AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs HK: ಏಷ್ಯಾಕಪ್​ನಲ್ಲಿಂದು ಪಾಕಿಸ್ತಾನ- ಹಾಂಗ್​ ಕಾಂಗ್ ಮುಖಾಮುಖಿ: ಗೆದ್ದ ತಂಡ ಭಾರತ ವಿರುದ್ಧ ಸೆಣೆಸಾಟ

Asia Cup 2022: ಪಾಕಿಸ್ತಾನ- ಹಾಂಗ್​ ಕಾಂಗ್ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು ಗೆದ್ದರಷ್ಟೇ ಉಳಿಗಾಲ. ಇಲ್ಲಿ ಸೋತ ತಂಡ ಟೂರ್ನಿಯಿಂದ ಹೊರಬಿದ್ದರೆ ಗೆದ್ದ ತಂಡ ಸೂಪರ್ 4 ಹಂತಕ್ಕೆ ಪ್ರವೇಶ ಪಡೆಯಲಿದೆ.

PAK vs HK: ಏಷ್ಯಾಕಪ್​ನಲ್ಲಿಂದು ಪಾಕಿಸ್ತಾನ- ಹಾಂಗ್​ ಕಾಂಗ್ ಮುಖಾಮುಖಿ: ಗೆದ್ದ ತಂಡ ಭಾರತ ವಿರುದ್ಧ ಸೆಣೆಸಾಟ
Asia Cup 2022
Follow us
TV9 Web
| Updated By: Vinay Bhat

Updated on:Sep 02, 2022 | 8:39 AM

ಏಷ್ಯಾಕಪ್ 2022 ರಲ್ಲಿಂದು (Asia Cup 2022) ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ ಸೋತಿರುವ ಪಾಕಿಸ್ತಾನ ಹಾಗೂ ಹಾಂಗ್ ಕಾಂಗ್ (Pakistan vs Hong Kong) ತಂಡ ಇಂದು ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಖಿ ಆಗಲಿದೆ. ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು ಗೆದ್ದರಷ್ಟೇ ಉಳಿಗಾಲ. ಇಲ್ಲಿ ಸೋತ ತಂಡ ಟೂರ್ನಿಯಿಂದ ಹೊರಬಿದ್ದರೆ ಗೆದ್ದ ತಂಡ ಸೂಪರ್ 4 ಹಂತಕ್ಕೆ ಪ್ರವೇಶ ಪಡೆಯಲಿದೆ. ಸೆಪ್ಟೆಂಬರ್ 4 ರಂದು ಭಾರತ ವಿರುದ್ಧ ಸೆಣೆಸಾಟ ನಡೆಸಲಿದೆ. ಎಲ್ಲಾದರು ಇಂದು ಪಾಕಿಸ್ತಾನ ಜಯ ಸಾಧಿಸಿದರೆ ಇಂಡೋಪಾಕ್ (IND vs PAK) ಕದನ ಮತ್ತೆ ನಡೆಯಲಿದೆ. ಹೀಗಾಗಿ ಇಂದಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.

ಪಾಕಿಸ್ತಾನ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದರೂ ಕಳೆದ ಪಂದ್ಯದಲ್ಲಿ ಭಾರತ ಎದುರು ನಡೆಯಲಿಲ್ಲ. ಸ್ವತಃ ನಾಯಕ ಬಾಬರ್ ಅಜಮ್ ವೈಫಲ್ಯ ಅನುಭವಿಸಿದರು. ರಿಜ್ವಾನ್ 43 ರನ್​ಗಳ ಕೊಡುಗೆ ನೀಡಿದ್ದರಷ್ಟೆ. ಇಫ್ತಿಖರ್ ಅಹ್ಮದ್ 28 ರನ್ ಬಾರಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್​ಗಳೆಲ್ಲ ಬೇಗನೆ ಪೆವಿಲಿಯನ್ ಸೇರಿಕೊಂಡಿದ್ದರು. ಬೌಲಿಂಗ್​ನಲ್ಲಿ ಕೂಡ ನಸೀಂ ಶಾ ಹಾಗೂ ಶಾದಾಬ್ ಖಾನ್ ಬಿಟ್ಟರೆ ಉಳಿದವರೆಲ್ಲ ದುಬಾರಿಯಾಗಿದ್ದರು.

ನಸೀಂ ಶಾ ಕಳೆದ ಭಾರತ ವಿರುದ್ಧದ ಪಂದ್ಯದಲ್ಲಿ ಇಂಜುರಿಗೆ ತುತ್ತಾಗಿದ್ದರು. ಹೀಗಾಗಿ ಇಂದಿನ ಪಂದ್ಯಕ್ಕೆ ಇವರ ಲಭ್ಯತೆ ಬಗ್ಗೆ ಅನುಮಾನವಿದೆ. ಹೀಗಾದಲ್ಲಿ ಇದು ತಂಡಕ್ಕೆ ಮತ್ತೊಂದು ಹೊಡೆತ ಖಚಿತ. ಯಾಕೆಂದರೆ ಏಷ್ಯಾಕಪ್ ಆರಂಭಕ್ಕೂ ಮುನ್ನ ಗಾಯಕ್ಕೆ ತುತ್ತಾಗಿದ್ದ ಶಾಹೀನ್ ಅಫ್ರಿದಿ ಜಾಗಕ್ಕೆ ನಸೀಂ ಬಂದಿದ್ದರು. ಈಗ ನಸೀಂ ಕೂಡ ಹೊರಗುಳಿದರೆ ಪಾಕ್​ಗೆ ಹಿನ್ನಡೆಯಾಗಲಿದೆ. ಬಾಬರ್ ಅಜಮ್ ಮೇಲೆ ಒತ್ತಡ ಕೂಡ ಹೆಚ್ಚಿದ್ದು ಬ್ಯಾಟಿಂಗ್​ನಲ್ಲಿ ಕೊಡುಗೆ ನೀಡಬೇಕಿದೆ.

ಇದನ್ನೂ ಓದಿ
Image
Asia Cup 2022: ಟೀಂ ಇಂಡಿಯಾ ನಾಯಕನಾಗಿ ರೋಹಿತ್​ಗೆ ಹೆಚ್ಚು ದಿನ ಉಳಿಗಾಲವಿಲ್ಲ; ಪಾಕ್ ಕ್ರಿಕೆಟಿಗನ ವಿಶ್ಲೇಷಣೆ
Image
SL vs BAN: ರಣ ರೋಚಕ ಪಂದ್ಯದಲ್ಲಿ ಬಾಂಗ್ಲಾ ಮಣಿಸಿ ಸೂಪರ್- 4 ಹಂತಕ್ಕೆ ಎಂಟ್ರಿಕೊಟ್ಟ ಶ್ರೀಲಂಕಾ
Image
18ನೇ ವಯಸ್ಸಿಗೆ ಆರಂಭ, 26 ವರ್ಷಕ್ಕೆ ಅಂತ್ಯ; ವೃತ್ತಿ ಬದುಕಿಗೆ ವಿದಾಯ ಹೇಳಿದ ಟೀಂ ಇಂಡಿಯಾ ಕ್ರಿಕೆಟರ್
Image
Asia Cup 2022: ತೆಗೆದಿದ್ದು ಒಂದೇ ಒಂದು ವಿಕೆಟ್; ಆದರೂ ಏಷ್ಯಾಕಪ್​ನಲ್ಲಿ ಭಾರತದ ಪರ ದಾಖಲೆ ಬರೆದ ಜಡೇಜಾ..!

ಇತ್ತ ಹಾಂಗ್ ಕಾಂಗ್ ತಂಡವನ್ನು ದುರ್ಬಲ ಎಂದು ಹೇಳಲು ಸಾಧ್ಯವಿಲ್ಲ. ಭಾರತ ವಿರುದ್ಧ ಸೋತಿದ್ದರೂ ಕಠಿಣ ಪೈಪೋಟಿ ನೀಡಿತ್ತು. ಬಾಬರ್ ಹಯಾತ್ ಹಾಗೂ ಕಿಂಚಿತ್ ಶಾ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಇವರಿಗೆ ನಿಜಾಖಾತ್ ಖಾನ್, ಯಾಸೀಂ ಮುರ್ತಾಜ ಹಾಗೂ ಜೀಶನ್ ಅಲಿ ಸಾಥ್ ನೀಡಿದರೆ ಪಾಕಿಸ್ತಾನ ಪರದಾಡುವುದು ಖಚಿತ. ಆದರೆ, ಹಾಂಗ್ ಕಾಂಗ್ ಬೌಲರ್​ಗಳು ದುಬಾರಿಯಾಗುತ್ತಿದ್ದಾರೆ. ಪ್ರಮುಖ ಬೌಲರ್ ಹರೂನ್ ಅರ್ಶದ್ ಕಳೆದ ಪಂದ್ಯದಲ್ಲಿ 3 ಓವರ್​ಗೆ 53 ರನ್ ನೀಡಿದ್ದರು. ಹೀಗಾಗಿ ಬೌಲರ್​ಗಳು ಎದುರಾಳಿಯನ್ನು ಕಟ್ಟಿ ಹಾಕಲು ರಣತಂತ್ರ ರೂಪಿಸಬೇಕಿದೆ.

ಪಂದ್ಯದ ಆರಂಭ ಸಮಯ: ಟಾಸ್ರಾತ್ರಿ 7 ಗಂಟೆಗೆ, ಪಂದ್ಯ ಶುರುರಾತ್ರಿ 7.30 ಕ್ಕೆ

ಮೈದಾನ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂ, ಶಾರ್ಜಾ.

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್​ ಕನ್ನಡ ಸೇರಿದಂತೆ ಸ್ಟಾರ್ ನೆಟ್​ವರ್ಕ್​​ನ ಸ್ಪೋರ್ಟ್ಸ್​ ಚಾನೆಲ್​ಗಳಲ್ಲಿ ನೇರ ಪ್ರಸಾರ ಇರಲಿದೆ. ಹಾಗೆಯೇ ಡಿಸ್ನಿ ಸ್ಟಾರ್ ಆ್ಯಪ್​ನಲ್ಲೂ ಲೈವ್ ವೀಕ್ಷಿಸಬಹುದು.

ಸಂಭಾವ್ಯ ಪ್ಲೇಯಿಂಗ್ XI:

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಇಫ್ತಿಖರ್ ಅಹ್ಮದ್, ಖುಷ್ದಿಲ್ ಶಾ, ಶಾದಾಬ್ ಖಾನ್, ಅಸಿಫ್ ಅಲಿ, ಮೊಹಮ್ಮದ್ ನವಾಜ್, ನಸೀಂ ಶಾ/ಮೊಹಮ್ಮದ್ ಹಸ್ನೇನ್, ಹ್ಯಾರಿಸ್ ರೌಫ್, ಶಾನವಾಜ್ ದಹಾನಿ.

ಹಾಂಗ್ ಕಾಂಗ್: ನಿಜಾಕತ್ ಖಾನ್ (ನಾಯಕ), ಯಾಸೀಂ ಮುರ್ತಾಜಾ, ಬಾಬರ್ ಹಯಾತ್, ಕಿಂಚಿತ್ ಶಾ, ಐಜಾಜ್ ಖಾನ್, ಜೀಶನ್ ಅಲಿ, ಸ್ಕಾಟ್ ಮೆಕೆಚ್ನಿ (ವಿಕೆಟ್ ಕೀಪರ್), ಹರೂನ್ ಅರ್ಶದ್, ಎಹ್ಸಾನ್ ಖಾನ್, ಮೊಹಮ್ಮದ್ ಗಜನ್ಫರ್, ಆಯುಷ್ ಶುಕ್ಲಾ.

Published On - 8:39 am, Fri, 2 September 22

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ