AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಇವರು ಕ್ಯಾಚ್ ಹಿಡಿಯಲು ಕಲಿಯೋದು ಯಾವಾಗ? ಪಾಕ್ ಅಭಿಮಾನಿಗಳ ಆಕ್ರೋಶ

Pakistan vs Zimbabwe: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 130 ರನ್​ ಕಲೆಹಾಕಿತು. ಈ ಸುಲಭ ಸವಾಲು ಬೆನ್ನತ್ತಿದ ಪಾಕ್ ತಂಡಕ್ಕೆ ಜಿಂಬಾಬ್ವೆ ತಂಡದ ಸಾಂಘಿಕ ಪ್ರದರ್ಶನ ಮುಳುವಾಯಿತು.

VIDEO: ಇವರು ಕ್ಯಾಚ್ ಹಿಡಿಯಲು ಕಲಿಯೋದು ಯಾವಾಗ? ಪಾಕ್ ಅಭಿಮಾನಿಗಳ ಆಕ್ರೋಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 27, 2022 | 10:09 PM

Share

T20 World Cup 2022:  ಟಿ20 ವಿಶ್ವಕಪ್​ನಲ್ಲಿ ಮತ್ತೊಂದು ಅಚ್ಚರಿ ಫಲಿತಾಂಶಕ್ಕೆ ಪರ್ತ್​ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿಯಾಗಿದೆ. ಈ ಬಾರಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದ್ದ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸುವ ಮೂಲಕ ಜಿಂಬಾಬ್ವೆ (Pakistan vs Zimbabwe) ತಂಡವು ಐತಿಹಾಸಿಕ ಗೆಲುವು ತನ್ನದಾಗಿಸಿಕೊಂಡಿದೆ. ವಿಶೇಷ ಎಂದರೆ ಈ ಪಂದ್ಯದಲ್ಲೂ ಪಾಕ್ ಆಟಗಾರರು ಮಾಡಿದ ತಪ್ಪುಗಳೇ ಅವರ ಸೋಲಿಗೆ ಕಾರಣ ಎಂದು ಅಭಿಮಾನಿಗಳು ದೂಷಿಸಲಾರಂಭಿಸಿದ್ದಾರೆ. ಏಕೆಂದರೆ ಟಾಸ್ ಸೋತು ಮೊದಲು ಬೌಲಿಂಗ್ ಮಾಡಿದ ಪಾಕಿಸ್ತಾನ್ ತಂಡವು ಉತ್ತಮ ಫೀಲ್ಡಿಂಗ್ ಮಾಡಿರಲಿಲ್ಲ. ಕಳಪೆ ಫೀಲ್ಡಿಂಗ್ ಮೂಲಕ ಮಾಡಿಕೊಂಡ ತಪ್ಪುಗಳಿಂದಾಗಿಯೇ ಇದೀಗ 1 ರನ್​ನಿಂದ ಪಾಕ್ ಸೋತಿದೆ ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾನ್ಯವಾಗಿ ಕ್ರಿಕೆಟ್​ನಲ್ಲಿ ಕ್ಯಾಚಸ್ ವಿನ್ಸ್ ಮ್ಯಾಚಸ್ ಎಂಬ ಮಾತಿದೆ. ಆದರೆ ಈ ಮಾತು ಪಾಕಿಸ್ತಾನ್ ತಂಡಕ್ಕೆ ಒಪ್ಪುವುದಿಲ್ಲ ಎಂಬುದು ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲೂ ಸಾಬೀತಾಗಿದೆ. ಏಕೆಂದರೆ ಕೈ ಬಂದ 3 ಸುಲಭ ಕ್ಯಾಚ್​ಗಳನ್ನು ಕೈಚೆಲ್ಲುವ ಮೂಲಕ ಇದೀಗ ಬಾಬರ್ ಆಜಂ ಬಳಗ ಪಂದ್ಯವನ್ನೇ ಕೈ ಚೆಲ್ಲಿಕೊಂಡಿದೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಪಂದ್ಯದ 9ನೇ ಓವರ್‌ನಲ್ಲಿ ಶಾಹೀನ್ ಶಾ ಆಫ್ರಿದಿ ಎಸೆತದಲ್ಲಿ ಸೀನ್ ವಿಲಿಯಮ್ಸ್ ಮಿಡ್‌ವಿಕೆಟ್ ಕಡೆಗೆ ಶಾಟ್ ಬಾರಿಸಿದರು. ಅಲ್ಲೇ ಫ್ರಂಟ್ ಫೀಲ್ಡಿಂಗ್​ನಲ್ಲಿದ್ದ ಇಫ್ತಿಕಾರ್ ಅಹ್ಮದ್ ಸುಲಭ ಕ್ಯಾಚ್ ಅನ್ನು ಕೈಚೆಲ್ಲಿದರು. ಇದಾದ ಬಳಿಕ ಶಾದಾಬ್ ಖಾನ್ ಎಸೆದ 14ನೇ ಓವರ್‌ನಲ್ಲಿ ಮತ್ತೊಮ್ಮೆ ವಿಲಿಯಮ್ಸ್ ನೀಡಿದ ಕ್ಯಾಚ್ ಕೈಬಿಟ್ಟರು.

ಇನ್ನು ಪಂದ್ಯದ 19ನೇ ಓವರ್​ನಲ್ಲಿ ರಿಯಾನ್ ಬರ್ಲ್ ನೀಡಿದ ಸುಲಭ ಕ್ಯಾಚ್ ಅನ್ನು ಡೀಪ್ ಮಿಡ್‌ವಿಕೆಟ್‌ನಲ್ಲಿ ಹೈದರ್ ಅಲಿ ಕೈಬಿಟ್ಟರು. ಹೀಗೆ ಕ್ಯಾಚ್​ಗಳನ್ನು ಕೈಚೆಲ್ಲುವ ಮೂಲಕ ಇದೀಗ ಪಾಕಿಸ್ತಾನ್ ಪಂದ್ಯವನ್ನೇ ಕೈಚೆಲ್ಲಿಕೊಂಡಿದೀರಿ ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

View this post on Instagram

A post shared by ICC (@icc)

ಅದರಲ್ಲೂ ಕಳಪೆ ಫೀಲ್ಡಿಂಗ್​ಗೆ ಹೆಸರುವಾಸಿಯಾಗಿರುವ ಪಾಕಿಸ್ತಾನ್ ತಂಡವು ಹಲವು ಮಹತ್ವದ ಪಂದ್ಯಗಳಲ್ಲಿ ಕ್ಯಾಚ್​ಗಳನ್ನು ಕೈಚೆಲ್ಲಿಕೊಂಡಿದೆ. ಕಳೆದ ಟಿ20 ವಿಶ್ವಕಪ್​ನ ಸೆಮಿಫೈನಲ್​ನಲ್ಲಿ ಮ್ಯಾಥ್ಯೂ ವೇಡ್ ನೀಡಿ ಕ್ಯಾಚ್ ಕೈಚೆಲ್ಲಿಕೊಂಡ ಪರಿಣಾಮ ಪಾಕ್ ತಂಡವು ಹೊರಬಿದ್ದಿತ್ತು. ಇದೀಗ ಜಿಂಬಾಬ್ವೆ ವಿರುದ್ದ ಕೂಡ ಕ್ಯಾಚ್​ಗಳನ್ನು ಹಿಡಿಯಲು ವಿಫಲರಾಗಿದ್ದಾರೆ. ಹೀಗಾಗಿಯೇ ಇದೀಗ ಅಭಿಮಾನಿಗಳು ಪಾಕ್ ಆಟಗಾರರು ಕ್ಯಾಚ್ ಹಿಡಿಯುವುದನ್ನು ಕಲಿಯುವುದು ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ.

ಜಿಂಬಾಬ್ವೆಗೆ ಐತಿಹಾಸಿಕ ಜಯ:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 130 ರನ್​ ಕಲೆಹಾಕಿತು. ಈ ಸುಲಭ ಸವಾಲು ಬೆನ್ನತ್ತಿದ ಪಾಕ್ ತಂಡಕ್ಕೆ ಜಿಂಬಾಬ್ವೆ ತಂಡದ ಸಾಂಘಿಕ ಪ್ರದರ್ಶನ ಮುಳುವಾಯಿತು. ಅತ್ಯುತ್ತಮ ಫೀಲ್ಡಿಂಗ್ ಹಾಗೂ ಉತ್ತಮ ಬೌಲಿಂಗ್ ಮೂಲಕ ಗಮನ ಸೆಳೆದ ಜಿಂಬಾಬ್ವೆ ತಂಡವು ಪಾಕ್ ತಂಡವನ್ನು 129 ರನ್​ಗಳಿಗೆ ನಿಯಂತ್ರಿಸುವ ಮೂಲಕ 1 ರನ್​ಗಳ ರೋಚಕ ಜಯ ಸಾಧಿಸಿತು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿ ಪಾಕ್ ಪಡೆಗೆ ಸೋಲುಣಿಸಿದ ಖುಷಿಯಲ್ಲಿ ತೇಲಾಡಿದರು.

ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್