AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್​ 8ಗೆ ಪಾಕಿಸ್ತಾನ ತಲುಪೋದು ಅನುಮಾನ? ಇಲ್ಲಿದೆ ಲೆಕ್ಕಾಚಾರ

ಗ್ರೂಪ್ Aನಲ್ಲಿ ಇರೋದು ಅಮೆರಿಕ, ಭಾರತ, ಪಾಕಿಸ್ತಾನ, ಕೆನಡಾ ಹಾಗೂ ಐರ್ಲೆಂಡ್. ಈ ಪೈಕಿ ಭಾರತ ಹಾಗೂ ಪಾಕಿಸ್ತಾನ ಸ್ಟ್ರಾಂಗ್ ತಂಡ ಎನಿಸಿಕೊಂಡಿದ್ದವು. ಆದರೆ, ಅಮೆರಿಕ ಯಾರೂ ಊಹಿಸದ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡಿದೆ.

ಸೂಪರ್​ 8ಗೆ ಪಾಕಿಸ್ತಾನ ತಲುಪೋದು ಅನುಮಾನ? ಇಲ್ಲಿದೆ ಲೆಕ್ಕಾಚಾರ
ಪಾಕ್ ತಂಡ
ರಾಜೇಶ್ ದುಗ್ಗುಮನೆ
|

Updated on: Jun 07, 2024 | 7:40 AM

Share

ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನಕ್ಕೆ (Pakistan Team) ಮೊದಲ ಪಂದ್ಯದಲ್ಲೇ ಶಾಕ್ ಸಿಕ್ಕಿದೆ. ಈಗತಾನೇ ಕ್ರಿಕೆಟ್ ಜಗತ್ತಲ್ಲಿ ಅಂಬೆಗಾಲಿಡುತ್ತಿರುವ ಅಮೆರಿಕ ತಂಡವು ಪಾಕಿಸ್ತಾನವನ್ನು ರೋಚಕ ಪಂದ್ಯದಲ್ಲಿ ಸೋಲಿಸಿದೆ. ಈ ಮೂಲಕ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಸೂಪರ್ 8ಗೆ ಅರ್ಹತೆ ಪಡೆಯಬೇಕು ಎಂಬ ಕನಸು ಕಾಣುತ್ತಿರುವ ಪಾಕಿಸ್ತಾನಕ್ಕೆ ಈ ಸೋಲು ಶಾಕ್ ತಂದಿದೆ. ಸೂಪರ್ 8ಗೆ ಪಾಕ್ ಅರ್ಹತೆ ಪಡೆಯೋದು ಅನುಮಾನ ಎಂದು ಹೇಳಲು ಕಾರಣಗಳು ಇಲ್ಲಿವೆ.

ಗ್ರೂಪ್ Aನಲ್ಲಿ ಇರೋದು ಅಮೆರಿಕ, ಭಾರತ, ಪಾಕಿಸ್ತಾನ, ಕೆನಡಾ ಹಾಗೂ ಐರ್ಲೆಂಡ್. ಈ ಪೈಕಿ ಭಾರತ ಹಾಗೂ ಪಾಕಿಸ್ತಾನ ಸ್ಟ್ರಾಂಗ್ ತಂಡ ಎನಿಸಿಕೊಂಡಿದ್ದವು. ಆದರೆ, ಅಮೆರಿಕ ಯಾರೂ ಊಹಿಸದ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡಿದೆ. ಈ ಸೀಸನ್​ನಲ್ಲಿ ಅಮೆರಿಕ ಆಡಿದ ಎರಡು ಪಂದ್ಯಗಳಲ್ಲಿ ಎರಡಕ್ಕೆ ಎರಡೂ ಗೆದ್ದಿದೆ. ಇದು ಪಾಕಿಸ್ತಾನಕ್ಕೆ ಮುಳುವಾಗುವ ಸಾಧ್ಯತೆ ಇದೆ.

ಪಾಕಿಸ್ತಾನ ಜೂನ್ 9ರಂದು ಭಾರತ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಪಾಕ್ ಸೋತರೆ ‘ಸೂಪರ್ 8’ರ ಹಾದಿ ಮತ್ತಷ್ಟು ದುರ್ಗಮ ಆಗಲಿದೆ. ಭಾರತದ ಜೊತೆ ಪಾಕ್ ಸೋತು, ಮುಂದೆ ಬರುವ ಕೆನಡಾ ಹಾಗೂ ಐರ್ಲೆಂಡ್ ಮ್ಯಾಚ್​​ಗಳಲ್ಲಿ ಗೆದ್ದರೂ ಸೂಪರ್ 8ಗೆ ಅರ್ಹತೆ ಪಡೆಯೋ ಸಾಧ್ಯತೆ ಕಡಿಮೆಯೇ ಇರುತ್ತದೆ. ಅಮೆರಿಕ ತಂಡಕ್ಕೆ ಭಾರತ ಹಾಗೂ ಐರ್ಲೆಂಡ್ ಜೊತೆ ಪಂದ್ಯಗಳಿವೆ. ಭಾರತದ ಜೊತೆ ಸೋತು, ಐರ್ಲೆಂಡ್ ಜೊತೆ ಗೆದ್ದರೆ ಪಾಕ್ ಬದಲು ಅಮೆರಿಕ ತಂಡ ಸೂಪರ್ 8ಗೆ ಅರ್ಹತೆ ಪಡೆಯಲಿದೆ. ಇದು ಪಾಕ್ ಕ್ರಿಕೆಟ್ ಪ್ರೇಮಿಗಳಿಗೆ ಆತಂಕ ಮೂಡಿಸಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಆಡಲು ಹೋಗಿ ದಂಧೆಗಿಳಿದ ಪಾಕಿಸ್ತಾನ್ ತಂಡ

ಭಾರತ ಹಾಗೂ ಪಾಕಿಸ್ತಾನದ ಪಂದ್ಯಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಪಂದ್ಯ ಸಾಕಷ್ಟು ಹೈ ವೋಲ್ಟೇಜ್ ಪಡೆದುಕೊಳ್ಳಲಿದೆ. ಜೂನ್ 9ರಂದು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಈ ಪಂದ್ಯ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ