ವೇಳೆ ಬೌಲರ್ ರಿಶಾದ್ ಹೊಸೈನ್ ಎಸೆದ 5ನೇ ಎಸೆತವನ್ನು ಅಂಪೈರ್ ಕುಮಾರ್ ಧರ್ಮಸೇನ ‘ವೈಡ್’ ಎಂದು ಘೋಷಿಸಿದ್ದರು.

ಇತ್ತ ಅಂಪೈರ್ ವೈಡ್ ಎಂದು ಘೋಷಿಸಿದರೂ ಬಾಂಗ್ಲಾದೇಶ್ ತಂಡವು ಎಲ್‌ಬಿಡಬ್ಲ್ಯೂ (LBW) ಗಾಗಿ ರಿವ್ಯೂ (DRS) ತೆಗೆದುಕೊಂಡಿತು. ಈ ವೇಳೆ ಚೆಂಡು ಪ್ಯಾಡ್​ಗೆ ತಗುಲಿರುವುದು ಕಂಡು ಬಂದಿದೆ. ಇದಾಗ್ಯೂ ಶಾಹೀನ್ ಶಾ ಅಫ್ರಿದಿ ಎಲ್​ಬಿಡಬ್ಲ್ಯೂ ಆಗಿರಲಿಲ್ಲ. ಹೀಗಾಗಿ ವೈಡ್ ಅನ್ನು ಹಿಂಪಡೆದು ಫೀಲ್ಡ್ ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿದ್ದರು.

ಆದರೆ ಇದೀಗ ಈ ರಿವ್ಯೂ ತೆಗೆದುಕೊಳ್ಳಲು ಬಾಂಗ್ಲಾದೇಶ್ ತಂಡದ ನಾಯಕ ಹೆಚ್ಚಿನ ಸಮಯ ತೆಗೆದುಕೊಂಡಿದ್ದಾರೆ ಎಂದು ಪಾಕಿಸ್ತಾನ್ ಆರೋಪಿಸಿದೆ.

ಐಸಿಸಿ ನಿಯಮದ ಪ್ರಕಾರ ರಿವ್ಯೂ ಕೇಳಲು ಕೇವಲ 15 ಸೆಕೆಂಡುಗಳ ಕಾಲಾವಕಾಶವಿರುತ್ತದೆ. ಆದರೆ ಬಾಂಗ್ಲಾದೇಶ್ ಈ ಮಿತಿಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ.

ಕ್ರೀಡಾಂಗಣದ ಬಿಗ್​ ಸ್ಕ್ರೀನ್ ಮೇಲೆ ರಿಪ್ಲೇ ನೋಡಿದ ನಂತರವೇ ಬಾಂಗ್ಲಾದೇಶ್ ತಂಡದ ನಾಯಕ ಮೆಹದಿ ಹಸನ್ ಮಿರಾಝ್ ರಿವ್ಯೂ ನಿರ್ಧಾರ ಮಾಡಿದ್ದಾರೆ.  ಇದು ನಿಯಮಬಾಹಿರ ಎಂದು ಪಾಕಿಸ್ತಾನ ಆರೋಪಿಸಿದೆ.

ಅಲ್ಲದೆ ಈ ಬಗ್ಗೆ ಮ್ಯಾಚ್ ರೆಫರಿ ನೀಯಮೂರ್ ರಶೀದ್ ಅವರಿಗೆ ಅಧಿಕೃತ ದೂರು ನೀಡಿ ಬಾಂಗ್ಲಾದೇಶ್ ತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ್ ತಂಡ ಆಗ್ರಹಿಸಿದೆ.

ಇದನ್ನೂ ಓದಿ: IPL 2026: 10 ತಂಡಗಳು ರೆಡಿ: ಯಾರು ಬಲಿಷ್ಠ?

ಇನ್ನು ಈ ಪಂದ್ಯದ ಕೊನೆಯ ಎರಡು ಎಸೆತಗಳಲ್ಲಿ 12 ಗುರಿ ಪಡೆದಿದ್ದ ಪಾಕಿಸ್ತಾನ್ ತಂಡಕ್ಕೆ ಯಾವುದೇ ರನ್ ಕಲೆಹಾಕಲು ಸಾಧ್ಯವಾಗಿರಲಿಲ್ಲ. ಅಂತಿಮವಾಗಿ ಬಾಂಗ್ಲಾದೇಶ್ ತಂಡವು 11 ರನ್​ಗಳ ಜಯ ಸಾಧಿಸಿ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

Published On - 1:55 pm, Mon, 16 March 26

Follow Us
ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ
ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ
‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್
‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್
ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು
ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು
: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?