AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024 ರ ವಿಶ್ವಕಪ್​ಗಾಗಿ 3 ಪಂದ್ಯಗಳ ಸರಣಿಯನ್ನು ಒಂದು ವರ್ಷ ಮುಂದೂಡಿದ ಪಾಕಿಸ್ತಾನ..!

ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯೊಂದಿಗೆ ಮಾತುಕತೆ ನಡೆಸಿರುವ ಪಿಸಿಬಿ, ಮುಂದಿನ ವರ್ಷ ಅಂದರೆ ಜನವರಿ 2023ರಲ್ಲಿ ನಡೆಯಬೇಕಿದ್ದ ಟಿ20 ಸರಣಿಯನ್ನು 2024 ಕ್ಕೆ ಮುಂದೂಡಿದೆ.

2024 ರ ವಿಶ್ವಕಪ್​ಗಾಗಿ 3 ಪಂದ್ಯಗಳ ಸರಣಿಯನ್ನು ಒಂದು ವರ್ಷ ಮುಂದೂಡಿದ ಪಾಕಿಸ್ತಾನ..!
ಪಾಕ್ ತಂಡ
TV9 Web
| Edited By: |

Updated on: Oct 20, 2022 | 5:57 PM

Share

ಕಾಂಗರೂಗಳ ನಾಡಲ್ಲಿ ಕ್ರಿಕೆಟ್ ಮಾದರಿಯ ಚುಟುಕು ವಿಶ್ವ ಸಮರ (T20 World Cup 2022) ಆರಂಭವಾಗಿದೆ. ಈ ಮಿನಿ ವಿಶ್ವಕಪ್​ನಲ್ಲಿ ಈಗಾಗಲೇ ಮೊದಲ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು, ಸೂಪರ್ 12 ಸುತ್ತಿನ ಪಂದ್ಯಗಳ ಆರಂಭಕ್ಕೆ ಇನ್ನೇರಡು ದಿನಗಳು ಮಾತ್ರ ಬಾಕಿ ಉಳಿದಿವೆ. ಈ ಸುತ್ತಿನಿಂದ ಎಲ್ಲಾ ತಂಡಗಳು ಪ್ರಶಸ್ತಿಗಾಗಿ ನೈಜ ಅಭಿಯಾನ ಆರಂಭಿಸಲಿದ್ದು, ಇದಕ್ಕಾಗಿ ಎಲ್ಲಾ ತಂಡಗಳು ಸಕಲ ಸಿದ್ದತೆ ಮಾಡಿಕೊಂಡಿವೆ. ಅದರಂತೆ ಪಾಕಿಸ್ತಾನ (Pakistan Cricket Team) ಕೂಡ ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯ ತಲುಪಿದ್ದು, ಈ ತಂಡ ಅ.23 ರಂದು ಟೀಂ ಇಂಡಿಯಾವನ್ನು (India Vs Pakistan) ಎದುರಿಸಲಿದೆ. ಆದರೆ 2023 ರ ವಿಶ್ವಕಪ್​ನಲ್ಲಿ ಇನ್ನೂ ತನ್ನ ಮೊದಲ ಪಂದ್ಯವನ್ನೇ ಆಡದ ಬಾಬರ್ ಪಡೆ, ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್ ತಯಾರಿಗಾಗಿ ಪ್ರಮುಖ ಸರಣಿಯನ್ನು ಬರೋಬ್ಬರಿ ಒಂದು ವರ್ಷ ಮುಂದೂಡಿದೆ.

ಕಳೆದ ವರ್ಷ ಯುಎಇಯಲ್ಲಿ ನಡೆದ 7ನೇ ಆವೃತ್ತಿಯ ವಿಶ್ವಕಪ್​ನಲ್ಲಿ ಸೆಮಿಫೈನಲ್‌ ತಲುಪಿದ್ದ ಪಾಕ್ ತಂಡ ಈ ಬಾರಿಯ ವಿಶ್ವಕಪ್​ನಲ್ಲಿ ಫೈನಲ್​ಗೇರಬಲ್ಲ ಪ್ರಮುಖ ತಂಡಗಳಲ್ಲಿ ಒಂದಾಗಿದೆ. ಅದಾಗ್ಯೂ ಈ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಹೆಚ್ಚಾಗಿ ನಾಯಕ ಬಾಬರ್ ಹಾಗೂ ವಿಕೆಟ್ ಕೀಪರ್ ರಿಜ್ವಾನ್ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ಈ ಇಬ್ಬರು ಫ್ಲಾಪ್ ಆದರೆ ತಂಡ ಸಂಕಷ್ಟಕ್ಕೆ ಸಿಲುಕುವುದಂತೂ ಖಚಿತ. ಆದರೂ ಕೂಡ ಸತತ ಎರಡನೇ ಬಾರಿಗೆ ಕೊನೆಯ 4ರ ಘಟಕ್ಕೆ ತಲುಪುವ ತಂಡಗಳಲ್ಲಿ ಇದು ಕೂಡ ಒಂದು ಎಂದು ಕ್ರಿಕೆಟ್ ಪಂಡಿತರು ಹೇಳುತ್ತಿದ್ದಾರೆ.

ಇದನ್ನೂ ಓದಿ: SL vs NED: ನೆದರ್ಲೆಂಡ್ಸ್ ತಂಡವನ್ನು ಮಣಿಸಿ ಸೂಪರ್ 12 ಸುತ್ತಿಗೆ ಎಂಟ್ರಿಕೊಟ್ಟ ಶ್ರೀಲಂಕಾ ತಂಡ

ವಿಶ್ವಕಪ್‌ ತಯಾರಿಗೆ ಸರಣಿ ಮುಂದೂಡಿಕೆ

ಈ ಬಾರಿಯ ವಿಶ್ವಕಪ್​ ತಯಾರಿಯನ್ನು ಸಂಪೂರ್ಣಗೊಳಿಸಿರುವ ಪಾಕ್ ಮಂಡಳಿ ಇಷ್ಟು ಸಾಲದೆಂಬಂತೆ, ಮುಂದಿನ ಆವೃತ್ತಿಯ ವಿಶ್ವಕಪ್​ಗೆ ತಂಡವನ್ನು ಸಂಪೂರ್ಣವಾಗಿ ಸಿದ್ಧಪಡಿಸಲು ಬಯಸಿದೆ. ಇದೇ ಕಾರಣಕ್ಕೆ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯೊಂದಿಗೆ ಮಾತುಕತೆ ನಡೆಸಿರುವ ಪಿಸಿಬಿ, ಮುಂದಿನ ವರ್ಷ ಅಂದರೆ ಜನವರಿ 2023ರಲ್ಲಿ ನಡೆಯಬೇಕಿದ್ದ ಟಿ20 ಸರಣಿಯನ್ನು 2024 ಕ್ಕೆ ಮುಂದೂಡಿದೆ. ಅಕ್ಟೋಬರ್ 19 ರಂದು ಈ ಬಗ್ಗೆ ಕ್ರಿಕೆಟ್ ವೆಸ್ಟ್ ಇಂಡೀಸ್‌ನೊಂದಿಗೆ ಮಾತನಾಡಿರುವುದಾಗಿ ಹೇಳಿಕೊಂಡಿರುವ ಪಿಸಿಬಿ, ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿಯೊಂದಿಗೆ ಸರಣಿ ಮುಂದೂಡುವ ಬಗ್ಗೆ ಮಾತುಕತೆ ನಡೆಸಿದ್ದು, ವಿಂಡೀಸ್ ಮಂಡಳಿ ಕೂಡ ಇದಕ್ಕೆ ಅಸ್ತು ಎಂದಿದೆ. ಈ ಸರಣಿಯನ್ನು ಮೊದಲು ಜನವರಿ 2023 ರಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಈಗ ಈ ಸರಣಿಯನ್ನು 2024 ರ ಮೊದಲ ಮೂರು ತಿಂಗಳಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿಕೊಂಡಿದೆ.

ಈ ಮೂಲಕ ಪಿಸಿಬಿ ತನ್ನ ಉದ್ದೇಶವನ್ನು ಸ್ಪಷ್ಟಪಡಿಸಿದ್ದು, 2024 ರಲ್ಲಿ ಕೆರಿಬಿಯನ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪಿಸಿಬಿ ವಕ್ತಾರರು ಹೇಳಿದ್ದಾರೆ. ಏಕೆಂದರೆ ಮುಂದಿನ ಆವೃತ್ತಿಯ ಟಿ20 ವಿಶ್ವಕಪ್​ಗೆ ವೆಸ್ಟ್ ಇಂಡೀಸ್ ಮತ್ತು ಅಮೇರಿಕಾ ಆತಿಥ್ಯ ವಹಿಸಲಿದೆ. ಹೀಗಾಗಿ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಈ 3 ಪಂದ್ಯಗಳನ್ನು ಸರಣಿಯನ್ನು ಆಯೋಜನೆ ಮಾಡುವುದರೊಂದಿಗೆ ಟಿ20 ವಿಶ್ವಕಪ್​ಗೆ ತಯಾರಿ ಮಾಡಿಕೊಳ್ಳುವುದು ಪಿಸಿಬಿ ಯೋಜನೆಯಾಗಿದೆ.

2009 ರಿಂದ ಪ್ರಶಸ್ತಿ ಗೆದ್ದಿಲ್ಲ

2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್​ನಲ್ಲಿ ಫೈನಲ್‌ ತಲುಪಿದ್ದ ಪಾಕಿಸ್ತಾನ, ಭಾರತ ವಿರುದ್ಧ ಸೋತು ಪ್ರಶಸ್ತಿಯನ್ನು ಕಳೆದುಕೊಂಡಿತ್ತು. ಆದರೆ 2009ರಲ್ಲಿ ನಡೆದ ಎರಡನೇ ಆವೃತ್ತಿಯ ವಿಶ್ವಕಪ್​ನಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಆದರೆ, ಆ ಬಳಿಕ ಪಾಕಿಸ್ತಾನ ಒಂದೇ ಒಂದು ಪ್ರಶಸ್ತಿ ಗೆದ್ದಿಲ್ಲ. ಕಳೆದ ವರ್ಷ ವಿಶ್ವಕಪ್‌ನಲ್ಲಿ ಅದ್ಭುತ ಆಟ ಪ್ರದರ್ಶಿಸಿ ಸೆಮಿಫೈನಲ್‌ ತಲುಪಿದ್ದ ಪಾಕಿಸ್ತಾನ ತಂಡ ಆಸೀಸ್ ವಿರುದ್ಧ ಸೋತು ನಿರಾಸೆ ಅನುಭವಿಸಿತ್ತು.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ