AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan vs New Zealand, T20 World Cup 2021: ನ್ಯೂಜಿಲೆಂಡ್ ವಿರುದ್ದ ಜಯ ಸಾಧಿಸಿದ ಪಾಕಿಸ್ತಾನ್

Pakistan vs New Zealand : ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ ತಂಡ ಒಟ್ಟು 25 ಮುಖಾಮುಖಿಯಾಗಿದೆ. ಇದರಲ್ಲಿ ಪಾಕಿಸ್ತಾನ್ 15 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ನ್ಯೂಜಿಲೆಂಡ್‌ 10 ಪಂದ್ಯಗಳನ್ನು ಗೆದ್ದುಕೊಂಡಿದೆ.

Pakistan vs New Zealand, T20 World Cup 2021: ನ್ಯೂಜಿಲೆಂಡ್ ವಿರುದ್ದ ಜಯ ಸಾಧಿಸಿದ ಪಾಕಿಸ್ತಾನ್
Pakistan vs New Zealand live score
TV9 Web
| Edited By: |

Updated on:Oct 26, 2021 | 11:10 PM

Share

ಶಾರ್ಜಾದಲ್ಲಿ ನಡೆದ ಟಿ20 ವಿಶ್ವಕಪ್​ನ (ICC T20 World Cup 2021) 19ನೇ ಪಂದ್ಯದಲ್ಲಿ ಬಾಬರ್ ಆಜಂ (Babar Azam) ನಾಯಕತ್ವದ ಪಾಕಿಸ್ತಾನ್ ತಂಡ ಕೇನ್ ವಿಲಿಯಮ್ಸನ್ (Kane Williamson) ನೇತೃತ್ವದ ನ್ಯೂಜಿಲೆಂಡ್ (Pakistan vs New Zealand)  ವಿರುದ್ದ 5 ವಿಕೆಟ್​ಗಳ ಜಯ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು ನಿಗದಿತ 20 ಓವರ್​ನಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ ಕಲೆಹಾಕಿತು. ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಪಾಕ್ ತಂಡ ಒಂದು ಹಂತದಲ್ಲಿ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಅದರಂತೆ 5 ವಿಕೆಟ್​ ಕಳೆದುಕೊಂಡಿದ್ದ ಪಾಕ್ ತಂಡಕ್ಕೆ ಅಂತಿಮ 6 ಓವರ್​ಗಳಲ್ಲಿ 53 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಜೊತೆಗೂಡಿದ ಅನುಭವಿ ಶೊಯೇಬ್ ಮಲಿಕ್ (26) ಹಾಗೂ ಆಸಿಫ್ ಅಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಲ್ಲೂ 12 ಎಸೆತಗಳಲ್ಲಿ 3 ಸಿಕ್ಸರ್​ನೊಂದಿಗೆ 27 ರನ್ ಬಾರಿಸುವ ಮೂಲಕ ಆಸಿಫ್ ಅಲಿ ತಂಡವನ್ನು 18.4 ಓವರ್​ನಲ್ಲಿ 135 ರನ್​ಗಳ ಗುರಿ ಮುಟ್ಟಿಸಿದರು.

ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ ತಂಡ ಒಟ್ಟು 25 ಮುಖಾಮುಖಿಯಾಗಿದೆ. ಇದರಲ್ಲಿ ಪಾಕಿಸ್ತಾನ್ 15 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ನ್ಯೂಜಿಲೆಂಡ್‌ 10 ಪಂದ್ಯಗಳನ್ನು ಗೆದ್ದುಕೊಂಡಿದೆ.

ನ್ಯೂಜಿಲೆಂಡ್ (ಪ್ಲೇಯಿಂಗ್ 11): ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್(ನಾಯಕ), ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಟಿಮ್ ಸೀಫರ್ಟ್(ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್

ಪಾಕಿಸ್ತಾನ (ಪ್ಲೇಯಿಂಗ್ 11): ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಆಜಂ(ನಾಯಕ), ಫಖರ್ ಝಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಂ, ಶಾದಾಬ್ ಖಾನ್, ಹಸನ್ ಅಲಿ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ

Published On - 7:04 pm, Tue, 26 October 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ