AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan vs New Zealand, T20 World Cup 2021: ನ್ಯೂಜಿಲೆಂಡ್ ವಿರುದ್ದ ಜಯ ಸಾಧಿಸಿದ ಪಾಕಿಸ್ತಾನ್

Pakistan vs New Zealand : ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ ತಂಡ ಒಟ್ಟು 25 ಮುಖಾಮುಖಿಯಾಗಿದೆ. ಇದರಲ್ಲಿ ಪಾಕಿಸ್ತಾನ್ 15 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ನ್ಯೂಜಿಲೆಂಡ್‌ 10 ಪಂದ್ಯಗಳನ್ನು ಗೆದ್ದುಕೊಂಡಿದೆ.

Pakistan vs New Zealand, T20 World Cup 2021: ನ್ಯೂಜಿಲೆಂಡ್ ವಿರುದ್ದ ಜಯ ಸಾಧಿಸಿದ ಪಾಕಿಸ್ತಾನ್
Pakistan vs New Zealand live score
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 26, 2021 | 11:10 PM

ಶಾರ್ಜಾದಲ್ಲಿ ನಡೆದ ಟಿ20 ವಿಶ್ವಕಪ್​ನ (ICC T20 World Cup 2021) 19ನೇ ಪಂದ್ಯದಲ್ಲಿ ಬಾಬರ್ ಆಜಂ (Babar Azam) ನಾಯಕತ್ವದ ಪಾಕಿಸ್ತಾನ್ ತಂಡ ಕೇನ್ ವಿಲಿಯಮ್ಸನ್ (Kane Williamson) ನೇತೃತ್ವದ ನ್ಯೂಜಿಲೆಂಡ್ (Pakistan vs New Zealand)  ವಿರುದ್ದ 5 ವಿಕೆಟ್​ಗಳ ಜಯ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು ನಿಗದಿತ 20 ಓವರ್​ನಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ ಕಲೆಹಾಕಿತು. ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಪಾಕ್ ತಂಡ ಒಂದು ಹಂತದಲ್ಲಿ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಅದರಂತೆ 5 ವಿಕೆಟ್​ ಕಳೆದುಕೊಂಡಿದ್ದ ಪಾಕ್ ತಂಡಕ್ಕೆ ಅಂತಿಮ 6 ಓವರ್​ಗಳಲ್ಲಿ 53 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಜೊತೆಗೂಡಿದ ಅನುಭವಿ ಶೊಯೇಬ್ ಮಲಿಕ್ (26) ಹಾಗೂ ಆಸಿಫ್ ಅಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಲ್ಲೂ 12 ಎಸೆತಗಳಲ್ಲಿ 3 ಸಿಕ್ಸರ್​ನೊಂದಿಗೆ 27 ರನ್ ಬಾರಿಸುವ ಮೂಲಕ ಆಸಿಫ್ ಅಲಿ ತಂಡವನ್ನು 18.4 ಓವರ್​ನಲ್ಲಿ 135 ರನ್​ಗಳ ಗುರಿ ಮುಟ್ಟಿಸಿದರು.

ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ ತಂಡ ಒಟ್ಟು 25 ಮುಖಾಮುಖಿಯಾಗಿದೆ. ಇದರಲ್ಲಿ ಪಾಕಿಸ್ತಾನ್ 15 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ನ್ಯೂಜಿಲೆಂಡ್‌ 10 ಪಂದ್ಯಗಳನ್ನು ಗೆದ್ದುಕೊಂಡಿದೆ.

ನ್ಯೂಜಿಲೆಂಡ್ (ಪ್ಲೇಯಿಂಗ್ 11): ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್(ನಾಯಕ), ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಟಿಮ್ ಸೀಫರ್ಟ್(ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್

ಪಾಕಿಸ್ತಾನ (ಪ್ಲೇಯಿಂಗ್ 11): ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಆಜಂ(ನಾಯಕ), ಫಖರ್ ಝಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಂ, ಶಾದಾಬ್ ಖಾನ್, ಹಸನ್ ಅಲಿ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ

Published On - 7:04 pm, Tue, 26 October 21

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್