AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್-ಶ್ರೀಲಂಕಾ ನಡುವಣ ಪಂದ್ಯ ರದ್ದು..!

Pakistan vs Sri Lanka: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ನ್ಯಾಯಾಲಯದ ಹೊರಗೆ ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದರು. ಅಲ್ಲದೆ 27 ಜನರು ಗಾಯಗೊಂಡಿದ್ದಾರೆ. ಈ ದಾಳಿಯ ಬೆನ್ನಲ್ಲೇ ಶ್ರೀಲಂಕಾ ತಂಡದ ಕೆಲ ಆಟಗಾರರು ತವರಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನ್-ಶ್ರೀಲಂಕಾ ನಡುವಣ ಪಂದ್ಯ ರದ್ದು..!
Pak Vs Sl
ಝಾಹಿರ್ ಯೂಸುಫ್
|

Updated on:Nov 13, 2025 | 11:14 AM

Share

ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಇಂದು (ನ.13) ನಡೆಯಬೇಕಿದ್ದ ಎರಡನೇ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಮಂಗಳವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ನಂತರ ಶ್ರೀಲಂಕಾ ತಂಡದ 8 ಆಟಗಾರರು ತವರಿಗೆ ತೆರಳುವುದಾಗಿ ತಿಳಿಸಿದ್ದರು. ಇದೇ ಕಾರಣದಿಂದಾಗಿ ಗುರುವಾರ ರಾವಲ್ಪಿಂಡಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ 2ನೇ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಸರಣಿಗೆ ದಿನಾಂಕ ಮರುನಿಗದಿ:

ಶ್ರೀಲಂಕಾದ ಕೆಲ ಆಟಗಾರರು ತಮ್ಮ ಸುರಕ್ಷತಾ ಕಾಳಜಿಯನ್ನು ಉಲ್ಲೇಖಿಸಿ ತವರಿಗೆ ಮರಳಲು ಬಯಸಿದ್ದಾರೆ. ಇದಾಗ್ಯೂ ಈ ಸರಣಿಯನ್ನು ಮುಂದುವರೆಸುವುದಾಗಿ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಈ ಹಿನ್ನಲೆಯಲ್ಲಿ ಇದೀಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಉಳಿದ ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಿದೆ.

ಅದರಂತೆ ಇಂದು ನಡಯಬೇಕಿದ್ದ 2ನೇ ಏಕದಿನ ಪಂದ್ಯವನ್ನು ಶುಕ್ರವಾರ ಆಡಲಾಗುತ್ತದೆ ಎಂದು ತಿಳಿಸಲಾಗಿದೆ. ಹಾಗೆಯೇ ನವೆಂಬರ್ 15 ಕ್ಕೆ ನಿಗದಿಯಾಗಿದ್ದ ಮೂರನೇ ಮ್ಯಾಚ್ ಭಾನುವಾರ ನಡೆಯಲಿದೆ. ಈ ಮೂಲಕ ಸರಣಿಯನ್ನು ಪೂರ್ಣಗೊಳಿಸಲು ಪಿಸಿಬಿ ಪ್ಲ್ಯಾನ್ ರೂಪಿಸಿದೆ.

ಬದಲಿ ಆಟಗಾರರ ಎಂಟ್ರಿ:

ಶ್ರೀಲಂಕಾ ಏಕದಿನ ತಂಡದಲ್ಲಿದ್ದ ಕೆಲ ಆಟಗಾರರು ಪಾಕ್​ನಲ್ಲಿನ ಉಗ್ರರ ದಾಳಿಯಿಂದ ಭಯಭೀತರಾಗಿ ತವರಿಗೆ ಮರಳಲು ಮುಂದಾಗಿದ್ದಾರೆ. ಯಾವುದೇ ಆಟಗಾರನು ಅರ್ಧದಲ್ಲೇ ಸರಣಿ ತೊರೆದರೂ, ಬದಲಿ ಆಟಗಾರರನ್ನು ಕಳುಹಿಸಿ ಕೊಡುವುದಾಗಿ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಹೀಗಾಗಿಯೇ ಇಂದು (ನ.13) ನಡೆಯಬೇಕಿದ್ದ ಪಂದ್ಯವನ್ನು ಮರು ನಿಗದಿ ಮಾಡಲಾಗಿದೆ.

ಇದನ್ನೂ ಓದಿ: IND vs SA: ಆಯ್ಕೆ ಮಾಡಿ ನಿತೀಶ್ ಕುಮಾರ್ ರೆಡ್ಡಿಯನ್ನು ಕೈ ಬಿಟ್ಟಿದ್ದೇಕೆ?

ಏಕದಿನ ಸರಣಿ ಬಳಿಕ ತ್ರಿಕೋನ ಸರಣಿ:

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಬಳಿಕ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮೂರು ತಂಡಗಳ ನಡುವಣ ತ್ರಿಕೋನ ಟಿ20 ಸರಣಿಯನ್ನು ಆಯೋಜಿಸಲಿದೆ. ಈ ಸರಣಿಯಲ್ಲಿ ಪಾಕಿಸ್ತಾನ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸರಣಿಯ ವೇಳಾಪಟ್ಟಿ ಈ ಕೆಳಗಿನಂತಿದೆ…

ಟ್ರೈ-ಸೀರೀಸ್ 2025 ವೇಳಾಪಟ್ಟಿ:

  • ನವೆಂಬರ್ 17: ಪಾಕಿಸ್ತಾನ್ vs ಝಿಂಬಾಬ್ವೆ (ರಾವಲ್ಪಿಂಡಿ)
  • ನವೆಂಬರ್ 18: ಶ್ರೀಲಂಕಾ vs ಝಿಂಬಾಬ್ವೆ (ರಾವಲ್ಪಿಂಡಿ)
  • ನವೆಂಬರ್ 22: ಪಾಕಿಸ್ತಾನ್ vs ಶ್ರೀಲಂಕಾ (ಲಾಹೋರ್)
  • ನವೆಂಬರ್ 23: ಪಾಕಿಸ್ತಾನ್ vs ಝಿಂಬಾಬ್ವೆ (ಲಾಹೋರ್)
  • ನವೆಂಬರ್ 25: ಶ್ರೀಲಂಕಾ v ಝಿಂಬಾಬ್ವೆ (ಲಾಹೋರ್)
  • ನವೆಂಬರ್ 27: ಪಾಕಿಸ್ತಾನ್ vs ಶ್ರೀಲಂಕಾ (ಲಾಹೋರ್)
  • ನವೆಂಬರ್ 29: ಫೈನಲ್ (ಲಾಹೋರ್)

Published On - 10:24 am, Thu, 13 November 25

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​