AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್-ಶ್ರೀಲಂಕಾ ನಡುವಣ ಪಂದ್ಯ ರದ್ದು..!

Pakistan vs Sri Lanka: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ನ್ಯಾಯಾಲಯದ ಹೊರಗೆ ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದರು. ಅಲ್ಲದೆ 27 ಜನರು ಗಾಯಗೊಂಡಿದ್ದಾರೆ. ಈ ದಾಳಿಯ ಬೆನ್ನಲ್ಲೇ ಶ್ರೀಲಂಕಾ ತಂಡದ ಕೆಲ ಆಟಗಾರರು ತವರಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನ್-ಶ್ರೀಲಂಕಾ ನಡುವಣ ಪಂದ್ಯ ರದ್ದು..!
Pak Vs Sl
ಝಾಹಿರ್ ಯೂಸುಫ್
|

Updated on:Nov 13, 2025 | 11:14 AM

Share

ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಇಂದು (ನ.13) ನಡೆಯಬೇಕಿದ್ದ ಎರಡನೇ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಮಂಗಳವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ನಂತರ ಶ್ರೀಲಂಕಾ ತಂಡದ 8 ಆಟಗಾರರು ತವರಿಗೆ ತೆರಳುವುದಾಗಿ ತಿಳಿಸಿದ್ದರು. ಇದೇ ಕಾರಣದಿಂದಾಗಿ ಗುರುವಾರ ರಾವಲ್ಪಿಂಡಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ 2ನೇ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಸರಣಿಗೆ ದಿನಾಂಕ ಮರುನಿಗದಿ:

ಶ್ರೀಲಂಕಾದ ಕೆಲ ಆಟಗಾರರು ತಮ್ಮ ಸುರಕ್ಷತಾ ಕಾಳಜಿಯನ್ನು ಉಲ್ಲೇಖಿಸಿ ತವರಿಗೆ ಮರಳಲು ಬಯಸಿದ್ದಾರೆ. ಇದಾಗ್ಯೂ ಈ ಸರಣಿಯನ್ನು ಮುಂದುವರೆಸುವುದಾಗಿ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಈ ಹಿನ್ನಲೆಯಲ್ಲಿ ಇದೀಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಉಳಿದ ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಿದೆ.

ಅದರಂತೆ ಇಂದು ನಡಯಬೇಕಿದ್ದ 2ನೇ ಏಕದಿನ ಪಂದ್ಯವನ್ನು ಶುಕ್ರವಾರ ಆಡಲಾಗುತ್ತದೆ ಎಂದು ತಿಳಿಸಲಾಗಿದೆ. ಹಾಗೆಯೇ ನವೆಂಬರ್ 15 ಕ್ಕೆ ನಿಗದಿಯಾಗಿದ್ದ ಮೂರನೇ ಮ್ಯಾಚ್ ಭಾನುವಾರ ನಡೆಯಲಿದೆ. ಈ ಮೂಲಕ ಸರಣಿಯನ್ನು ಪೂರ್ಣಗೊಳಿಸಲು ಪಿಸಿಬಿ ಪ್ಲ್ಯಾನ್ ರೂಪಿಸಿದೆ.

ಬದಲಿ ಆಟಗಾರರ ಎಂಟ್ರಿ:

ಶ್ರೀಲಂಕಾ ಏಕದಿನ ತಂಡದಲ್ಲಿದ್ದ ಕೆಲ ಆಟಗಾರರು ಪಾಕ್​ನಲ್ಲಿನ ಉಗ್ರರ ದಾಳಿಯಿಂದ ಭಯಭೀತರಾಗಿ ತವರಿಗೆ ಮರಳಲು ಮುಂದಾಗಿದ್ದಾರೆ. ಯಾವುದೇ ಆಟಗಾರನು ಅರ್ಧದಲ್ಲೇ ಸರಣಿ ತೊರೆದರೂ, ಬದಲಿ ಆಟಗಾರರನ್ನು ಕಳುಹಿಸಿ ಕೊಡುವುದಾಗಿ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಹೀಗಾಗಿಯೇ ಇಂದು (ನ.13) ನಡೆಯಬೇಕಿದ್ದ ಪಂದ್ಯವನ್ನು ಮರು ನಿಗದಿ ಮಾಡಲಾಗಿದೆ.

ಇದನ್ನೂ ಓದಿ: IND vs SA: ಆಯ್ಕೆ ಮಾಡಿ ನಿತೀಶ್ ಕುಮಾರ್ ರೆಡ್ಡಿಯನ್ನು ಕೈ ಬಿಟ್ಟಿದ್ದೇಕೆ?

ಏಕದಿನ ಸರಣಿ ಬಳಿಕ ತ್ರಿಕೋನ ಸರಣಿ:

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಬಳಿಕ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮೂರು ತಂಡಗಳ ನಡುವಣ ತ್ರಿಕೋನ ಟಿ20 ಸರಣಿಯನ್ನು ಆಯೋಜಿಸಲಿದೆ. ಈ ಸರಣಿಯಲ್ಲಿ ಪಾಕಿಸ್ತಾನ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸರಣಿಯ ವೇಳಾಪಟ್ಟಿ ಈ ಕೆಳಗಿನಂತಿದೆ…

ಟ್ರೈ-ಸೀರೀಸ್ 2025 ವೇಳಾಪಟ್ಟಿ:

  • ನವೆಂಬರ್ 17: ಪಾಕಿಸ್ತಾನ್ vs ಝಿಂಬಾಬ್ವೆ (ರಾವಲ್ಪಿಂಡಿ)
  • ನವೆಂಬರ್ 18: ಶ್ರೀಲಂಕಾ vs ಝಿಂಬಾಬ್ವೆ (ರಾವಲ್ಪಿಂಡಿ)
  • ನವೆಂಬರ್ 22: ಪಾಕಿಸ್ತಾನ್ vs ಶ್ರೀಲಂಕಾ (ಲಾಹೋರ್)
  • ನವೆಂಬರ್ 23: ಪಾಕಿಸ್ತಾನ್ vs ಝಿಂಬಾಬ್ವೆ (ಲಾಹೋರ್)
  • ನವೆಂಬರ್ 25: ಶ್ರೀಲಂಕಾ v ಝಿಂಬಾಬ್ವೆ (ಲಾಹೋರ್)
  • ನವೆಂಬರ್ 27: ಪಾಕಿಸ್ತಾನ್ vs ಶ್ರೀಲಂಕಾ (ಲಾಹೋರ್)
  • ನವೆಂಬರ್ 29: ಫೈನಲ್ (ಲಾಹೋರ್)

Published On - 10:24 am, Thu, 13 November 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?