AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1800 ಕೋಟಿ ರೂ. ಖರ್ಚು ಮಾಡಿ ನಿರ್ಮಿಸಿದ ಸ್ಟೇಡಿಯಂನಲ್ಲಿ ಪಾಕಿಸ್ತಾನ್ ಒಂದೇ ಒಂದು ಪಂದ್ಯವಾಡಲ್ಲ..!

Champions Trophy 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗಾಗಿ ಲಾಹೋರ್​ನ ಗದ್ದಾಫಿ ಸ್ಟೇಡಿಯಂ ಅನ್ನು ನವೀಕರಿಸಲಾಗಿತ್ತು. ಇದಕ್ಕಾಗಿ 117 ದಿನಗಳ ಕಾಲ, 1000 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡಿದ್ದರು. ಅಲ್ಲದೆ ಈ ಸ್ಟೇಡಿಯಂನ ನವೀಕರಣಕ್ಕಾಗಿ ಖಚ್ಚು ಮಾಡಲಾದ ವೆಚ್ಚ 1800 ಕೋಟಿ ರೂ. ಎನ್ನಲಾಗಿದೆ. ಆದರೆ ಈ ಹೊಸ ಸ್ಟೇಡಿಯಂನಲ್ಲಿ ಪಾಕಿಸ್ತಾನ್ ತಂಡ ಒಂದೇ ಒಂದು ಪಂದ್ಯವಾಡುತ್ತಿಲ್ಲ..!

1800 ಕೋಟಿ ರೂ. ಖರ್ಚು ಮಾಡಿ ನಿರ್ಮಿಸಿದ ಸ್ಟೇಡಿಯಂನಲ್ಲಿ ಪಾಕಿಸ್ತಾನ್ ಒಂದೇ ಒಂದು ಪಂದ್ಯವಾಡಲ್ಲ..!
Pakistan
ಝಾಹಿರ್ ಯೂಸುಫ್
|

Updated on: Feb 25, 2025 | 1:03 PM

Share

ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಬೇಕೆಂಬ ಪಾಕಿಸ್ತಾನ್ ತಂಡದ ಕನಸು ನುಚ್ಚುನೂರಾಗಿದೆ. ಅದು ಸಹ ಸತತ ಎರಡು ಸೋಲುಗಳೊಂದಿಗೆ. ಕರಾಚಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತು ಸುಣ್ಣವಾಗಿದ್ದ ಪಾಕ್ ಪಡೆಯನ್ನು ದುಬೈನಲ್ಲಿ ಟೀಮ್ ಇಂಡಿಯಾ ಬಗ್ಗು ಬಡಿದಿದೆ.

ಈ ಪರಾಜಯಗಳೊಂದಿಗೆ ಪಾಕಿಸ್ತಾನ್ ತಂಡ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹೊರಬಿದ್ದಿದೆ. ಇತ್ತ ಟೀಮ್ ಇಂಡಿಯಾ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಇದರೊಂದಿಗೆ ಗದ್ದಾಫಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವ ಪಾಕ್ ಪಡೆಯ ಕನಸು ಕೂಡ ಕಮರಿದೆ.

1800 ಕೋಟಿ ರೂ. ಸ್ಟೇಡಿಯಂ:

ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗಾಗಿಯೇ ಲಾಹೋರ್​ನ ಗದ್ದಾಫಿ ಸ್ಟೇಡಿಯಂ ಅನ್ನು ನವೀಕರಿಸಲಾಗಿತ್ತು. ಐಸಿಸಿ ನೀಡಿದ ಅನುದಾನದೊಂದಿಗೆ ಒಟ್ಟು 1800 ಕೋಟಿ ರೂ. ಮಾಡಿ ಈ ಸ್ಟೇಡಿಯಂ ಅನ್ನು ನಿರ್ಮಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಇದೀಗ ಈ ಸ್ಟೇಡಿಯಂನಲ್ಲಿ ಕಣಕ್ಕಿಳಿಯಲು ಪಾಕಿಸ್ತಾನ್ ತಂಡಕ್ಕೆ ಅವಕಾಶವೇ ಇಲ್ಲದಂತಾಗಿದೆ.

ಏಕೆಂದರೆ ಪಾಕಿಸ್ತಾನ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂಬ ವಿಶ್ವಾಸದಲ್ಲಿ ಈ ಟೂರ್ನಿಯ ಎರಡನೇ ನಾಕೌಟ್​ ಪಂದ್ಯವನ್ನು ಗದ್ದಾಫಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.  ಅಲ್ಲದೆ ತವರಿನಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಪಾಕಿಸ್ತಾನ್ ಭರ್ಜರಿ ಪ್ರದರ್ಶನ ನೀಡಿ ಫೈನಲ್ ತಲುಪಲಿದೆ ಎಂಬ ನಂಬಿಕೆಯೊಂದಿಗೆ ಅಂತಿಮ ಪಂದ್ಯವನ್ನು ಲಾಹೋರ್​ನಲ್ಲೇ ಆಯೋಜಿಸಲು ಪಿಸಿಬಿ ಪ್ಲ್ಯಾನ್ ರೂಪಿಸಿದೆ.

ಆದರೀಗ ಸೆಮಿಫೈನಲ್​ಗೆ ತಲುಪುವ ಮುನ್ನವೇ ಪಾಕಿಸ್ತಾನ್ ತಂಡ ಟೂರ್ನಿಯಿಂದಲೇ ಹೊರಬಿದ್ದಿದೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವ ಭಾಗ್ಯ ಪಾಕಿಸ್ತಾನ್ ತಂಡಕ್ಕೆ ದೊರೆಯದಂತಾಗಿದೆ.

ಅದರಂತೆ ಗದ್ದಾಫಿ ಸ್ಟೇಡಿಯಂನಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಆಸ್ಟ್ರೇಲಿಯಾ/ಇಂಗ್ಲೆಂಡ್/ಸೌತ್ ಆಫ್ರಿಕಾ ಅಥವಾ ಅಫ್ಘಾನಿಸ್ತಾನ್ ತಂಡ ಕಣಕ್ಕಿಳಿಯಲಿದೆ.

ಫೈನಲ್ ಪಂದ್ಯ ಎಲ್ಲಿ?

ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯವು ಎಲ್ಲಿ ನಡೆಯಲಿದೆ ಎಂಬುದು ಮಾರ್ಚ್ 4 ರಂದು ನಿರ್ಧಾರವಾಗಲಿದೆ. ಏಕೆಂದರೆ ಟೀಮ್ ಇಂಡಿಯಾ ಮೊದಲ ಸೆಮಿಫೈನಲ್​ನಲ್ಲಿ ಗೆಲುವು ಸಾಧಿಸಿ ಫೈನಲ್​ಗೆ ಪ್ರವೇಶಿಸಿದರೆ ಅಂತಿಮ ಪಂದ್ಯ ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಜರುಗಲಿದೆ.

ಇದನ್ನೂ ಓದಿ: ರಚಿನ್ ಅಬ್ಬರಕ್ಕೆ ಸಚಿನ್ ವಿಶ್ವ ದಾಖಲೆಯೇ ಉಡೀಸ್

ಒಂದು ವೇಳೆ ಭಾರತ ತಂಡ ಸೆಮಿಫೈನಲ್​ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದರೆ, ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆಯಲಿದೆ.

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!