AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್​ 8ಗೆ ಪಾಕಿಸ್ತಾನ ತಲುಪೋದು ಅನುಮಾನ? ಇಲ್ಲಿದೆ ಲೆಕ್ಕಾಚಾರ

ಗ್ರೂಪ್ Aನಲ್ಲಿ ಇರೋದು ಅಮೆರಿಕ, ಭಾರತ, ಪಾಕಿಸ್ತಾನ, ಕೆನಡಾ ಹಾಗೂ ಐರ್ಲೆಂಡ್. ಈ ಪೈಕಿ ಭಾರತ ಹಾಗೂ ಪಾಕಿಸ್ತಾನ ಸ್ಟ್ರಾಂಗ್ ತಂಡ ಎನಿಸಿಕೊಂಡಿದ್ದವು. ಆದರೆ, ಅಮೆರಿಕ ಯಾರೂ ಊಹಿಸದ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡಿದೆ.

ಸೂಪರ್​ 8ಗೆ ಪಾಕಿಸ್ತಾನ ತಲುಪೋದು ಅನುಮಾನ? ಇಲ್ಲಿದೆ ಲೆಕ್ಕಾಚಾರ
ಪಾಕ್ ತಂಡ
ರಾಜೇಶ್ ದುಗ್ಗುಮನೆ
|

Updated on: Jun 07, 2024 | 7:40 AM

Share

ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನಕ್ಕೆ (Pakistan Team) ಮೊದಲ ಪಂದ್ಯದಲ್ಲೇ ಶಾಕ್ ಸಿಕ್ಕಿದೆ. ಈಗತಾನೇ ಕ್ರಿಕೆಟ್ ಜಗತ್ತಲ್ಲಿ ಅಂಬೆಗಾಲಿಡುತ್ತಿರುವ ಅಮೆರಿಕ ತಂಡವು ಪಾಕಿಸ್ತಾನವನ್ನು ರೋಚಕ ಪಂದ್ಯದಲ್ಲಿ ಸೋಲಿಸಿದೆ. ಈ ಮೂಲಕ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಸೂಪರ್ 8ಗೆ ಅರ್ಹತೆ ಪಡೆಯಬೇಕು ಎಂಬ ಕನಸು ಕಾಣುತ್ತಿರುವ ಪಾಕಿಸ್ತಾನಕ್ಕೆ ಈ ಸೋಲು ಶಾಕ್ ತಂದಿದೆ. ಸೂಪರ್ 8ಗೆ ಪಾಕ್ ಅರ್ಹತೆ ಪಡೆಯೋದು ಅನುಮಾನ ಎಂದು ಹೇಳಲು ಕಾರಣಗಳು ಇಲ್ಲಿವೆ.

ಗ್ರೂಪ್ Aನಲ್ಲಿ ಇರೋದು ಅಮೆರಿಕ, ಭಾರತ, ಪಾಕಿಸ್ತಾನ, ಕೆನಡಾ ಹಾಗೂ ಐರ್ಲೆಂಡ್. ಈ ಪೈಕಿ ಭಾರತ ಹಾಗೂ ಪಾಕಿಸ್ತಾನ ಸ್ಟ್ರಾಂಗ್ ತಂಡ ಎನಿಸಿಕೊಂಡಿದ್ದವು. ಆದರೆ, ಅಮೆರಿಕ ಯಾರೂ ಊಹಿಸದ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡಿದೆ. ಈ ಸೀಸನ್​ನಲ್ಲಿ ಅಮೆರಿಕ ಆಡಿದ ಎರಡು ಪಂದ್ಯಗಳಲ್ಲಿ ಎರಡಕ್ಕೆ ಎರಡೂ ಗೆದ್ದಿದೆ. ಇದು ಪಾಕಿಸ್ತಾನಕ್ಕೆ ಮುಳುವಾಗುವ ಸಾಧ್ಯತೆ ಇದೆ.

ಪಾಕಿಸ್ತಾನ ಜೂನ್ 9ರಂದು ಭಾರತ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಪಾಕ್ ಸೋತರೆ ‘ಸೂಪರ್ 8’ರ ಹಾದಿ ಮತ್ತಷ್ಟು ದುರ್ಗಮ ಆಗಲಿದೆ. ಭಾರತದ ಜೊತೆ ಪಾಕ್ ಸೋತು, ಮುಂದೆ ಬರುವ ಕೆನಡಾ ಹಾಗೂ ಐರ್ಲೆಂಡ್ ಮ್ಯಾಚ್​​ಗಳಲ್ಲಿ ಗೆದ್ದರೂ ಸೂಪರ್ 8ಗೆ ಅರ್ಹತೆ ಪಡೆಯೋ ಸಾಧ್ಯತೆ ಕಡಿಮೆಯೇ ಇರುತ್ತದೆ. ಅಮೆರಿಕ ತಂಡಕ್ಕೆ ಭಾರತ ಹಾಗೂ ಐರ್ಲೆಂಡ್ ಜೊತೆ ಪಂದ್ಯಗಳಿವೆ. ಭಾರತದ ಜೊತೆ ಸೋತು, ಐರ್ಲೆಂಡ್ ಜೊತೆ ಗೆದ್ದರೆ ಪಾಕ್ ಬದಲು ಅಮೆರಿಕ ತಂಡ ಸೂಪರ್ 8ಗೆ ಅರ್ಹತೆ ಪಡೆಯಲಿದೆ. ಇದು ಪಾಕ್ ಕ್ರಿಕೆಟ್ ಪ್ರೇಮಿಗಳಿಗೆ ಆತಂಕ ಮೂಡಿಸಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್ ಆಡಲು ಹೋಗಿ ದಂಧೆಗಿಳಿದ ಪಾಕಿಸ್ತಾನ್ ತಂಡ

ಭಾರತ ಹಾಗೂ ಪಾಕಿಸ್ತಾನದ ಪಂದ್ಯಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಪಂದ್ಯ ಸಾಕಷ್ಟು ಹೈ ವೋಲ್ಟೇಜ್ ಪಡೆದುಕೊಳ್ಳಲಿದೆ. ಜೂನ್ 9ರಂದು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಈ ಪಂದ್ಯ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್