AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾವನ್ನು ಸೋಲಿಸಿದರೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ

India vs Bangladesh: ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ.

ಟೀಮ್ ಇಂಡಿಯಾವನ್ನು ಸೋಲಿಸಿದರೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ
Team India-sehar shinwari
TV9 Web
| Edited By: |

Updated on: Oct 18, 2023 | 6:37 PM

Share

ಏಕದಿನ ವಿಶ್ವಕಪ್​ನ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವು ಭಾರತವನ್ನು ಸೋಲಿಸಿದರೆ ಬಾಂಗ್ಲಾ ಹುಡುಗನೊಂದಿಗೆ ಡೇಟಿಂಗ್ ಮಾಡುವುದಾಗಿ ಪಾಕ್ ನಟಿ ಸೆಹರ್ ಶಿನ್ವಾರಿ ಘೋಷಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ಸೆಹರ್ ಶಿನ್ವಾರಿ, ಇನ್ಶಾ ಅಲ್ಲಾಹ್…ನನ್ನ ಬಂಗಾಳಿ ಬಂಧು (ಬಾಂಗ್ಲಾದೇಶ್ ತಂಡ) ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲಿದ್ದಾರೆ. ಬಾಂಗ್ಲಾ ತಂಡವು ಭಾರತವನ್ನು ಸೋಲಿಸಿದರೆ, ನಾನು ಢಾಕಾಗೆ ಹೋಗುತ್ತೇನೆ. ಅಲ್ಲದೆ ಬಾಂಗ್ಲಾ ಹುಡುಗನೊಂದಿಗೆ ಮೀನು ಭೋಜನವನ್ನು ಮಾಡುತ್ತೇನೆ” ಎಂದಿದ್ದಾರೆ.

ಈ ಮೂಲಕ ಸೆಹರ್ ಶಿನ್ವಾರಿ ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ್ ತಂಡವ ಗೆಲುವನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. ಇಂತಹದೊಂದು ಡೇಟಿಂಗ್ ಆಫರ್ ನೀಡಲು ಮುಖ್ಯ ಕಾರಣ ಪಾಕಿಸ್ತಾನ್ ತಂಡ ಟೀಮ್ ಇಂಡಿಯಾ ವಿರುದ್ಧ ಹೀನಾಯವಾಗಿ ಸೋತಿರುವುದು.

ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಾಕಿಸ್ತಾನ್ ತಂಡವನ್ನು ಭಾರತ ಕೇವಲ 191 ರನ್​ಗಳಿಗೆ ಆಲೌಟ್ ಮಾಡಿತ್ತು.

ಅಲ್ಲದೆ 192 ರನ್​ಗಳ ಗುರಿಯನ್ನು ಕೇವಲ 30.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿತ್ತು. ಈ ಹೀನಾಯ ಸೋಲಿನಿಂದ ಹತಾಶರಾಗಿರುವ ಪಾಕ್ ನಟಿ ಸೆಹರ್ ಶಿನ್ವಾರಿ ಇದೀಗ ಭಾರತದ ವಿರುದ್ಧ ಬಾಂಗ್ಲಾದೇಶ್ ತಂಡದ ಗೆಲುವನ್ನು ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: ಚೇಸ್ ಮಾಸ್ಟರ್…ಸಚಿನ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

ಇಂಡೊ-ಬಾಂಗ್ಲಾ ಪಂದ್ಯ ಯಾವಾಗ?

ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ. ಅತ್ತ ಆಡಿರುವ 3 ಪಂದ್ಯಗಳಲ್ಲಿ 2 ರಲ್ಲಿ ಸೋತಿರುವ ಬಾಂಗ್ಲಾದೇಶ್ ತಂಡವು ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ