AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್​ 8ಗೆ ಪಾಕಿಸ್ತಾನ ತಲುಪೋದು ಅನುಮಾನ? ಇಲ್ಲಿದೆ ಲೆಕ್ಕಾಚಾರ

ಗ್ರೂಪ್ Aನಲ್ಲಿ ಇರೋದು ಅಮೆರಿಕ, ಭಾರತ, ಪಾಕಿಸ್ತಾನ, ಕೆನಡಾ ಹಾಗೂ ಐರ್ಲೆಂಡ್. ಈ ಪೈಕಿ ಭಾರತ ಹಾಗೂ ಪಾಕಿಸ್ತಾನ ಸ್ಟ್ರಾಂಗ್ ತಂಡ ಎನಿಸಿಕೊಂಡಿದ್ದವು. ಆದರೆ, ಅಮೆರಿಕ ಯಾರೂ ಊಹಿಸದ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡಿದೆ.

ಸೂಪರ್​ 8ಗೆ ಪಾಕಿಸ್ತಾನ ತಲುಪೋದು ಅನುಮಾನ? ಇಲ್ಲಿದೆ ಲೆಕ್ಕಾಚಾರ
ಪಾಕ್ ತಂಡ
ರಾಜೇಶ್ ದುಗ್ಗುಮನೆ
|

Updated on: Jun 07, 2024 | 7:40 AM

Share

ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನಕ್ಕೆ (Pakistan Team) ಮೊದಲ ಪಂದ್ಯದಲ್ಲೇ ಶಾಕ್ ಸಿಕ್ಕಿದೆ. ಈಗತಾನೇ ಕ್ರಿಕೆಟ್ ಜಗತ್ತಲ್ಲಿ ಅಂಬೆಗಾಲಿಡುತ್ತಿರುವ ಅಮೆರಿಕ ತಂಡವು ಪಾಕಿಸ್ತಾನವನ್ನು ರೋಚಕ ಪಂದ್ಯದಲ್ಲಿ ಸೋಲಿಸಿದೆ. ಈ ಮೂಲಕ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಸೂಪರ್ 8ಗೆ ಅರ್ಹತೆ ಪಡೆಯಬೇಕು ಎಂಬ ಕನಸು ಕಾಣುತ್ತಿರುವ ಪಾಕಿಸ್ತಾನಕ್ಕೆ ಈ ಸೋಲು ಶಾಕ್ ತಂದಿದೆ. ಸೂಪರ್ 8ಗೆ ಪಾಕ್ ಅರ್ಹತೆ ಪಡೆಯೋದು ಅನುಮಾನ ಎಂದು ಹೇಳಲು ಕಾರಣಗಳು ಇಲ್ಲಿವೆ.

ಗ್ರೂಪ್ Aನಲ್ಲಿ ಇರೋದು ಅಮೆರಿಕ, ಭಾರತ, ಪಾಕಿಸ್ತಾನ, ಕೆನಡಾ ಹಾಗೂ ಐರ್ಲೆಂಡ್. ಈ ಪೈಕಿ ಭಾರತ ಹಾಗೂ ಪಾಕಿಸ್ತಾನ ಸ್ಟ್ರಾಂಗ್ ತಂಡ ಎನಿಸಿಕೊಂಡಿದ್ದವು. ಆದರೆ, ಅಮೆರಿಕ ಯಾರೂ ಊಹಿಸದ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡಿದೆ. ಈ ಸೀಸನ್​ನಲ್ಲಿ ಅಮೆರಿಕ ಆಡಿದ ಎರಡು ಪಂದ್ಯಗಳಲ್ಲಿ ಎರಡಕ್ಕೆ ಎರಡೂ ಗೆದ್ದಿದೆ. ಇದು ಪಾಕಿಸ್ತಾನಕ್ಕೆ ಮುಳುವಾಗುವ ಸಾಧ್ಯತೆ ಇದೆ.

ಪಾಕಿಸ್ತಾನ ಜೂನ್ 9ರಂದು ಭಾರತ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಪಾಕ್ ಸೋತರೆ ‘ಸೂಪರ್ 8’ರ ಹಾದಿ ಮತ್ತಷ್ಟು ದುರ್ಗಮ ಆಗಲಿದೆ. ಭಾರತದ ಜೊತೆ ಪಾಕ್ ಸೋತು, ಮುಂದೆ ಬರುವ ಕೆನಡಾ ಹಾಗೂ ಐರ್ಲೆಂಡ್ ಮ್ಯಾಚ್​​ಗಳಲ್ಲಿ ಗೆದ್ದರೂ ಸೂಪರ್ 8ಗೆ ಅರ್ಹತೆ ಪಡೆಯೋ ಸಾಧ್ಯತೆ ಕಡಿಮೆಯೇ ಇರುತ್ತದೆ. ಅಮೆರಿಕ ತಂಡಕ್ಕೆ ಭಾರತ ಹಾಗೂ ಐರ್ಲೆಂಡ್ ಜೊತೆ ಪಂದ್ಯಗಳಿವೆ. ಭಾರತದ ಜೊತೆ ಸೋತು, ಐರ್ಲೆಂಡ್ ಜೊತೆ ಗೆದ್ದರೆ ಪಾಕ್ ಬದಲು ಅಮೆರಿಕ ತಂಡ ಸೂಪರ್ 8ಗೆ ಅರ್ಹತೆ ಪಡೆಯಲಿದೆ. ಇದು ಪಾಕ್ ಕ್ರಿಕೆಟ್ ಪ್ರೇಮಿಗಳಿಗೆ ಆತಂಕ ಮೂಡಿಸಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಆಡಲು ಹೋಗಿ ದಂಧೆಗಿಳಿದ ಪಾಕಿಸ್ತಾನ್ ತಂಡ

ಭಾರತ ಹಾಗೂ ಪಾಕಿಸ್ತಾನದ ಪಂದ್ಯಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಪಂದ್ಯ ಸಾಕಷ್ಟು ಹೈ ವೋಲ್ಟೇಜ್ ಪಡೆದುಕೊಳ್ಳಲಿದೆ. ಜೂನ್ 9ರಂದು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಈ ಪಂದ್ಯ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ